ರಾಜ್ಯದ 47 ಜೈಲು​ಗ​ಳ​ಲ್ಲಿ ಕೈದಿಗಳಿಗೆ ವಕ್ಕರಿಸಿದ ಕೊರೋನಾ

Kannadaprabha News   | Asianet News
Published : Oct 01, 2020, 07:51 AM IST
ರಾಜ್ಯದ 47 ಜೈಲು​ಗ​ಳ​ಲ್ಲಿ ಕೈದಿಗಳಿಗೆ ವಕ್ಕರಿಸಿದ ಕೊರೋನಾ

ಸಾರಾಂಶ

ಕೊರೋನಾ ಮಹಾಮಾರಿ ವಿಶ್ವದಾದ್ಯಂತ ವಕ್ಕರಿಸಿದ್ದು, ಕೋಟಿ ಕೋಟಿ ಸಂಖ್ಯೆಯಲ್ಲಿ ಜನರು ಮಹಾಮಾರಿಯಿಂದ ಬಳಲುತ್ತಿದ್ದಾರೆ. ಲಕ್ಷಾಂತರ ಮಂದಿಯು ಕೊರೋನಾದಿಂದ ಪ್ರಾಣ ಕಳೆದುಕೊಂಡಿದ್ದರೆ ಸಾವಿರಾರು ಮಂದಿ ಒಟ್ಟಾಗಿರುವ ಜೈಲುಗಳಿಗೂ ಕೊರೋನಾ ವಕ್ಕರಿಸಿದೆ

ಬೆಂಗ​ಳೂರು (ಸೆ.01): ಕೊರೋನಾ ಸೋಂಕು ಎಲ್ಲೆಡೆ ಹಬ್ಬು​ತ್ತಿದ್ದು, ಜೈಲು​ಗ​ಳಲ್ಲಿರುವ ಕೈದಿ​ಗ​ಳನ್ನೂ ಬಿಟ್ಟಿಲ್ಲ. 

ರಾಜ್ಯದ 47 ಜೈಲುಗಳಲ್ಲಿ 668 ಕೈದಿಗಳಿಗೆ ಕೊರೋನಾ ಸೋಂಕು ತಗುಲಿದೆ. ಆ ಪೈಕಿ 585 ಮಂದಿ ಸಂಪೂರ್ಣ ಗುಣಮುಖರಾಗಿದ್ದಾರೆ. 

ಸದ್ಯ 83 ಸೋಂಕಿತ ಕೈದಿಗಳಿಗೆ ಕೋವಿಡ್‌ ಆಸ್ಪತ್ರೆ ಹಾಗೂ ಆರೈಕೆ ಕೇಂದ್ರಗಳಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕಾರಾಗೃಹಗಳಲ್ಲಿ ಐಸೋಲೇಷನ್‌ ವಾರ್ಡ್‌ಗಳನ್ನು ಸಿದ್ಧಪಡಿಸಲಾಗಿದೆ. ಕೈದಿಗಳ ದಟ್ಟಣೆ ಕಡಿಮೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.

ಕರ್ನಾಟಕದಲ್ಲಿ ಮುಂದುವರೆದ ಕೊರೋನಾ ಅಟ್ಟಹಾಸ: 6 ಲಕ್ಷ ಗಡಿದಾಟಿದ ಸೋಂತರ ಸಂಖ್ಯೆ .

ಈಗಾಗಲೇ ರಾಜ್ಯದಲ್ಲಿ ಲಕ್ಷಾಂತರ ಸಂಖ್ಯೆಯ ಜನರಿಗೆ ಮಹಾಮಾರಿ ವಕ್ಕರಿಸಿದೆ. ಸಾವಿರಾರು ಮಂದಿ ಕೊರೋನಾದಿಂದ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. 

ಚೀನಾದಿಂದ ವಿಶ್ವಕ್ಕೆ ಪಸರಿಸಿದ ಕೊರೋನಾ ಎಂಬ ಮಹಾಮಾರಿಯನ್ನು ನಿಯಂತ್ರಣ ಮಾಡಲು ಎಲ್ಲಾ ದೇಶಗಳು ಹರಸಾಹಸವನ್ನೇ ಮಾಡುತ್ತಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ತುಮಕೂರಿನಲ್ಲಿ ಉದ್ಯಮಿಗೆ ಲಂಚಕ್ಕೆ ಬೇಡಿಕೆ; ಇಬ್ಬರು ಭ್ರಷ್ಟ ಅಧಿಕಾರಿಗಳು ಲೋಕಾಯುಕ್ತ ಬಲೆಗೆ!
ಮೈಸೂರು ಅರಮನೆ ವರಹ ದ್ವಾರದ ಮೇಲ್ಛಾವಣಿ ಕುಸಿತ; ಪ್ರವಾಸಿಗರ ಗೈರಿನಿಂದ ತಪ್ಪಿದ ಭಾರೀ ಅನಾಹುತ