ಕರ್ನಾಟಕದಲ್ಲಿ ನಿಲ್ಲದ ಕೊರೋನಾ ಅಬ್ಬರ: ಇಲ್ಲಿದೆ ಭಾನುವಾರದ ಲೆಕ್ಕಾಚಾರ

Published : Sep 20, 2020, 07:41 PM IST
ಕರ್ನಾಟಕದಲ್ಲಿ ನಿಲ್ಲದ ಕೊರೋನಾ ಅಬ್ಬರ: ಇಲ್ಲಿದೆ ಭಾನುವಾರದ ಲೆಕ್ಕಾಚಾರ

ಸಾರಾಂಶ

ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ ಕೊರೋನಾ ಸೋಂಕಿತರಿಗಿಂತ ಗುಣಮುಖರಾದವರ ಸಂಖ್ಯೆಯೇ ಹೆಚ್ಚಾಗಿದೆ. ಹಾಗಾದ್ರೆ, ಇಂದಿನ ಅಂಕಿ-ಅಂಶ ಈ ಕೆಳಗಿನಂತಿದೆ ನೋಡಿ.

ಬೆಂಗಳೂರು, (ಸೆ.20): ರಾಜ್ಯದಲ್ಲಿ ಇಂದು (ಭಾನುವಾರ) 8191 ಜನರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, 101 ಮಂದಿ ಈ ಮಹಾಮಾರಿಗೆ ಬಲಿಯಾಗಿದ್ದಾರೆ.  

ಇನ್ನು ಕಳೆದ 24 ಗಂಟೆಗಳಲ್ಲಿ 8611 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನಿಡಿದೆ.

ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 5,19,537ಕ್ಕೆ ಏರಿಕೆಯಾಗಿದೆ. ಇವರಲ್ಲಿ ಇದುವರೆಗೆ 4,13,452 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಕೊರೋನಾ ಹೋರಾಟ: ಮೊಝಂಬಿಕ್‌ಗೆ ಭಾರತದಿಂದ 13 ಬಗೆಯ ಔಷಧ ನೆರವು

ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪ್ರಸ್ತುತ 98,043 ಸಕ್ರೀಯ ಕೇಸ್‌ಗಳಿದ್ದು, ಕೊರೋನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 8023ಕ್ಕೇರಿದೆ.

ಜಿಲ್ಲಾವಾರು ಕೊರೋನಾ ಕೇಸ್
ಬಾಲಕೋಟೆ - 90, ಬಳ್ಳಾರಿ - 298, ಬೆಳಗಾವಿ - 151, ಬೆಂಗಳೂರು ಗ್ರಾಮಾಂತರ - 179, ಬೆಂಗಳೂರು ನಗರ - 3322, ಬೀದರ್ - 77, ಚಾಮರಾಜನಗರ - 69, ಚಿಕ್ಕಬಳ್ಳಾಪುರ - 81, ಚಿಕ್ಕಮಗಳೂರು - 129, ಚಿತ್ರದುರ್ಗ - 0, ದಕ್ಷಿಣ ಕನ್ನಡ - 380, ದಾವಣಗೆರೆ - 130, ಧಾರವಾಡ - 305, ಗದಗ - 75, ಹಾಸನ - 277, ಹಾವೇರಿ - 44, ಕಲಬುರ್ಗಿ - 136, ಕೊಡಗು - 32, ಕೋಲಾರ - 105, ಕೊಪ್ಪಳ - 337, ಮಂಡ್ಯ - 165, ಮೈಸೂರು - 481, ರಾಯಚೂರು - 132, ರಾಮನಗರ - 57, ಶಿವಮೊಗ್ಗ - 295, ತುಮಕೂರು - 244, ಉಡುಪಿ - 295, ಉತ್ತರ ಕನ್ನಡ - 108, ವಿಜಯಪುರ - 81 ಮತ್ತು ಯಾದಗಿರಿ - 116 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ದಶದಿಕ್ಕುಗಳಿಂದ ಕರ್ನಾಟಕಕ್ಕೆ ಡ್ರಗ್ಸ್‌ ಗಂಡಾಂತರ
Karnataka News Live: ರಾಮನಗರದ ರೇವಣಸಿದ್ದೇಶ್ವರ ಬೆಟ್ಟದಲ್ಲಿ ದುರಂತ - ದೇವರ ದರ್ಶನಕ್ಕೂ ಮುನ್ನವೇ ಕಂದಕ ಸೇರಿದ ಭಕ್ತ!