
ನಂಜನಗೂಡು (ಫೆ.21): ಫಲವತ್ತಾದ ಬಾಳೆ ಬೆಳೆಗೆ ಸಾರ್ವಜನಿಕರ ದೃಷ್ಟಿ ಬೀಳಬಾರದೆಂಬ ಕಾರಣಕ್ಕೆ ರೈತನೊಬ್ಬ ತನ್ನ ಜಮೀನಿನ ಸುತ್ತಲೂ ದೃಷ್ಟಿ ಬೊಂಬೆಯ ಬದಲಾಗಿ ಮಾಡೆಲ್ಗಳ ಅರೆಬೆತ್ತಲೆ ಫೋಟೋಗಳನ್ನು ಅಳವಡಿಸಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಕಕ್ಕರಹಟ್ಟಿ ಗ್ರಾಮದಲ್ಲಿ ನಡೆದಿದೆ. ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
ಕಕ್ಕರಹಟ್ಟಿ ನಿವಾಸಿ ಸೋಮೇಶ್ ಎನ್ನುವವರೇ ಮಾಡೆಲ್ಗಳ ಭಾವಚಿತ್ರ ಅಳವಡಿಸಿರುವ ರೈತ. ಸೋಮೇಶ್ ತಮ್ಮ 4 ಎಕರೆ ಜಮೀನಿನಲ್ಲಿ ಬೆಳೆದಿರುವ ಬಾಳೆ ಬೆಳೆ ಫಲವತ್ತಾಗಿ ನೋಡುಗರನ್ನು ಆಕರ್ಷಿಸುತ್ತಿದೆ. ಹಾಗಾಗಿ ತನ್ನ ಬೆಳೆಗಳಿಗೆ ಜನರ ದೃಷ್ಟಿ ಬೀಳಬಾರದೆಂಬ ಉದ್ದೇಶದಿಂದ ಜಮೀನಿನ ಸುತ್ತಲೂ ಸುಮಾರು 10 ಸ್ಥಳಗಳಲ್ಲಿ ಮಾಡೆಲ್ಗಳ ಅರೆ ಬೆತ್ತಲೆ ಭಾವಚಿತ್ರ ಅಳವಡಿಸಿದ್ದಾರೆ.
ರಸ್ತೆ ಮಾರ್ಗದಲ್ಲಿ ಸಾಗುವ ಜನರು ಬಾಳೆ ಗಿಡದತ್ತ ಕಣ್ಣು ಹಾಯಿಸದೆ ಸುತ್ತಲೂ ಅಳವಡಿಸಿರುವ ಮಾಡೆಲ್ ಫೋಟೋಗಳನ್ನು ಕಣ್ತುಂಬಿಕೊಂಡು ಸಾಗುತ್ತಿದ್ದು, ಕೆಲ ಪಡ್ಡೆ ಹುಡುಗರ ನಿದ್ದೆಗೆಡಿಸಿದೆ. ಇದರಿಂದ ಕೆಲವರಿಗೆ ಇರಿಸು ಮುರಿಸು ಉಂಟಾಗಿ ಗ್ರಾಮಸ್ಥರನ್ನೂ ಕೆರಳಿಸಿದೆ.
ಇದನ್ನೂ ಓದಿ: ಜಮೀನಿಗೆ ಕೂಲಿ ಕೆಲಸಕ್ಕೆ ಬಂದ ಮಹಿಳೆಯರನ್ನು ವಿಮಾನದಲ್ಲಿ ಟೂರ್ ಮಾಡಿಸಿದ ಹರಪನಹಳ್ಳಿ ರೈತ!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ