
ಬೆಂಗಳೂರು(ಮಾ.15): ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಗೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ ರಾಜ್ಯ ಸರ್ಕಾರಿ ನೌಕರರ ಬಹು ದಿನದ ಬೇಡಿಕೆಯಾದ 7ನೇ ವೇತನ ಆಯೋಗದ ವರದಿ ಮಾ.16 ರಂದು ಸರ್ಕಾರಕ್ಕೆ ಸಲ್ಲಿಕೆಯಾಗಲಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಶನಿವಾರ ಬೆಳಿಗ್ಗೆ 10 ಗಂಟೆಗೆ ನಿವಾಸ ಕಾವೇರಿಯಲ್ಲಿ ಭೇಟಿ ಮಾಡಲಿರುವ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ನೇತೃತ್ವದ ನಿಯೋಗ, ರಾಜ್ಯ 7ನೇ ವೇತನ ಆಯೋಗದ ವರದಿಯನ್ನು ಸಲ್ಲಿಸಲಿದೆ ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ಸ್ಪಷ್ಟಪಡಿಸಿವೆ.
ರಾಜ್ಯ ಸರ್ಕಾರಿ ನೌಕರರಿಗೆ ನೀಡಿದ್ದ ಓಪಿಎಸ್ ಜಾರಿಗೆ ಬದ್ಧ: ಸಚಿವ ಸಂತೋಷ್ ಲಾಡ್
ಶನಿವಾರ ಮಧ್ಯಾಹ್ನ 3 ಗಂಟೆಗೆ ಕೇಂದ್ರ ಮುಖ್ಯ ಚುನಾವಣಾ ಆಯುಕ್ತರು ಮಹತ್ವದ ಪತ್ರಿಕಾಗೋಷ್ಠಿ ಕರೆದಿದ್ದು ಲೋಕಸಭಾ ಚುನಾವಣೆಯ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ. ಒಂದೊಮ್ಮೆ ದಿನಾಂಕ ಘೋಷಣೆಯಾದರೆ ತಕ್ಷಣದಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರಲಿದೆ. ಮತ್ತೊಂದೆಡೆ, ಆಯೋಗದ ಅವಧಿ ಮಾ.15ಕ್ಕೇ ಮುಕ್ತಾಯ ಆಗಿರುವುದರಿಂದ ಶನಿವಾರವೇ ವರದಿ ಸಲ್ಲಿಕೆಯಾಗಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ