Corona Crisis: 891 ಕೋವಿಡ್‌ ಕೇಸು: 16ರ ಬಾಲಕಿ ಸಾವು

Published : Jul 13, 2022, 05:00 AM IST
Corona Crisis: 891 ಕೋವಿಡ್‌ ಕೇಸು: 16ರ ಬಾಲಕಿ ಸಾವು

ಸಾರಾಂಶ

ರಾಜ್ಯದಲ್ಲಿ ಮಂಗಳವಾರ 891 ಹೊಸ ಪ್ರಕರಣಗಳು ವರದಿಯಾಗಿದೆ. 1189 ಮಂದಿ ಗುಣಮುಖರಾಗಿದ್ದಾರೆ. ಉತ್ತರ ಕನ್ನಡದಲ್ಲಿ 16 ವರ್ಷದ ಬಾಲಕಿಯೊಬ್ಬಳು ಸೋಂಕಿನಿಂದ ಮೃತಪಟ್ಟಿದ್ದಾಳೆ.

ಬೆಂಗಳೂರು (ಜು.13): ರಾಜ್ಯದಲ್ಲಿ ಮಂಗಳವಾರ 891 ಹೊಸ ಪ್ರಕರಣಗಳು ವರದಿಯಾಗಿದೆ. 1189 ಮಂದಿ ಗುಣಮುಖರಾಗಿದ್ದಾರೆ. ಉತ್ತರ ಕನ್ನಡದಲ್ಲಿ 16 ವರ್ಷದ ಬಾಲಕಿಯೊಬ್ಬಳು ಸೋಂಕಿನಿಂದ ಮೃತಪಟ್ಟಿದ್ದಾಳೆ. ಗುಣಮುಖರ ಹೆಚ್ಚಳದ ಕಾರಣ ಸಕ್ರಿಯ ಪ್ರಕರಣ 6419ಕ್ಕೆ ತಗ್ಗಿದೆ. ಸದ್ಯ ಸಕ್ರಿಯ ಸೋಂಕಿತರ ಪೈಕಿ 89 ಮಂದಿ ಮಾತ್ರ ಆಸ್ಪತ್ರೆಯಲ್ಲಿದ್ದಾರೆ. ಉಳಿದ 6,370 ಮಂದಿ ಮನೆ ಆರೈಕೆಯಲ್ಲಿದ್ದಾರೆ. 

ಈ ನಡುವೆ, ಮೃತ ಬಾಲಕಿಯು ತೀವ್ರ ಜ್ವರ ಹಿನ್ನೆಲೆ ಜುಲೈ 3ಕ್ಕೆ ಖಾಸಗಿ ಆಸ್ಪತ್ರೆ ದಾಖಲಾಗಿದ್ದಳು. ಒಂದು ವಾರದ ನಿರಂತರ ಚಿಕಿತ್ಸೆ ಬಳಿಕವೂ ಚೇತರಿಕೆ ಕಾಣದೇ ಸಾವಿಗೀಡಾಗಿದ್ದಾಳೆ. 20 ಸಾವಿರ ಸೋಂಕು ಪರೀಕ್ಷೆಗಳು ನಡೆದಿದ್ದು, ಪಾಸಿಟಿವಿಟಿ ದರ ಶೇ 4.5ರಷ್ಟುದಾಖಲಾಗಿದೆ. ಸೋಮವಾರಕ್ಕೆ ಹೋಲಿಸಿದರೆ ಸೋಂಕು ಪರೀಕ್ಷೆಗಳು 7 ಸಾವಿರ ಹೆಚ್ಚಳವಾಗಿವೆ. ಹೀಗಾಗಿ, ಹೊಸ ಪ್ರಕರಣಗಳು ಸೋಮವಾರಕ್ಕಿಂತ 218 ಏರಿವೆ.

Booster Dose: 3ನೇ ಡೋಸ್‌ ಪಡೆದಿದ್ದು ಬರೀ 15% ಜನ!

ಎಲ್ಲಿ ಎಷ್ಟು ಮಂದಿಗೆ ಸೋಂಕು?: ಹೊಸ ಪ್ರಕರಣಗಳ ಪೈಕಿ ಬೆಂಗಳೂರಿನಲ್ಲಿ 832 ಪತ್ತೆಯಾಗಿವೆ. ಉಳಿದಂತೆ ಮೈಸೂರು 9, ಧಾರವಾಡ 8, ದಕ್ಷಿಣ ಕನ್ನಡ 7, ಶಿವಮೊಗ್ಗ 6, ಬೆಳಗಾವಿ ಮತ್ತು ತುಮಕೂರು ತಲಾ 5, ಉಳಿದಂತೆ 11 ಜಿಲ್ಲೆಗಳಲ್ಲಿ ಐದಕ್ಕಿಂತ ಕಡಿಮೆ, 12 ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು ಪತ್ತೆಯಾಗಿಲ್ಲ.

ಬೆಂಗಳೂರಿನಲ್ಲಿ832 ಕೊರೋನಾ ಹೊಸ ಪ್ರಕರಣ: ಮಂಗಳವಾರ 832 ಕೊರೋನಾ ಪ್ರಕರಣ ಪತ್ತೆಯಾಗಿದ್ದು, ಪಾಸಿಟಿವಿಟಿ ದರ ಶೇ.5.08 ರಷ್ಟಿದೆ. 1,101ಮಂದಿ ಗುಣಮುಖರಾಗಿದ್ದಾರೆ. ಸೋಂಕಿನಿಂದ ಮೃತಪಟ್ಟವರದಿಯಾಗಿಲ್ಲ. ನಗರದಲ್ಲಿ ಸದ್ಯ 5987 ಸಕ್ರಿಯ ಸೋಂಕು ಪ್ರಕರಣಗಳಿದ್ದು, ಈ ಪೈಕಿ 58 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 9 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದವರು ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 7052 ಮಂದಿ ಕೋವಿಡ್‌ ವಿರುದ್ಧ ಲಸಿಕೆ ಪಡೆದುಕೊಂಡಿದ್ದಾರೆ.

Corona Crisis: ಕೋವಿಡ್‌ ಸೋಂಕು ಪತ್ತೆಯಾದರೆ ಸೀಲ್‌ಡೌನ್‌ ಇಲ್ಲ

670 ಮಂದಿ ಮೊದಲ ಡೋಸ್‌, 2974 ಮಂದಿ ಎರಡನೇ ಡೋಸ್‌ ಮತ್ತು 3408 ಮಂದಿ ಮೂರನೇ ಡೋಸ್‌ ಲಸಿಕೆ ಪಡೆದಿದ್ದಾರೆ. ನಗರದಲ್ಲಿ 17425 ಮಂದಿಗೆ ಕೊರೋನಾ ಸೋಂಕು ಪರೀಕ್ಷೆ ನಡೆಸಲಾಗಿದ್ದು, ಈ ಪೈಕಿ 13528 ಆರ್‌ಟಿಪಿಸಿಆರ್‌ ಹಾಗೂ 3,897 ಮಂದಿಗೆ ರಾರ‍ಯಪಿಡ್‌ ಆ್ಯಂಟಿಜನ್‌ ಪರೀಕ್ಷೆ ನಡೆಸಲಾಗಿದೆ. ಮಂಗಳವಾರ ನಗರದಲ್ಲಿ ಹೊಸದಾಗಿ ಕಂಟೈನ್ಮೆಂಟ್‌ ಪ್ರದೇಶ ಸೃಷ್ಟಿಯಾಗಿಲ್ಲ. ಮಹದೇವಪುರ ವಲಯದಲ್ಲಿ ನಾಲ್ಕು ಪ್ರದೇಶಗಳು ಕಂಟೈನ್ಮೆಂಟ್‌ನಿಂದ ಮುಕ್ತವಾಗಿವೆ. ನಗರದಲ್ಲಿ ಒಟ್ಟು 15 ಕಂಟೈನ್ಮೆಂಟ್‌ ಪ್ರದೇಶಗಳಿವೆ ಎಂದು ಬಿಬಿಎಂಪಿ ಮಾಹಿತಿ ನೀಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಡಿಕೆಸು ಹೆಸರಿನಲ್ಲಿ ಕೋಟ್ಯಂತರ ವಂಚನೆ ಪ್ರಕರಣ.. 'ಬಂಗಾರಿ' ಕೇಸ್‌ನಲ್ಲಿ ನಟ ಧರ್ಮಗೆ ಧ್ವನಿ ಪರೀಕ್ಷೆ?
ಬೆಳಗಾವಿಯ 31 ಕೃಷ್ಣಮೃಗ ಸಾವಿಗೆ ಸಿಬ್ಬಂದಿ ನಿರ್ಲಕ್ಷ್ಯ ಕಾರಣವಲ್ಲ: ಸಚಿವ ಈಶ್ವರ್ ಖಂಡ್ರೆ