ಕರ್ನಾಟಕದಲ್ಲಿ ಕೊರೋನಾ ಮಾಹಾಮಾರಿಗೆ ಮತ್ತೊಂದು ಬಲಿ: ಸಾವಿನ ಸಂಖ್ಯೆ 7ಕ್ಕೇರಿಕೆ

Published : Apr 13, 2020, 09:50 PM ISTUpdated : Apr 13, 2020, 09:52 PM IST
ಕರ್ನಾಟಕದಲ್ಲಿ ಕೊರೋನಾ ಮಾಹಾಮಾರಿಗೆ ಮತ್ತೊಂದು ಬಲಿ: ಸಾವಿನ ಸಂಖ್ಯೆ 7ಕ್ಕೇರಿಕೆ

ಸಾರಾಂಶ

ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದು, ರಾಜ್ಯದ ಜನತೆಯನ್ನು ಆತಂಕಕ್ಕೀಡುಮಾಡಿದೆ. ಈ ನಡುವೆ ಈ ಮಾಹಾಮಾರಿ ಮತ್ತೊಂದು ಬಲಿ ಪಡೆದುಕೊಂಡಿದೆ.

ಕಲಬುರಗಿ, (ಏ.13): ಕರ್ನಾಟಕದಲ್ಲಿ ಮಾಹಾಮಾರಿ ಕೊರೋನಾಗೆ ಮತ್ತೊಂದು ಬಲಿಯಾಗಿದೆ. ಕಲಬುರಗಿಯಲ್ಲಿ 50 ವರ್ಷದ ವ್ಯಕ್ತಿಯ ಪ್ರಾಣವನ್ನು ನುಂಗಿದೆ.

ಕಲಬುರಗಿಯ ESI ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೃದ್ಧ ಇಂದು (ಸೋಮವಾರ) ಸಾವನ್ನಪ್ಪಿದ್ದಾರೆ. ಈ ಮೂಲಕ ಕಲಬುರಗಿಯಲ್ಲಿ ಮಾರಕ ಕೊರೋನಾ ಕಾಯಿಲೆಗೆ 3ನೇ ಸಾವಾಗಿದೆ.  

ಜನ ಮಾತು ಕೇಳದಿದ್ರೆ ಇನ್ನೇನು ಮಾಡೋಕಾಗುತ್ತೆ? ಕಲಬುರಗಿಯಲ್ಲಿ ಹೀಗೆ ಮಾಡೋದೆ!

ಜಮಾತ್‌ಗೆ ಹೋದವರ ಸಂಪರ್ಕದಲ್ಲಿದ್ದ ವ್ಯಕ್ತಿ ಏಪ್ರಿಲ್ 10 ರಂದು ಆಸ್ಪತ್ರೆಗೆ ದಾಖಲಾಗಿದ್ದನು. ಇನ್ನೂ ಈ ಸಾವಿನಿಂದ ರಾಜ್ಯದಲ್ಲಿ ಸಾವಿನ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.

ಕಲಬುರಗಿಯಲ್ಲಿ ಮತ್ತಷ್ಟು ಹೈಅಲರ್ಟ್
ಕೊರೋನಾ ವೈರಸ್ ತಡೆಗಟ್ಟುವ ಮತ್ತು ಜನಸಂದಣಿ ನಿಯಂತ್ರಣದಲ್ಲಿಡಲು ಈಗಾಗಲೇ ಕಲಬುರಗಿ ಜಿಲ್ಲೆಯಾದ್ಯಂತ ಜಾರಿಯಲ್ಲಿರುವ ಸಿ.ಆರ್.ಪಿ.ಸಿ. ಕಾಯ್ದೆ-1973ರ ಕಲಂ 144 ನಿಷೇಧಾಜ್ಞೆ ಯನ್ನು 2020ರ ಏಪ್ರಿಲ್ 30ರವರೆಗೆ ವಿಸ್ತರಿಸಿ ಕಲಬುರಗಿ ಜಿಲ್ಲಾಧಿಕಾರಿ ಶರತ್ ಬಿ. ಅವರು ಸೋಮವಾರ ಆದೇಶ ಹೊರಡಿಸಿದ್ದಾರೆ.

ಕೊರೋನಾ ವೈರಸ್ ಹರಡದಂತೆ ಮುಂಜಾಗೃತಾ ಕ್ರಮವಾಗಿ ಈಗಾಗಲೇ ಕಲಬುರಗಿ ಜಿಲ್ಲೆಯಾದ್ಯಂತ 2020ರ ಮಾರ್ಚ್ 19ರ ರಾತ್ರಿ 8 ಗಂಟೆಯಿಂದ ಏಪ್ರಿಲ್ 14ರ ರಾತ್ರಿ 8 ಗಂಟೆಯವರೆಗೆ ಒಟ್ಟು 26 ದಿನಗಳವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಆದರೆ ಈಗ ಪರಿಸ್ಥಿತಿಯ ಅಗತ್ಯತೆಯನ್ನು ಮನಗಂಡು ಜಿಲ್ಲಾಧಿಕಾರಿಗಳು 2020ರ ಏಪ್ರಿಲ್ 30ರ ವರೆಗೆ ನಿಷೇಧಾಜ್ಞೆಯನ್ನು ವಿಸ್ತರಿಸಿದ್ದಾರೆ.

ನಿಷೇಧಾಜ್ಞೆ ಈ ಸಂದರ್ಭದಲ್ಲಿ ಸಾಮೂಹಿಕವಾಗಿ ಧಾರ್ಮಿಕ ಮತ್ತು ವೈಯಕ್ತಿಕ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ. ಗುಂಪು-ಗುಂಪಾಗಿ ಚಲಿಸುವುದು ಮತ್ತು ಅನಾವಶ್ಯಕವಾಗಿ ಸಂಚರಿಸುವಂತಿಲ್ಲ ಮತ್ತು ಈ ಆದೇಶದಿಂದ ಭಯಪಟ್ಟು ಅಗತ್ಯಕ್ಕಿಂತ ಹೆಚ್ಚು ಅವಶ್ಯ ದಾಸ್ತಾನುಗಳನ್ನು ಸಹ ಖರೀದಿಸುವ ಅಗತ್ಯವಿಲ್ಲ ಎಂದು ಅವರು ಆದೇಶದಲ್ಲಿ ತಿಳಿಸಿದ್ದು, ಈ ಆದೇಶ ಅಗತ್ಯ ಸೇವೆಗಳಿಗೆ ಅನ್ವಯವಾಗುವುದಿಲ್ಲ ಎಂದು ಡಿ.ಸಿ. ಶರತ್ ಬಿ. ಅವರು ಆದೇಶದಲ್ಲಿ ಸ್ಪಷ್ಟಪಡಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!