ಕರ್ನಾಟಕದಲ್ಲಿ ಬುಧವಾರ ಕೊರೋನಾ ಮಹಾಸ್ಪೋಟ: ಸಾವಿನ ಸಂಖ್ಯೆಯಲ್ಲಿ ಕೊಂಚ ಇಳಿಕೆ

Published : Sep 16, 2020, 09:09 PM ISTUpdated : Sep 16, 2020, 09:11 PM IST
ಕರ್ನಾಟಕದಲ್ಲಿ ಬುಧವಾರ ಕೊರೋನಾ ಮಹಾಸ್ಪೋಟ: ಸಾವಿನ ಸಂಖ್ಯೆಯಲ್ಲಿ ಕೊಂಚ ಇಳಿಕೆ

ಸಾರಾಂಶ

ಕರ್ನಾಟಕದಲ್ಲಿ ಕಳೆದ 24 ಗಂಟೆಗಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯವಾಗಿ ಏರಿಕೆ ಕಂಡಿದೆ. ಆದ್ರೆ, ಸಾವಿನ ಸಂಖ್ಯೆಯಲ್ಲಿ ಕೊಂಚ ಇಳಿಕೆ ಕಂಡಿದೆ.

ಬೆಂಗಳೂರು, (ಸೆ.16): ರಾಜ್ಯದಲ್ಲಿ ಇಂದು (ಬುಧವಾರ) 9725 ಜನರಿಗೆ ಕೊರೋನಾ ಸೋಂಕು ತಗುಲಿದ್ದು ,  70 ಜನ ಸೋಂಕಿತರು ಮೃತಪಟ್ಟಿದ್ದಾರೆ. 6583 ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

 ಒಟ್ಟು ಸೋಂಕಿತರ ಸಂಖ್ಯೆ 4,84,990 ಕ್ಕೆ ಏರಿಕೆಯಾಗಿದ್ರೆ, ಇದುವರೆಗೆ ರಾಜ್ಯದಲ್ಲಿ 375809 ಜನರು ಕೊರೋನಾದಿಂದ ಗುಣಮುಖರಾಗಿದ್ದಾರೆ. ಇನ್ನು ಮಹಾಮಾರಿ ಕೊರೋನಾಗೆ  7536 ಜನರು ಸಾವನ್ನಪ್ಪಿದ್ದಾರೆ.

ಕೊರೋನಾ ಲಸಿಕೆ; ಭಾರತೀಯರಿಗೆ ಸಿಹಿ ಸುದ್ದಿ ಕೊಟ್ಟ ರಷ್ಯಾ

ಬೆಂಗಳೂರಿನ ಅಂಕಿ-ಅಂಶ
 ಬೆಂಗಳೂರಿನಲ್ಲಿ ಬುಧವಾರ 3571 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ.  27 ಮಂದಿ ಸೋಂಕಿತರು ಬಲಿಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 1,80,283 ಕ್ಕೆ ಏರಿಕೆಯಾಗಿದೆ . ಮೃತಪಟ್ಟ ಸೋಂಕಿತರ ಸಂಖ್ಯೆ 2521ಕ್ಕೇರಿದೆ. 

ತಗ್ಗಿದ ಸಾವಿನ ಸಂಖ್ಯೆ
ಕಳೆದ 24 ಗಂಟೆಗಳಲ್ಲಿ ಕರ್ನಾಟಕದಲ್ಲಿ ಕೊರೋನಾ ಸೊಂಕಿತರ ಸಂಖ್ಯೆಯಲ್ಲಿ ಹೆಚ್ಚಾಗಿದೆ. ಆದ್ರೆ, ಸಾವಿನ ಸಂಖ್ಯೆ ಕೊಂಚ ಕಡಿಮೆಯಾಗಿರುವುದು ಖುಷಿಯ ಸಂಗತಿ. ಯಾಕಂದ್ರೆ ಪ್ರತಿದಿನ ರಾಜ್ಯದಲ್ಲಿ ಸಾವಿನ ಸಂಖ್ಯೆ ಕನಿಷ್ಠ ಏನಿಲ್ಲ ಅಂದ್ರೂ 100 ಮೇಲೆ ಇರುತ್ತಿತ್ತು. ಆದ್ರೆ, ಬುಧವಾರ ಸಾವಿನ ಸಂಖ್ಯೆ 70ಕ್ಕೆ ಇಳಿದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬೇರೆಯದನ್ನು ಬಿಟ್ಟು, 120 ಅಡಿಕೆ ಮರಗಳನ್ನು ಅರಣ್ಯ ಇಲಾಖೆ ಕಡಿದಿದ್ದು ಯಾಕೆ? ಅನಂತಮೂರ್ತಿ ಹೆಗಡೆ ಆಕ್ರೋಶ
ಗಾಂಧೀಜಿ ಕೊಡುಗೆ ಬಗ್ಗೆ ಬಿಜೆಪಿಯವರಿಗೆ ಜ್ಞಾನ ಇಲ್ಲ: ಸಚಿವ ರಾಮಲಿಂಗಾರೆಡ್ಡಿ ವಾಗ್ದಾಳಿ