
ಬೆಂಗಳೂರು(ಜು.03): ರಾಜ್ಯದಲ್ಲಿ ಶನಿವಾರ 975 ಜನರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಶಿವಮೊಗ್ಗದಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ. 668 ಮಂದಿ ಗುಣಮುಖರಾಗಿದ್ದಾರೆ.
ಕಳೆದ ಮೂರು ದಿನಗಳ ಬಳಿಕ ದೈನಂದಿನ ಸೋಂಕಿತರ ಸಂಖ್ಯೆ ಸಾವಿರಕ್ಕಿಂತ ಕಡಿಮೆ ಆಗಿದೆ. ಹಾಗೆಯೇ ಶೇ. 4 ಮೀರಿದ್ದ ಪಾಸಿಟಿವಿಟಿ ದರ ಶೇ. 3.74ಕ್ಕೆ ಇಳಿಕೆಯಾಗಿದೆ. ಸದ್ಯ 6,440 ಸಕ್ರಿಯ ಪ್ರಕರಣಗಳಿವೆ.
Corona Crisis: ಕೋವಿಡ್ ಸೋಂಕು ಪತ್ತೆಯಾದರೆ ಸೀಲ್ಡೌನ್ ಇಲ್ಲ
ಬೆಂಗಳೂರು ನಗರದಲ್ಲಿ 871, ಮೈಸೂರು 22, ದಕ್ಷಿಣ ಕನ್ನಡ 14, ಕೋಲಾರ ಮತ್ತು ಧಾರವಾಡ ತಲಾ 9, ಉಡುಪಿ, ಉತ್ತರ ಕನ್ನಡ ಮತ್ತು ಶಿವಮೊಗ್ಗ ತಲಾ 6 ಹೊಸ ಪ್ರಕರಣಗಳು ಪತ್ತೆಯಾಗಿದೆ. ರಾಜ್ಯದಲ್ಲಿ ಈವರೆಗೆ 39.71 ಲಕ್ಷ ಮಂದಿಯಲ್ಲಿ ಕೋವಿಡ್ ದೃಢಪಟ್ಟಿದ್ದು, 39.24 ಲಕ್ಷ ಮಂದಿ ಚೇತರಿಸಿಕೊಂಡಿದ್ದಾರೆ. 40,077 ಮಂದಿ ಮರಣವನ್ನಪ್ಪಿದ್ದಾರೆ.
ಲಸಿಕೆ ಅಭಿಯಾನ:
ಶನಿವಾರ 41,887 ಮಂದಿ ಕೋವಿಡ್ ಲಸಿಕೆ ಪಡೆದಿದ್ದಾರೆ. 4,506 ಮಂದಿ ಮೊದಲ ಡೋಸ್, 16,090 ಮಂದಿ ಎರಡನೇ ಡೋಸ್ ಮತ್ತು 30,445 ಮಂದಿ ಮುನ್ನೆಚ್ಚರಿಕೆ ಡೋಸ್ ಪಡೆದಿದ್ದಾರೆ. ಈವರೆಗೆ ಒಟ್ಟು 11.22 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ