
ಸುಳ್ಯ[ಜ.01]: ಸುಳ್ಯದ ಆಟೋರಿಕ್ಷಾ ಚಾಲಕರೊಬ್ಬರು ಗಡಿನಾಡು ಕಾಸರಗೋಡು ಜಿಲ್ಲೆಗೆ ಹೋಗಿದ್ದ ಸಂದರ್ಭದಲ್ಲಿ ಖರೀದಿಸಿದ್ದ ಕೇರಳ ಲಾಟರಿಗೆ 80 ಲಕ್ಷ ರು. ಬಂಪರ್ ಬಹುಮಾನ ಹೊಡೆದಿರುವ ಪ್ರಸಂಗ ನಡೆದಿದೆ.
ತಾಲೂಕಿನ ದುಗಲಡ್ಕದ ಈಶ್ವರಡ್ಕ ಶಿವಕುಮಾರ್ ಎಂಬುವರೇ ಈ ಅದೃಷ್ಟಶಾಲಿ. ದುಗಲಡ್ಕದಲ್ಲಿ ಸುಮಾರು 15 ವರ್ಷಗಳಿಂದ ರಿಕ್ಷಾ ಚಾಲಕರಾಗಿರುವ ಅವರು ಸುಳ್ಯ ಪಟ್ಟಣ ಪಂಚಾಯಿತಿ ದುಗ್ಗಲಡ್ಕ ವಾರ್ಡ್ನ ಪಂಪ್ ಆಪರೇಟರ್ ಆಗಿಯೂ ಕೆಲಸ ಮಾಡುತ್ತಿದ್ದಾರೆ.
ಡಿ.29ರಂದು ಅಡೂರು ದೇವಸ್ಥಾನಕ್ಕೆ ಹೋಗಿ, ವಾಪಸ್ ಆಗುವ ಸಂದರ್ಭದಲ್ಲಿ ಅವರು ಅಲ್ಲಿ ಕೇರಳ ರಾಜ್ಯದ ಕಾರುಣ್ಯ ಲಾಟರಿ ಖರೀದಿಸಿದ್ದರು. ಅದೇ ದಿನ ಸಂಜೆಯ ವೇಳೆಗೆ ಆನ್ಲೈನ್ನಲ್ಲಿ ಫಲಿತಾಂಶ ನೋಡಿದಾಗ ಬಹುಮಾನ ಅವರ ನಂಬರ್ಗೆ ಬಂದಿತ್ತು. ಶೇ.35ರಷ್ಟುಮನರಂಜನಾ ತೆರಿಗೆಗಳು ಕಡಿತಗೊಂಡು ಸುಮಾರು 52 ಲಕ್ಷದಷ್ಟುಮೊತ್ತ ಸಿಗುವ ಅಂದಾಜಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ