ಉ.ಕರ್ನಾಟಕ ಭಾಗದಲ್ಲಿ ಪ್ರಥಮ ಕ್ಯಾನ್ಸರ್ ಆಸ್ಪತ್ರೆ ಪ್ರಾರಂಭಿಸಿದ್ದ ವೈದ್ಯ ಇನ್ನಿಲ್ಲ

Published : Feb 02, 2019, 07:17 PM IST
ಉ.ಕರ್ನಾಟಕ ಭಾಗದಲ್ಲಿ ಪ್ರಥಮ ಕ್ಯಾನ್ಸರ್ ಆಸ್ಪತ್ರೆ ಪ್ರಾರಂಭಿಸಿದ್ದ ವೈದ್ಯ ಇನ್ನಿಲ್ಲ

ಸಾರಾಂಶ

ಉತ್ತರ‌ ಕರ್ನಾಟಕ ಭಾಗದಲ್ಲಿ ಪ್ರಥಮ ಕ್ಯಾನ್ಸರ್ ಆಸ್ಪತ್ರೆ ಪ್ರಾರಂಭಿಸಿದ್ದ ಖ್ಯಾತ ಕ್ಯಾನ್ಸರ್ ತಜ್ಞ,  ಪದ್ಮಶ್ರೀ ಪುರಸ್ಕೃತ ಡಾ.ಆರ್.ಬಿ. ಪಾಟೀಲ್ ವಿಧಿವಶರಾಗಿದ್ದಾರೆ.

ಹುಬ್ಬಳ್ಳಿ, [ಫೆ.02] :  ಖ್ಯಾತ ಕ್ಯಾನ್ಸರ್ ತಜ್ಞ, ಪದ್ಮಶ್ರೀ ಪುರಸ್ಕೃತ ಡಾ. ಆರ್. ಬಿ. ಪಾಟೀಲ್ (95) ಅವರು ನಿಧನರಾಗಿದ್ದಾರೆ.

ಉತ್ತರ ಕರ್ನಾಟಕದ ಪ್ರಥಮ ಕ್ಯಾನ್ಸರ್ ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರವನ್ನು ಪ್ರಾರಂಭಿಸಿದ್ದ ಡಾ.ಆರ್.ಬಿ.ಪಾಟೀಲ್ (93) ಶನಿವಾರ ಮಧ್ಯಾಹ್ನ ಹುಬ್ಬಳ್ಳಿಯ ವಿದ್ಯಾನಗರದ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

ಭಾನುವಾರ ಬೆಳಿಗ್ಗೆ ಆರ್. ಬಿ. ಪಾಟೀಲ್ ಅವರ ಸ್ವಗ್ರಾಮ ವಿಜಯಪುರ ಜಿಲ್ಲೆ ಕೌಲಗಿ ಗ್ರಾಮಕ್ಕೆ ಪಾರ್ಥಿವ ಶರೀರವನ್ನು ತೆಗೆದುಕೊಂಡು ಹೋಗಲಾಗುವುದು. ನಂತರ ಅಲ್ಲಿಯೇ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ. 

ಮೂಲತಃ ವಿಜಯಪುರ ಜಿಲ್ಲೆ ಕೌಲಗಿ ಗ್ರಾಮದವರಾದ ಪಾಟೀಲರು, 1951 ರಲ್ಲಿ ಮುಂಬೈನಲ್ಲಿ ಎಂಬಿಬಿಎಸ್ ಪದವಿ, 1956 ರಲ್ಲಿ ಇಂಗ್ಲೆಂಡಿನಲ್ಲಿ ಎಫ್ಆರ್ಸಿಎಸ್ ಪದವಿ ಪಡೆದಿದ್ದರು.

1957ರಿಂದ 1970ರವರೆಗೆ ಹುಬ್ಬಳ್ಳಿ ಕೋಅಪರೇಟಿವ್ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿ ಈ ಅವಧಿಯಲ್ಲಿ 25 ಸಾವಿರಕ್ಕೂ ಹೆಚ್ಚು ಶಸ್ತ್ರಚಿಕಿತ್ಸೆ ಮಾಡಿದ ಹೆಗ್ಗಳಿಕೆ ಇವರದು. 

1969ರಲ್ಲಿ ಪದ್ಮಶ್ರೀ ಪುರಸ್ಕೃತರಾಗಿದ್ದ ಡಾ.ಆರ್.ಬಿ. ಪಾಟೀಲ್, ಉತ್ತರ‌ ಕರ್ನಾಟಕ ಭಾಗದಲ್ಲಿ ಪ್ರಥಮ ಕ್ಯಾನ್ಸರ್ ಆಸ್ಪತ್ರೆ ಪ್ರಾರಂಭಿಸಿ ಬಡವರಿಗೆ ಕಡಿಮೆ ದರದಲ್ಲಿ ಚಿಕಿತ್ಸೆ ನೀಡಿದ್ದರು‌.

 ವೈದ್ಯಕೀಯ ಕ್ಷೇತ್ರದಲ್ಲಿನ ಸೇವೆಗಾಗಿ ಅಂದಿನ ರಾಷ್ಟ್ರಪತಿ ಝಾಕೀರ್‌ ಹುಸೇನ್ ಅವರಿಂದ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ
'ಅಹಿಂದ ಕಿಂಗ್ ಸಿದ್ದರಾಮಯ್ಯ' ಜೀವಂತ ಇರುವಾಗಲೇ ಪರ್ಯಾಯ ನಾಯಕತ್ವದ ಕೂಗು ಏಕೆ?: ಬೈರತಿ ಸುರೇಶ್