ರಾಧಿಕಾ ಮಾತ್ರವಲ್ಲದೆ, ಇನ್ನೂ 8 ನಟಿಯರಿಗೆ ಯುವರಾಜ್‌ ನಂಟು

Published : Jan 08, 2021, 09:16 AM IST
ರಾಧಿಕಾ ಮಾತ್ರವಲ್ಲದೆ, ಇನ್ನೂ 8 ನಟಿಯರಿಗೆ ಯುವರಾಜ್‌ ನಂಟು

ಸಾರಾಂಶ

ರಾಧಿಕಾ ಕುಮಾರಸ್ವಾಮಿ ರೀತಿ ಇನ್ನಷ್ಟುನಟಿಯರಿಗೆ ಹಣ | ತನಿಖೆಯಲ್ಲಿ ಪತ್ತೆ: ನಟಿಯರಿಗೆ ಈಗ ಸಿಸಿಬಿ ತನಿಖೆ ಬಿಸಿ | ನಟಿಯರನ್ನು ಮುಂದಿಟ್ಟು ರಾಜಕಾರಣಿಗಳಿಗೆ ಗಾಳ?

ಬೆಂಗಳೂರು(ಜ.08): ಚಲನಚಿತ್ರ ನಟಿ ರಾಧಿಕಾ ಕುಮಾರಸ್ವಾಮಿ ಜತೆ ಹಣಕಾಸು ವ್ಯವಹಾರ ಬಹಿರಂಗಗೊಂಡ ಬಳಿಕ ಈಗ ವಂಚಕ ಯುವರಾಜ್‌ ಸ್ನೇಹ ವಲಯದಲ್ಲಿ ಮತ್ತೆ ಎಂಟಕ್ಕೂ ಹೆಚ್ಚು ನಟಿಯರ ಹೆಸರು ಕೇಳಿಬಂದಿದ್ದು, ಆ ನಟಿಮಣಿಯರಿಗೆ ಕೂಡ ಸಿಸಿಬಿ ತನಿಖೆಯ ನಡುಕ ಹುಟ್ಟಿದೆ ಎಂದು ತಿಳಿದುಬಂದಿದೆ.

ಚಲನಚಿತ್ರಗಳಲ್ಲಿ ಅವಕಾಶ ಕೊಡಿಸುವ ನೆಪದಲ್ಲಿ ನಟಿಯರಿಗೆ ಗಾಳ ಹಾಕಿರುವ ಯುವರಾಜ್‌, ಆ ನಟಿಯರನ್ನು ಮುಂದಿಟ್ಟು ರಾಜಕಾರಣಿಗಳನ್ನು ಸೆಳೆದಿರಬಹುದು ಎಂಬ ಮಾತುಗಳು ಕೇಳಿಬಂದಿವೆ. ಅಲ್ಲದೆ, ನಟಿಯರ ಖಾತೆಗಳಿಗೆ ಆರೋಪಿಯಿಂದ ಲಕ್ಷ ಲಕ್ಷ ರು. ಹಣ ಸಂದಾಯವಾಗಿದೆ ಎಂಬ ಅನುಮಾನಗಳು ಮೂಡಿವೆ.

ಪ್ರಭಾವಿ ರಾಜಕಾರಣಿ ಜತೆ ರಾಧಿಕಾ ಕುಮಾರಸ್ವಾಮಿ ನಂಟು...?

ಜ್ಯೋತಿಷ್ಯ ಹಾಗೂ ರಾಜಕೀಯ ವಲಯದಲ್ಲಿ ಪ್ರಭಾವಿ ವ್ಯಕ್ತಿ ಎಂದೂ ಬಿಂಬಿಸಿಕೊಂಡಿದ್ದ ಆರೋಪಿಯು ಶಾಸ್ತ್ರ ಹೇಳುವ ನೆಪದಲ್ಲಿ ಚಿತ್ರರಂಗದವರ ಸ್ನೇಹ ಮಾಡಿದ್ದಾನೆ. ಬಳಿಕ ಕೆಲವು ನಿರ್ಮಾಪಕರು, ನಿರ್ದೇಶಕರು ಹಾಗೂ ಕಲಾವಿದರಿಗೆ ಚಲನಚಿತ್ರ ನಿರ್ಮಿಸುವುದಾಗಿ ಹೇಳಿ ಅವರ ವಿಶ್ವಾಸ ಗಳಿಸಿದ್ದಾನೆ. ಹೀಗೆ ಚಿತ್ರರಂಗದ ನಂಟು ಬೆಳೆದ ಬಳಿಕ ಯುವರಾಜ್‌, ನಟಿಯರೊಂದಿಗೆ ಒಡನಾಟ ಬೆಳೆಸಿಕೊಂಡಿದ್ದಾನೆ. ಕೆಲವರಿಗೆ ಪ್ರಭಾವ ಬೆಳೆಸಿ ಸಿನಿಮಾಗಳಲ್ಲಿ ನಟನೆಗೆ ಅವಕಾಶ ಸಹ ಕೊಡಿಸಿರುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಈ ಪ್ರಕರಣದ ತನಿಖೆ ವೇಳೆ ಆರೋಪಿಯ ಮೊಬೈಲ್‌ ಕರೆಗಳು ಹಾಗೂ ಬ್ಯಾಂಕ್‌ ದಾಖಲೆಗಳನ್ನು ಪರಿಶೀಲಿಸಿದಾಗ ರಾಜಕೀಯ ನಾಯಕರು, ಉದ್ಯಮಿಗಳು, ನಿವೃತ್ತ-ಹಾಲಿ ಸರ್ಕಾರಿ ಅಧಿಕಾರಿಗಳು, ಚಲನಚಿತ್ರ ನಟರು ಸೇರಿದಂತೆ ಗಣ್ಯ ವ್ಯಕ್ತಿಗಳ ಜತೆ ಹಣಕಾಸು ವ್ಯವಹಾರ ಬಯಲಾಗಿದೆ. ಈ ಮಾಹಿತಿ ಆಧರಿಸಿ ತನಿಖೆ ಮುಂದುವರೆಸಿದಾಗ ಚಲನಚಿತ್ರ ನಟಿಯರ ಖಾತೆಗಳಿಗೆ ಯುವರಾಜ್‌ ಹಣ ವರ್ಗಾಯಿಸಿರುವ ಮಾಹಿತಿ ಸಿಕ್ಕಿದೆ. ಇದರ ಮೊದಲ ಹಂತವಾಗಿ ರಾಧಿಕಾ ಕುಮಾರಸ್ವಾಮಿ ಹಾಗೂ ಅವರ ಸೋದರ ರವಿರಾಜ್‌ ಅವರಿಗೆ ಚುರುಕು ಮುಟ್ಟಿಸಿರುವ ಸಿಸಿಬಿ, ಮುಂದಿನ ಹಂತದಲ್ಲಿ ಇತರೆ ನಟಿಯರನ್ನು ವಿಚಾರಣೆಗೆ ಕರೆಸುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Karnataka News Live: BBK 12 - ಬಿಗ್‌ಬಾಸ್ ಕೊಟ್ಟ ಚೆಕ್‌ಮೆಟ್‌ಗೆ ಮಕ್ಕರ್ ಆದ ಗಿಲ್ಲಿ; ಚಮಕ್ ಕೊಟ್ಟ ರಕ್ಷಿತಾ, ಇತ್ತ ಕಾವ್ಯಾಗೆ ತಳಮಳ
ನಮ್ಮವರಿಗೆ ಇಲ್ಲದ ಪರಿಹಾರ ಅವರಿಗೆ ಏಕೆ : ಬಿಜೆಪಿ ಆಕ್ರೋಶ