ಕರ್ನಾಟಕದಲ್ಲಿ ಮಂಗಳವಾರ ಕೂಡ ಕೊರೋನಾ ಅಬ್ಬರ: ಗುಣಮುಖ ಸಂಖ್ಯೆಯಲ್ಲೂ ಹೆಚ್ಚಳ

Published : Sep 08, 2020, 09:53 PM IST
ಕರ್ನಾಟಕದಲ್ಲಿ  ಮಂಗಳವಾರ ಕೂಡ ಕೊರೋನಾ ಅಬ್ಬರ: ಗುಣಮುಖ ಸಂಖ್ಯೆಯಲ್ಲೂ ಹೆಚ್ಚಳ

ಸಾರಾಂಶ

ಕರ್ನಾಟಕದಲ್ಲಿ ಮಂಗಳವಾರ ಕೂಡ ಕೊರೋನಾ ಅಬ್ಬರ ಮುಂದುವರೆದಿದೆ. ಆದ್ರೆ, ಹೊಸ ಕೇಸಿನ ಸಂಖ್ಯೆ ಮತ್ತು ಗುಣಮುಖರಾದವರ ಸಂಖ್ಯೆ ಸರಿಸಮವಾಗಿದೆ.

ಬೆಂಗಳೂರು, (ಸೆ.08): ರಾಜ್ಯದಲ್ಲಿ ಇಂದು (ಮಂಗಳವಾರ)  7866 ಜನರಲ್ಲಿ ಸೋಂಕು ಪತ್ತೆಯಾಗಿದೆ. ಮಹಾಮಾರಿಗೆ ಇಂದು 146 ಜನ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 412190 ಕ್ಕೇರಿಕೆಯಾದರೆ, ಒಟ್ಟು ಸಾವಿನ ಸಂಖ್ಯೆ 6680ಕ್ಕೆ ಏರಿಕೆಯಾಗಿದೆ.

ಇಂದು ಬೆಂಗಳೂರಿನಲ್ಲಿ 3102 ಜನರಿಗೆ ಕೊರೋನಾ ತಗುಲಿದ್ದು, 55 ಮಂದಿ ಪ್ರಾಣ ಬಿಟ್ಟಿದ್ದಾರೆ. ಮಹಾನಗಿರಿಯೊಂದರಲ್ಲೇ ಈವರೆಗೆ 153625 ಮಂದಿಗೆ ಕೊರೋನಾ ತಗುಲಿದೆ. ಬೆಂಗಳೂರಲ್ಲಿ ಈವರೆಗೆ 2266 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ.

ಸಿಸಿಬಿ ವಶಕ್ಕೆ ನಟಿ ಸಂಜನಾ, ಸರಳ ದಸರಾಗೆ ತೀರ್ಮಾನ; ಸೆ.8ರ ಟಾಪ್ 10 ಸುದ್ದಿ!

ಕಳೆದ 24 ಗಂಟೆಗಳಲ್ಲಿ 7803 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದು, ಈವರೆಗೆ ಒಟ್ಟು 308573 ಜನ ಗುಣಮುಖರಾಗಿದ್ದಾರೆ. ಉಳಿದಂತೆ 96918 ಸಕ್ರಿಯ ಕೇಸ್​ಗಳಿವೆ. ಇದರಲ್ಲಿ 784 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿಯಂತೆ 67443 ಮಂದಿಗೆ ಕೊರೋನಾ ಪರೀಕ್ಷೆ ನಡೆಸಲಾಗಿದ್ದು, ರಾಜ್ಯದಲ್ಲಿ ಈವರೆಗೆ ಒಟ್ಟು 3461119 ಮಂದಿಗೆ ಕೊರೋನಾ ಟೆಸ್ಟ್ ಮಾಡಲಾಗಿದೆ.

ಜಿಲ್ಲಾವಾರು ಕೊರೋನಾ ಕೇಸ್

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಡಿಕೆಸು ಹೆಸರಿನಲ್ಲಿ ಕೋಟ್ಯಂತರ ವಂಚನೆ ಪ್ರಕರಣ.. 'ಬಂಗಾರಿ' ಕೇಸ್‌ನಲ್ಲಿ ನಟ ಧರ್ಮಗೆ ಧ್ವನಿ ಪರೀಕ್ಷೆ?
ಬೆಳಗಾವಿಯ 31 ಕೃಷ್ಣಮೃಗ ಸಾವಿಗೆ ಸಿಬ್ಬಂದಿ ನಿರ್ಲಕ್ಷ್ಯ ಕಾರಣವಲ್ಲ: ಸಚಿವ ಈಶ್ವರ್ ಖಂಡ್ರೆ