ತಗ್ಗಿದ ಕೊರೋನಾ ಹಾವಳಿ: ರಾಜ್ಯದ ಜನತೆಗೆ ಕೊಂಚ ರಿಲೀಫ್

Published : Dec 21, 2020, 08:55 PM IST
ತಗ್ಗಿದ ಕೊರೋನಾ ಹಾವಳಿ: ರಾಜ್ಯದ ಜನತೆಗೆ ಕೊಂಚ ರಿಲೀಫ್

ಸಾರಾಂಶ

ನಿತ್ಯ ರಾಜ್ಯದಲ್ಲಿ ಹೊಸ​ ಕೇಸ್​ಗಳ ಸಂಖ್ಯೆ ಕೂಡ ಕಡಿಮೆ ಆಗುತ್ತಿರುವುದು ಜನರಲ್ಲಿ ಹೊಸ ಆಶಾಭಾವನೆ ಮೂಡಿಸಿದೆ.

ಬೆಂಗಳೂರು, (ಡಿ.21): ರಾಜ್ಯದಲ್ಲಿ ಮಿತಿಮೀರಿದ್ದ ಕೊರೋನಾ ಹಾವಳಿ ನಿಧಾನವಾಗಿ ತಗ್ಗತ್ತಿದೆ. ಕಳೆದ ಕೆಲ ವಾರಗಳಿಂದ ರಾಜ್ಯದಲ್ಲಿ ಸಾವಿರದೊಳಗೆ ಹೊಸ ಪ್ರಕರಣ ಪತ್ತೆ ಆಗುತ್ತಿದೆ.

ರಾಜ್ಯದಲ್ಲಿ ಇಂದು (ಸೋಮವಾರ) 722 ಜನರಿಗೆ ಕೊರೋನಾ ಸೋಂಕು ತಗುಲಿದೆ. ಈ ಮೂಲಕ ಸೋಂಕಿತರ ಸಂಖ್ಯೆ 9,10,241 ಕ್ಕೆ ಏರಿಕೆಯಾಗಿದೆ.

ವೇಗವಾಗಿ ಹರಡುವ ಹೊಸ ವೈರಸ್ ಪತ್ತೆ: ಎಚ್ಚರಿಕೆ ವಹಿಸಲು ಸಚಿವರು ಮನವಿ

 ಕಳೆದ 24 ಗಂಟೆಗಳಲ್ಲಿ 7 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ 12016 ಕ್ಕೆ ಏರಿಕೆಯಾಗಿದೆ. ಇನ್ನು ಸೋಮವಾರ 1261 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇದುವರೆಗೆ 884205 ಮಂದಿ ಗುಣಮುಖರಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸದ್ಯ 14,001 ಸಕ್ರಿಯ ಪ್ರಕರಣಗಳಿವೆ.

ಬೆಂಗಳೂರು ನಗರದಲ್ಲಿ  363 ಕೊರೋನಾ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 369701 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ  5 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ 4273ಕ್ಕೇರಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ತಿಳಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ತುಮಕೂರಿನಲ್ಲಿ ಉದ್ಯಮಿಗೆ ಲಂಚಕ್ಕೆ ಬೇಡಿಕೆ; ಇಬ್ಬರು ಭ್ರಷ್ಟ ಅಧಿಕಾರಿಗಳು ಲೋಕಾಯುಕ್ತ ಬಲೆಗೆ!
ಮೈಸೂರು ಅರಮನೆ ವರಹ ದ್ವಾರದ ಮೇಲ್ಛಾವಣಿ ಕುಸಿತ; ಪ್ರವಾಸಿಗರ ಗೈರಿನಿಂದ ತಪ್ಪಿದ ಭಾರೀ ಅನಾಹುತ