ಮನೆ ಕರೆಂಟ್ ಬಿಲ್ ಹೆಚ್ಚಿಗೆ ಬಂದಿದ್ದಕ್ಕೆ ಕೈ ಕಾಲು ಮುರಿದುಕೊಂಡು ಆಸ್ಪತ್ರೆ ಸೇರಿದ ವ್ಯಕ್ತಿ!

Published : Sep 22, 2023, 05:10 PM ISTUpdated : Sep 23, 2023, 10:16 AM IST
ಮನೆ ಕರೆಂಟ್ ಬಿಲ್ ಹೆಚ್ಚಿಗೆ ಬಂದಿದ್ದಕ್ಕೆ ಕೈ ಕಾಲು ಮುರಿದುಕೊಂಡು ಆಸ್ಪತ್ರೆ ಸೇರಿದ ವ್ಯಕ್ತಿ!

ಸಾರಾಂಶ

ಮನೆಯ ಕರೆಂಟ್ ಬಿಲ್ ಹೆಚ್ಚಿಗೆ ಬಂದಿದ್ದಕ್ಕೆ ಇಲ್ಲೊಬ್ಬ ವ್ಯಕ್ತಿ ಕೈ ಕಾಲು ಮುರಿದುಕೊಂಡು ಆಸ್ಪತ್ರೆ ಸೇರಿದ್ದಾನೆ. ಅರೇ, ಕರೆಂಟ್ ಬಿಲ್ ಹೆಚ್ಚಿಗೆ ಬಂದಿದ್ದಕ್ಕೂ ಈ ವ್ಯಕ್ತಿ ಆಸ್ಪತ್ರೆ ಸೇರಿದ್ದಕ್ಕೂ ಏನು ಸಂಬಂಧ ಅಂತಿರಾ ? ಈ ಸ್ಟೋರಿ ನೋಡಿ. 

ಕಲಬುರಗಿ (ಸೆ.22): ಮನೆಯ ಕರೆಂಟ್ ಬಿಲ್ ಹೆಚ್ಚಿಗೆ ಬಂದಿದ್ದಕ್ಕೆ ಇಲ್ಲೊಬ್ಬ ವ್ಯಕ್ತಿ ಕೈ ಕಾಲು ಮುರಿದುಕೊಂಡು ಆಸ್ಪತ್ರೆ ಸೇರಿದ್ದಾನೆ. ಅರೇ, ಕರೆಂಟ್ ಬಿಲ್ ಹೆಚ್ಚಿಗೆ ಬಂದಿದ್ದಕ್ಕೂ ಈ ವ್ಯಕ್ತಿ ಆಸ್ಪತ್ರೆ ಸೇರಿದ್ದಕ್ಕೂ ಏನು ಸಂಬಂಧ ಅಂತಿರಾ ? ಈ ಸ್ಟೋರಿ ನೋಡಿ. 

ಕೈ - ಕಾಲು ಮುರಿದುಕೊಂಡು ಆಸ್ಪತ್ರೆ ಬೆಡ್ ಮೇಲೆ  ಚಿಕಿತ್ಸೆ ಪಡೆಯುತ್ತಿರುವ ಈ ವ್ಯಕ್ತಿಯನ್ನು ನೋಡಿ. ಸಣ್ಣ ಸಣ್ಣ ವಿಷಯವನ್ನೂ ದೊಡ್ಡದು ಮಾಡಿಕೊಂಡ್ರೆ ಏನೆಲ್ಲಾ ಆಗಬಹುದು ಎನ್ನುವುದಕ್ಕೆ ಇವರೇ ಜೀವಂತ ಸಾಕ್ಷಿ. ಇವರು ನಿನ್ನೆಯವರೆಗೂ ಚೆನ್ನಾಗಿಯೇ ಇದ್ರು. ಮನೆಯ ಕರೆಂಟ್ ಬಿಲ್ ಹೆಚ್ಚಿಗೆ ಬಂದಿದ್ದಕ್ಕೆ ಇವರು ಇದೀಗ ಈ ಪರಿಸ್ಥಿತಿಯಲ್ಲಿದ್ದಾರೆ. ಕಲಬುರಗಿ ಜಿಲ್ಲೆ  ಅಫಜಲಪುರ ತಾಲೂಕಿನ ಮಾಶಾಳ ಗ್ರಾಮದ ಮಹಾಂತೇಶ ಎನ್ನುವಾತನೇ ಗಾಯಗೊಂಡು ಆಸ್ಪತ್ರೆ ಸೇರಿರುವ ವ್ಯಕ್ತಿ. 

Gruha Jyothi Scheme: ಮೊದಲ ಶೂನ್ಯ ಕರೆಂಟ್ ಬಿಲ್ ವಿತರಣೆ: ಗ್ರಾಹಕರು ಫುಲ್‌ ಖುಷ್‌

ಮನೆಯ ಕರೆಂಟ್ ಬಿಲ್ ಹೆಚ್ಚಿಗೆ ಬಂದಿದೆ ಅಂತ ಮಹಾಂತೇಶ, ಜೆಸ್ಕಾಂ ಅಧಿಕಾರಿಗಳ ಜೊತೆ ಜಗಳಕ್ಕಿಳಿದಿದ್ದ. ಅಧಿಕಾರಿಗಳನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿದ ಕಾರಣ ಜೆಸ್ಕಾಂ ಎಇಇ ಚಿದಾನಂದ ಎನ್ನುವವರು ಅಫಜಲಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದರು. ಪೊಲೀಸರು ಮಹಾಂತೇಶನನ್ನು ಅರೆಸ್ಟ್ ಸಹ ಮಾಡಿದರು. ನ್ಯಾಯಾಂಗ ವಶಕ್ಕೆ ಒಪ್ಪಿಸುವ ಮುನ್ನ ಊಟಕ್ಕೆ ಅಂತ ಕಲಬುರಗಿ ನಗರದ ಹೋಟೆಲ್ ವೊಂದಕ್ಕೆ ಕರೆದೊಯ್ಯಲಾಗಿತ್ತು. ಆಗ ಮೊದಲ ಮಹಡಿಯ ಹೋಟೆಲ್ ನ ಕಿಚನ್ ರೂಮ್ ನಿಂದ ಕೆಳಗೆ ಹಾರಿ ಪೊಲೀಸರ ಕೈಯಿಂದ ತಪ್ಪಿಸಿಕೊಂಡು ಓಡಿ ಹೋಗಲು ಯತ್ನಿಸಿ ಈ ರೀತಿ ಕೈ ಕಾಲು ಮುರಿದುಕೊಂಡಿದ್ದಾನೆ ಈ ಮಹಾಂತೇಶ. ಆದ್ರೆ ನಾನು ಓಡಿ ಹೋಗಲು ಯತ್ನಿಸಿಲ್ಲ, ಆಯ ತಪ್ಪಿ ಬಿದ್ದಿದ್ದೇನೆ ಅಂತಾನೆ ಮಹಾಂತೇಶ. 

ಈ ಸಂಬಂಧ ಆರೋಪಿ ಮಹಾಂತೇಶನ ಮೇಲೆ ಕಲಬುರಗಿ ನಗರದ ಚೌಕ್ ಪೊಲೀಸ್ ಠಾಣೆಯಲ್ಲಿ ಮತ್ತೊಂದು ದೂರು ದಾಖಲಾಗಿದೆ. ಒಂದು ತಿಂಗಳ ಮನೆ ಕರೆಂಟ್ ಬಿಲ್ ಹೆಚ್ಚಿಗೆ ಬಂದಿದ್ದಕ್ಕೆ ತಾಳ್ಮೆ ಕಳೆದುಕೊಂಡ ಕಾರಣ ಮಹಾಂತೇಶ ಅವರ ಜೀವನದಲ್ಲಿ ಆಗಬಾರದ್ದೆಲ್ಲಾ ಆಗಿ ಹೋಗಿದೆ. 

ವಿದ್ಯುತ್‌ ಬಿಲ್‌ ಪಾವತಿ ಮಾಡಲ್ಲ ಅಂತ ಬೀದಿಗಿಳಿದ ಪಾಕ್‌ ಆಕ್ರಮಿತ ಕಾಶ್ಮೀರ ನಿವಾಸಿಗಳು: ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ಮೈ ಮೇಲೆ ಎರಡು ಕೇಸ್ ಗಳು, ಇನ್ನೊಂದು ಕೈ ಕಾಲು ಮುರಿದುಕೊಂಡು ಆಸ್ಪತ್ರೆ ಸೇರುವ ಪರಿಸ್ಥಿತಿ. ತಾಳ್ಮೆ ಕಳೆದುಕೊಂಡು ಕಾನೂನು ಕೈಗೆತ್ತಿಕೊಳ್ಳುವ ಮುನ್ನ ಒಮ್ಮೆ ಯೋಚಿಸಿ. ಅದಕ್ಕೆ ಹೇಳೋದು ತಾಳಿದವನು ಬಾಳಿಯಾನು ಅಂತ. ಅಲ್ಲವೇ ? 

ಕ್ಯಾಮರಾಮನ್ ಇಂದ್ರಜೀತ್ ಜೊತೆ ಶರಣಯ್ಯ ಹಿರೇಮಠ, ಏಷ್ಯಾನೇಟ್ ಸುವರ್ಣ ನ್ಯೂಸ್ ಕಲಬುರಗಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌