ಕರ್ನಾಟಕದಲ್ಲಿ 942 ಹೊಸ ಕೊರೋನಾ ಕೇಸ್‌: ಯಾವುದೇ ಸಾವಿಲ್ಲ

Published : Jul 11, 2022, 01:30 AM IST
ಕರ್ನಾಟಕದಲ್ಲಿ 942 ಹೊಸ ಕೊರೋನಾ ಕೇಸ್‌: ಯಾವುದೇ ಸಾವಿಲ್ಲ

ಸಾರಾಂಶ

*  ರಾಜ್ಯದಲ್ಲಿ ಸದ್ಯ 6898 ಸಕ್ರಿಯ ಪ್ರಕರಣಗಳು *  ಈ ಪೈಕಿ 97 ಮಂದಿ ಮಾತ್ರ ಆಸ್ಪತ್ರೆಯಲ್ಲಿದ್ದಾರೆ *  ಹೊಸ ಪ್ರಕರಣಗಳ ಪೈಕಿ ಬೆಂಗಳೂರಿನಲ್ಲಿ 831 ಪತ್ತೆ   

ಬೆಂಗಳೂರು(ಜು.11):  ರಾಜ್ಯದಲ್ಲಿ ಭಾನುವಾರ 942 ಜನರಲ್ಲಿ ಕೊರೋನಾ ಹೊಸ ಪ್ರಕರಣಗಳು ವರದಿಯಾಗಿದ್ದು, 737 ಮಂದಿ ಗುಣಮುಖರಾಗಿದ್ದಾರೆ. ಯಾವುದೇ ಸೋಂಕಿತರ ಸಾವಾಗಿಲ್ಲ. ರಾಜ್ಯದಲ್ಲಿ ಸದ್ಯ 6898 ಸಕ್ರಿಯ ಪ್ರಕರಣಗಳಿವೆ. ಈ ಪೈಕಿ 97 ಮಂದಿ ಮಾತ್ರ ಆಸ್ಪತ್ರೆಯಲ್ಲಿದ್ದಾರೆ.

22 ಸಾವಿರ ಸೋಂಕು ಪರೀಕ್ಷೆಗಳು ನಡೆದಿದ್ದು, ಪಾಸಿಟಿವಿಟಿ ದರ ಶೇ 4.2ರಷ್ಟು ದಾಖಲಾಗಿದೆ. ಶನಿವಾರಕ್ಕೆ ಹೋಲಿಸಿದರೆ ಸೋಂಕು ಪರೀಕ್ಷೆಗಳು ಐದು ಸಾವಿರ ಕಡಿಮೆ ನಡೆದಿವೆ. ಹೀಗಾಗಿ, ಹೊಸ ಪ್ರಕರಣಗಳು ಮಾತ್ರ 47 ಕಡಿಮೆಯಾಗಿವೆ. ಹೊಸ ಪ್ರಕರಣಗಳ ಪೈಕಿ ಬೆಂಗಳೂರಿನಲ್ಲಿ 831 ಪತ್ತೆಯಾಗಿವೆ. 

Covid Crisis: ಬೆಂಗಳೂರಿನಲ್ಲಿ ಕೊರೋನಾ ಪಾಸಿಟಿವಿಟಿ ದರ ಮತ್ತೆ ಶೇ.5ಕ್ಕೆ ಏರಿಕೆ

ಉಳಿದಂತೆ ಮೈಸೂರು 30, ದಕ್ಷಿಣ ಕನ್ನಡ 13, ಬೆಳಗಾವಿ ಹಾಗೂ ಕೋಲಾರ 11, ಉಡುಪಿ 10, ಬೀದರ್‌ 5, ಧಾರವಾಡ, ಬಳ್ಳಾರಿ, ಮಂಡ್ಯ, ತುಮಕೂರಿನಲ್ಲಿ ತಲಾ ನಾಲ್ಕು, ಚಿಕ್ಕಮಗಳೂರು ಮತ್ತು ಶಿವಮೊಗ್ಗ ತಲಾ ಮೂರು, ಹಾಸನ ಮತ್ತು ಉತ್ತರ ಕನ್ನಡ ತಲಾ ಇಬ್ಬರು, ಕೊಪ್ಪಳ, ದಾವಣಗೆರೆ, ಬಾಗಲಕೋಟೆಯಲ್ಲಿ ತಲಾ ಒಬ್ಬರಿಗೆ ಸೋಂಕು ತಗುಲಿದೆ. 12 ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು ಪತ್ತೆಯಾಗಿಲ್ಲ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಸೇರಿಯನ್‌ ಹೆರಿಗೆ ಹೆಚ್ಚಳ ಏಕೆ ಎಂದು ತಿಳಿಯಲು ಆಡಿಟ್‌: ಸಚಿವ ದಿನೇಶ್‌ ಗುಂಡೂರಾವ್
ಪ್ರಧಾನಿಗೆ ಪತ್ರ ಬರೆಯುವುದರಲ್ಲಿ ಸಿದ್ದರಾಮಯ್ಯ, ಡಿಕೆಶಿ ನಿಸ್ಸೀಮರು: ಬಿ.ವೈ.ವಿಜಯೇಂದ್ರ