ಕರ್ನಾಟಕದಲ್ಲಿ 30 ವರ್ಷದಿಂದ ಬಾಕಿ ಉಳಿದ 9 ರೈಲ್ವೆ ಯೋಜನೆಗಳು 2 ವರ್ಷದಲ್ಲಿ ಪೂರ್ಣ: ಕೇಂದ್ರ ಸಚಿವ ಸೋಮಣ್ಣ

Published : Jun 18, 2024, 06:57 AM IST
ಕರ್ನಾಟಕದಲ್ಲಿ 30 ವರ್ಷದಿಂದ ಬಾಕಿ ಉಳಿದ 9 ರೈಲ್ವೆ ಯೋಜನೆಗಳು 2 ವರ್ಷದಲ್ಲಿ ಪೂರ್ಣ: ಕೇಂದ್ರ ಸಚಿವ ಸೋಮಣ್ಣ

ಸಾರಾಂಶ

ರಾಜ್ಯದಲ್ಲಿ ಕಳೆದ ಮೂರು ದಶಕಗಳಿಂದ 1264 4.2. ಒಳಗೊಂಡಒಂಬತ್ತು ರೈಲ್ವೇ ಯೋಜನೆ ಕಾಮಗಾರಿಗೆ ಚುರುಕು ನೀಡಿ 2025- 2026ರ ಅಂತ್ಯದೊಳಗೆ ಪೂರ್ಣಗೊಳಿಸುವುದಾಗಿ ತಿಳಿಸಿದ ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ

ಬೆಂಗಳೂರು(ಜೂ.18):  ರಾಜ್ಯದಲ್ಲಿ ಕಳೆದ ಮೂರು ದಶಕಗಳಿಂದ 1264 4.2. ಒಳಗೊಂಡಒಂಬತ್ತು ರೈಲ್ವೇ ಯೋಜನೆ ಕಾಮಗಾರಿಗೆ ಚುರುಕು ನೀಡಿ 2025- 2026ರ ಅಂತ್ಯದೊಳಗೆ ಪೂರ್ಣಗೊಳಿಸುವುದಾಗಿ ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.

ರೈಲ್ವೇ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಸೋಮವಾರ ಮೊದಲ ಬಾರಿಗೆ ನೈಋತ್ಯ ರೈಲ್ವೇ ಅಧಿಕಾರಿಗಳ ಜತೆಗೆ ರಾಜ್ಯದ ರೈಲ್ವೇ ಸ್ಥಿತಿಗತಿ ಕುರಿತು ಸಭೆ ನಡೆಸಿದ ನಂತರ ಅವರು ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.
ಮುಖ್ಯವಾಗಿ 1995ರಿಂದಲೂ ಬಾಕಿ ಇರುವ ರೈಲ್ವೇ ಯೋಜನೆಗಳ ಕುರಿತು ಅಧಿಕಾರಿಗಳಿಂದ ವಿವರ ಪಡೆದರು.

ಮಾನ್ಸೂನ್‌ ಎಫೆಕ್ಟ್‌, ಕೊಂಕಣ್‌ ಲೈನ್‌ನಲ್ಲಿ ಪ್ರಯಾಣಿಸಲಿರುವ ರೈಲುಗಳ ವೇಳಾಪಟ್ಟಿ ಬದಲು!

ಯಾವ್ಯಾವ ಯೋಜನೆಗೆ ಎರಡು ವರ್ಷ ಟಾರ್ಗೆಟ್?

1 ತುಮಕೂರು- ಕಲ್ಯಾಣದುರ್ಗ ಮೂಲಕ ರಾಯದುರ್ಗ
2 ತುಮಕೂರು ಚಿತ್ರದುರ್ಗ- ದಾವಣಗೆರೆ
3 ಗಿಣಿಗೇರಾ- ರಾಯಚೂರು
4 ಬಾಗಲಕೋಟ- ಕುಡಚಿ
5 ಗದಗ-ವಾಡಿ
6 ಕಡೂರು- ಚಿಕ್ಕಮಗಳೂರು
7 ಶಿವಮೊಗ್ಗ - ಶಿಕಾರಿಪುರ - ರಾಣೆಬೆನ್ನೂರು
8 ಬೆಳಗಾವಿ- ಕಿತ್ತೂರು ಮಾರ್ಗವಾಗಿ ಧಾರವಾಡ
 9 ಹಾಸನ ಬೇಲೂರು

ಉಪನಗರ ರೈಲ್ವೆಗೆ ತಜ್ಞರ ನೇಮಕ

ಬೆಂಗಳೂರು ಉಪನಗರ ರೈಲು ಯೋಜನೆ (ಬಿಎಸ್‌ಆರ್‌ಪಿ) ಕಾಮ ಗಾರಿ ಚುರುಕಾಗಬೇಕು. ಇದಕ್ಕಾಗಿ ಕರ್ನಾಟಕ ರೈಲ್ವೆ ಮೂಲ ಸೌಕರ್ಯ ಅಭಿವೃದ್ಧಿ ನಿಗಮಕ್ಕೆ (ಕೆ-ರೈಡ್) ಮುಂದಿನ ಹದಿನೈದು ದಿನಗಳಲ್ಲಿ ವ್ಯವಸ್ಥಾಪಕ ನಿರ್ದೇಶಕ ಸ್ಥಾನ ತಾಂತ್ರಿಕ ತಜ್ಞರ ನೇಮಕಾತಿಗೆ ಕ್ರಮ ವಹಿಸಲಿದ್ದೇವೆ. ಕೆ-ರೈಡ್ ಸೇರಿದಂತೆ ವಿವಿಧ ಭಾಗಿದಾರರ ನಡುವಿನ ಸಹಯೋಗದೊಂದಿಗೆ ಈ ಯೋಜನೆ ಪೂರ್ಣಗೊಳಿಸಲು ಕ್ರಮವಹಿಸ ಲಾಗುವುದು ಎಂದು ಇದೇ ವೇಳೆ ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರು ಮಾಹಿತಿ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಅಂಕಣ | ರಾಜ್ಯದಲ್ಲಿ ಕಾಂಗ್ರೆಸ್‌ನಿಂದ ಉದ್ಯೋಗದ ನವಯುಗ!
ಗ್ರಾಪಂ ಅಧ್ಯಕ್ಷರೂ ಮತ್ತು ಹಸಿರು ಪೆನ್ನೂ...!