ಕೊರೋನಾ ಮತ್ತೆ ಶುರುವಾಯ್ತಾ ಅಬ್ಬರ : ಎಚ್ಚರ ವಹಿಸಿ

Kannadaprabha News   | Asianet News
Published : Oct 16, 2020, 07:29 AM IST
ಕೊರೋನಾ ಮತ್ತೆ ಶುರುವಾಯ್ತಾ ಅಬ್ಬರ : ಎಚ್ಚರ ವಹಿಸಿ

ಸಾರಾಂಶ

ರಾಜ್ಯದಲ್ಲಿ ಕೊರೋನಾಬ್ಬರ ಮುಂದುವರಿದಿದೆ. ಮತ್ತೆ ಸೋಂಕಿನ ಸಂಖ್ಯೆಯಲ್ಲಿಯೂ ಏರಿಕೆಯಾಗಿದೆ. ಜನರು ಎಚ್ಚರ ವಹಿಸುವ ಅಗತ್ಯವಿದೆ. 

ಬೆಂಗಳೂರು (ಅ.16):  ರಾಜ್ಯದಲ್ಲಿ ಕೊರೋನಾ ಸೋಂಕಿನ ಅಬ್ಬರ ಮುಂದುವರಿದಿದ್ದು, ಗುರುವಾರ 8,477 ಕೊರೋನಾ ಸೋಂಕಿನ ಹೊಸ ಪ್ರಕರಣಗಳು ಪತ್ತೆಯಾಗಿವೆ. ಸೋಂಕಿನಿಂದ 85 ಮಂದಿ ಮೃತರಾಗಿದ್ದಾರೆ. 8,841 ಮಂದಿ ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಸದ್ಯ 1.13 ಲಕ್ಷ ಸಕ್ರಿಯ ಪ್ರಕರಣಗಳಿದ್ದು, ಈ ಪೈಕಿ 939 ಮಂದಿ ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈವರೆಗೆ ಒಟ್ಟು 7.43 ಲಕ್ಷ ಜನರಲ್ಲಿ ಸೋಂಕು ಕಾಣಿಸಿಕೊಂಡಿದ್ದು ಈ ಪೈಕಿ 6.20 ಲಕ್ಷ ಮಂದಿ ಗುಣಮುಖರಾಗಿದ್ದಾರೆ.

ಕೊರೋನಾ ಲಸಿಕೆ ಹಾಗೂ ಸಂಶೋಧನೆ ಕುರಿತು ಪರಿಶೀಲನಾ ಸಭೆ ನಡೆಸಿದ ಪ್ರಧಾನಿ ಮೋದಿ! ..

ರಾಜ್ಯದಲ್ಲಿ ಈವರೆಗೆ ಒಟ್ಟು 10,283 ಮಂದಿ ಕೊರೋನಾ ಸೋಂಕಿನಿಂದಾಗಿ ಪ್ರಾಣ ಕಳೆದುಕೊಂಡಿದ್ದಾರೆ. ಗುರುವಾರ 1.04 ಲಕ್ಷ ಕೊರೋನಾ ಪರೀಕ್ಷೆಗಳು ನಡೆದಿದೆ. ಒಟ್ಟು 63.55 ಲಕ್ಷ ಪರೀಕ್ಷೆಗಳನ್ನು ಈವರೆಗೆ ನಡೆಸಲಾಗಿದೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ 45, ಚಿಕ್ಕಬಳ್ಳಾಪುರ 4, ಶಿವಮೊಗ್ಗ, ತುಮಕೂರು, ಬಳ್ಳಾರಿ ಮತ್ತು ಬೆಳಗಾವಿಯಲ್ಲಿ ತಲಾ 3, ಚಾಮರಾಜನಗರ, ದಕ್ಷಿಣ ಕನ್ನಡ, ಧಾರವಾಡ, ಕೋಲಾರ, ಮಂಡ್ಯ, ಮೈಸೂರು, ಉಡುಪಿ, ಉತ್ತರ ಕನ್ನಡ ಮತ್ತು ವಿಜಯಪುರದಲ್ಲಿ ತಲಾ 2, ರಾಯಚೂರು, ಕೊಪ್ಪಳ, ಕಲಬುರಗಿ, ದಾವಣಗೆರೆ, ಬೀದರ್‌ ಮತ್ತು ಬಾಗಲಕೋಟೆಯಲ್ಲಿ ತಲಾ ಒಬ್ಬರು ಸೋಂಕಿನಿಂದ ಪ್ರಾಣ ಕಳೆದುಕೊಂಡಿದ್ದಾರೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ 3,788, ಬೆಂಗಳೂರು ಗ್ರಾಮಾಂತರ 454, ಹಾಸನ 440, ಮೈಸೂರು ಮತ್ತು ಬೆಳಗಾವಿಯಲ್ಲಿ ತಲಾ 303, ದಕ್ಷಿಣ ಕನ್ನಡ 301, ಬಳ್ಳಾರಿ 282, ತುಮಕೂರು 252, ಮಂಡ್ಯ ಮತ್ತು ಚಿಕ್ಕಬಳ್ಳಾಪುರ 230, ಉಡುಪಿ 179, ಶಿವಮೊಗ್ಗ 169, ಧಾರವಾಡ 164, ವಿಜಯಪುರ 160, ಚಿತ್ರದುರ್ಗ 159, ಕೊಡಗು 158, ಬಾಗಲಕೋಟೆ 133, ದಾವಣಗೆರೆ 103, ಚಿಕ್ಕಮಗಳೂರು 92, ಚಾಮರಾಜನಗರ 85, ಕೋಲಾರ 81, ರಾಮನಗರ 79, ಕೊಪ್ಪಳ 76, ರಾಯಚೂರು 59, ಉತ್ತರ ಕನ್ನಡ 57, ಕಲಬುರಗಿ 42, ಹಾವೇರಿ 41, ಗದಗ 40, ಬೀದರ್‌ 10, ಯಾದಗಿರಿ ಜಿಲ್ಲೆಯಲ್ಲಿ 7 ಮಂದಿಯಲ್ಲಿ ಕೊರೋನಾ ಸೋಂಕಿರುವುದು ಧೃಢವಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
ದ್ವೇಷ ಭಾಷಣ ತಡೆಗೆ ಕಾನೂನು ಯತ್ನ: ಕಾಂಗ್ರೆಸ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಆಕ್ರೋಶ