
ದಾವಣಗೆರೆ (ಅ.15): ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಕರ್ತವ್ಯನಿರತ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಹಲ್ಲೆ ಮಾಡಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯಲ್ಲಿ ನಿನ್ನೆ ನಡೆದ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಶೋಭಾಯಾತ್ರೆ ಮೆರವಣಿಗೆ ವೇಳೆ ನೆಡದಿರುವ ಘಟನೆ. ಮೆರವಣಿಗೆ ವೇಳೆ ಯಾವುದೇ ಅನಾಹುತವಾಗಂತೆ ಭದ್ರತೆಗೆ ನಿಯೋಜಿತವಾಗಿದ್ದ ಪೊಲೀಸ್ ಸಿಬ್ಬಂದಿ. ಪಿಬಿ ರಸ್ತೆಯಲ್ಲಿ ಕರ್ತವ್ಯದಲ್ಲಿದ್ದಾಗ ಕುಡುಕ ವ್ಯಕ್ತಿಯಿಂದ ಪೊಲೀಸ್ ಪೇದೆಯೊಂದಿಗೆ ಕಿರಿಕ್. ಪೊಲೀಸ್ ಸಿಬ್ಬಂದಿಗೆ ಅವಾಚ್ಯಾವಾಗಿ ನಿಂದನೆ ಮಾಡಿ ಮಾಡಿದ ವ್ಯಕ್ತಿ. ಕಂಠಪೂರ್ತಿ ಕುಡಿದ ಮತ್ತಿನಲ್ಲಿ ಪೊಲೀಸ್ ಕಾನ್ಸ್ಟೇಬಲ್ ಮುಖದ ಮೇಲೆ ಪಂಚ್ ಮಾಡಿರುವ ಕುಡುಕ.
ನಿನ್ನೆ ನಡೆದಿರುವ ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡ ದಾವಣಗೆರೆ ಪೊಲೀಸರು. ಕುಡಿದ ಮತ್ತಿನಲ್ಲಿ ಹಲ್ಲೆಗೆ ಮುಂದಾಗಿದ್ದ ಆಸಾಮಿ ಪೊಲೀಸರ ಕೈಗೆ ಸಿಗುವುದೊಂದೇ ಬಾಕಿ. ಕಾನೂನು ಕೈಗೆತ್ತಿಕೊಂಡು ಪೊಲೀಸಪ್ಪನ ಮೇಲೆಯೇ ಕೈಮಾಡಿದ ಕುಡುಕನಿಗೆ ಪೊಲೀಸರು ಗಣಪತಿಯ ಕಜ್ಜಾಯ ಕೊಡುವುದು ಗ್ಯಾರಂಟಿ.
ಚಿಕ್ಕಮಗಳೂರು: ಕುಡಿದ ಮತ್ತಿನಲ್ಲಿ ರಸ್ತೆಯಲ್ಲೇ ಮಲಗಿದ ಭೂಪ, ಬೈಕ್ ಇಂಡಿಕೇಟರ್ನಿಂದ ಉಳಿದ ಪ್ರಾಣ..!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ