
ಬೆಂಗಳೂರು(ಏ.16): ಕೊರೋನಾತಂಕದ ನಡುವೆಯೇ ರಾಜ್ಯದ 1 ಲೋಕಸಭೆ ಮತ್ತು 2 ವಿಧಾನಸಭೆಗಳಿಗೆ ಏ.17ರಂದು ನಡೆಯಲಿರುವ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ ಗುರುವಾರ ತೆರೆ ಬಿದ್ದ ಬೆನ್ನಲ್ಲೇ ಇದೀಗ ಕೆಲವು ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಬಿರುಸಿನ ತಯಾರಿ ನಡೆಯುತ್ತಿದೆ.
ರಾಮನಗರ, ಚನ್ನಪಟ್ಟಣ, ಮಡಿಕೇರಿ, ಭದ್ರಾವತಿ ನಗರಸಭೆ, ಬೇಲೂರು, ವಿಜಯಪುರ ಪುರಸಭೆ, ಬಳ್ಳಾರಿ ಮಹಾನಗರ ಪಾಲಿಕೆಗಳಿಗೆ ಏ.27ರಂದು ಚುನಾವಣೆ ನಡೆಯಲಿದೆ. ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಗುರುವಾರದಂದು ರಾಮನಗರ, ಚನ್ನಪಟ್ಟಣ, ಭದ್ರಾವತಿ, ಬೇಲೂರು, ಬಳ್ಳಾರಿಗಳಲ್ಲಿ ಸಾಮಾಜಿಕ ಅಂತರ ಮರೆತು ಭರ್ಜರಿ ರೋಡ್ ಶೋ, ಮೆರವಣಿಗೆಗಳ ಮೂಲಕ ಶಕ್ತಿ ಪ್ರದರ್ಶನ ನಡೆಸಲಾಗಿದೆ.
10 ನಗರ ಸಂಸ್ಥೆಗಳಿಗೆ ಏ.27ಕ್ಕೆ ಎಲೆಕ್ಷನ್ : ವೇಳಾಪಟ್ಟಿ ಪ್ರಕಟ
ಹೆಚ್ಚಿನ ನಾಮಪತ್ರ ಸಲ್ಲಿಕೆ ಕೇಂದ್ರಗಳಲ್ಲಿ ಜನಜಂಗುಳಿ, ನೂಕುನುಗ್ಗಲುಗಳಾದ ಘಟನೆಗಳೂ ವರದಿಯಾಗಿವೆ. ಈ ವೇಳೆ ಅಭ್ಯರ್ಥಿಗಳು ಮತ್ತು ಬೆಂಬಲಿಗರು ಕೋವಿಡ್ ನಿಯಮಾವಳಿಯನ್ನು ಸಂಪೂರ್ಣ ಗಾಳಿಗೆ ತೂರಿದ್ದರು. ಹೆಚ್ಚಿನವರು ಮಾಸ್ಕ್ ಕೂಡ ಧರಿಸಿರಲಿಲ್ಲ. ರಾಮನಗರ, ಚನ್ನಪಟ್ಟಣಗಳಲ್ಲಿ ನಾಮಪತ್ರ ಸಲ್ಲಿಕೆಗೆ ಅಭ್ಯರ್ಥಿಯೊಂದಿಗೆ ನಾಲ್ಕೈದು ಮಂದಿ ಮಾತ್ರ ಬಂದರೆ ಸಾಕು ಎಂದು ಸೂಚಿಸಿದಾಗ ಪೊಲೀಸರು ಮತ್ತು ಅಭ್ಯರ್ಥಿಗಳ ಬೆಂಬಲಿಗರ ಮಧ್ಯೆ ವಾಗ್ವಾದಗಳಾದ ಘಟನೆಗಳು ನಡೆದಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ