ಕರ್ನಾಟಕದಲ್ಲಿ ಕೊರೋನಾ ಮತ್ತಷ್ಟು ಇಳಿಕೆ: ಇಲ್ಲಿದೆ ಸೆ.07ರ ಅಂಕಿ-ಸಂಖ್ಯೆ

Published : Sep 07, 2021, 07:43 PM ISTUpdated : Sep 07, 2021, 07:47 PM IST
ಕರ್ನಾಟಕದಲ್ಲಿ ಕೊರೋನಾ ಮತ್ತಷ್ಟು ಇಳಿಕೆ: ಇಲ್ಲಿದೆ ಸೆ.07ರ ಅಂಕಿ-ಸಂಖ್ಯೆ

ಸಾರಾಂಶ

* ಕರ್ನಾಟಕದಲ್ಲಿ ಮತ್ತಷ್ಟು ಕೊರೋನಾ ಇಳಿಕೆ * 851 ಜನರಿಗೆ ಸೋಂಕು, , 15 ಮಂದಿ ಬಲಿ * ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ

ಬೆಂಗಳೂರು, (ಸೆ.07): ರಾಜ್ಯದಲ್ಲಿ ಇಂದು (ಸೆ.07) ಕೊರೋನಾ ಸೋಂಕಿತರ ಸಂಖ್ಯೆ ಮತ್ತಷ್ಟು ಇಳಿಕೆಯಾಗಿದೆ. ಹೊಸದಾಗಿ 851 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, 15 ಮಂದಿ ಬಲಿಯಾಗಿದ್ದಾರೆ.

ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 29,56,988 ಕ್ಕೆ ಏರಿಕೆಯಾಗಿದ್ರೆ, ಇದುವರೆಗೆ 37,441 ಸೋಂಕಿತರು ಮೃತಪಟ್ಟಿದ್ದಾರೆ.  ಇನ್ನು ಇದುವರೆಗೆ 29,02,089 ಜನರು ಕೊರೋನಾ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಎಲ್ಲ ಜಿಲ್ಲೆಗಳ ಪಾಸಿಟಿವಿಟಿ ದರ 2%ಗಿಂತ ಕೆಳಕ್ಕೆ

ರಾಜ್ಯದಲ್ಲಿ 17,432 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ದರ ಶೇಕಡ 0.71 ರಷ್ಟಿದೆ ಎಂದು  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ 248 ಜನರಿಗೆ ಸೋಂಕು ತಗುಲಿದ್ದು, ಮೂವರು ಸೋಂಕಿತರು ಮೃತಪಟ್ಟಿದ್ದಾರೆ. 362 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 7063 ಸಕ್ರಿಯ ಪ್ರಕರಣಗಳಿವೆ.

ಜಿಲ್ಲಾವಾರು ಸೋಂಕಿನ ಸಂಖ್ಯೆ:
ಬೆಂಗಳೂರು ನಗರ 248, ದಕ್ಷಿಣಕನ್ನಡ 227, ಚಿಕ್ಕಮಗಳೂರು 49, ಕೊಡಗು 31, ಮೈಸೂರು 53, ತುಮಕೂರು 44, ಉಡುಪಿ 74 ಹೊಸ ಪ್ರಕರಣ ವರದಿಯಾಗಿದೆ. ಬಾಗಲಕೋಟೆ 0, ಬಳ್ಳಾರಿ 3, ಬೀದರ್ 1, ಚಿಕ್ಕಬಳ್ಳಾಪುರ 2, ಚಿತ್ರದುರ್ಗ 4, ಧಾರವಾಡ 0, ಗದಗ 0, ಹಾವೇರಿ 1, ಕಲ್ಬುರ್ಗಿ 3, ಕೊಪ್ಪಳ 0, ರಾಯಚೂರು 2, ರಾಮನಗರ 1, ವಿಜಯಪುರ 0, ಯಾದಗಿರಿ 1.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಚಿನ್ನಸ್ವಾಮಿಗೆ ಅಂತಾರಾಷ್ಟ್ರೀಯ ಮತ್ತು IPL ಪಂದ್ಯಗಳು ವಾಪಸ್; ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ
ನಾನು ಕೃಷ್ಣತತ್ತ್ವ ನಂಬಿದವನೇ ಹೊರತು, ಕಾಂಗ್ರೆಸ್‌ನ ಕಂಸ ಹಿಂಸೆಯನ್ನಲ್ಲ: ಹೆಚ್.ಡಿ.ಕುಮಾರಸ್ವಾಮಿ!