Mandya news: ಕಬ್ಬಿನ ಗದ್ದೆಗೆ ಬೆಂಕಿ ಹಚ್ಚಿ ಆತ್ಮಾಹುತಿಗೆ ರೈತ ಯತ್ನ!

Published : Aug 05, 2023, 05:51 AM IST
Mandya news: ಕಬ್ಬಿನ ಗದ್ದೆಗೆ ಬೆಂಕಿ ಹಚ್ಚಿ ಆತ್ಮಾಹುತಿಗೆ ರೈತ ಯತ್ನ!

ಸಾರಾಂಶ

ನೀರಿಲ್ಲದೆ ಕಬ್ಬಿನ ಬೆಳೆ ಒಣಗುತ್ತಿದ್ದುದರಿಂದ ಬೇಸತ್ತ ರೈತನೊಬ್ಬ ಕಬ್ಬಿಗೆ ಬೆಂಕಿ ಹಚ್ಚಿ ಕೊನೆಗೆ ತಾನೂ ಸಜೀವದಹನವಾಗಲು ಯತ್ನಿಸಿದ ಘಟನೆ ಪಟ್ಟಣದ ಚನ್ನೇಗೌಡನದೊಡ್ಡಿಯಲ್ಲಿ ಶುಕ್ರವಾರ ಜರುಗಿದೆ.

ಮದ್ದೂರು (ಆ.5) :  ನೀರಿಲ್ಲದೆ ಕಬ್ಬಿನ ಬೆಳೆ ಒಣಗುತ್ತಿದ್ದುದರಿಂದ ಬೇಸತ್ತ ರೈತನೊಬ್ಬ ಕಬ್ಬಿಗೆ ಬೆಂಕಿ ಹಚ್ಚಿ ಕೊನೆಗೆ ತಾನೂ ಸಜೀವದಹನವಾಗಲು ಯತ್ನಿಸಿದ ಘಟನೆ ಪಟ್ಟಣದ ಚನ್ನೇಗೌಡನದೊಡ್ಡಿಯಲ್ಲಿ ಶುಕ್ರವಾರ ಜರುಗಿದೆ.

ಚನ್ನೇಗೌಡನದೊಡ್ಡಿ ಎಚ್‌.ಕೆ.ವೀರಣ್ಣಗೌಡರ ಕಾಲೇಜು ರಸ್ತೆಯಲ್ಲಿ ಕಿರಾಣಿ ಅಂಗಡಿ ನಡೆಸುತ್ತಿದ್ದ ಶಿವಣ್ಣ ಜಮೀನು ಬಳಿ ಕಣ್ಣೀರು ಹಾಕುತ್ತಾ ಕಬ್ಬಿನ ಬೆಳೆಗೆ ಬೆಂಕಿ ಹಾಕಿದ್ದಾನೆ. ನಂತರ ತಾನು ಜಮೀನಿನೊಳಗೆ ನುಗ್ಗಿ ಸಜೀವ ದಹನವಾಗಲು ಮುಂದಾದಾಗ ಸ್ಥಳಕ್ಕೆ ಧಾವಿಸಿದ ಅಕ್ಕಪಕ್ಕದ ಜಮೀನುಗಳ ರೈತರು ಶಿವಣ್ಣನನ್ನು ತಡೆದು ಸಂತೈಸಿದ್ದಾರೆ.

ಧಾರವಾಡ: ಸಾಲಬಾಧೆಗೆ ಒಂದೂವರೆ ತಿಂಗಳಲ್ಲಿ ಆರು ಜನ ರೈತರ ಆತ್ಮಹತ್ಯೆ

ಶಿವಣ್ಣ ಮತ್ತೊಬ್ಬ ರೈತನಿಂದ 1 ಎಕರೆ ಜಮೀನನ್ನು .12 ಸಾವಿರಕ್ಕೆ ಗುತ್ತಿಗೆ ಪಡೆದುಕೊಂಡಿದ್ದ. ಜಮೀನಿನಲ್ಲಿ .50 ಸಾವಿರ ಖರ್ಚು ಮಾಡಿ ಕಬ್ಬು ಬೆಳೆದಿದ್ದರು. ಕೆಆರ್‌ಎಸ್‌ ಜಲಾಶಯದಿಂದ ವಿ.ಸಿ.ನಾಲೆ ಮೂಲಕ ನೀರು ಹರಿಸುತ್ತಿದ್ದರೂ ಕೊನೇ ಭಾಗದ ಜಮೀನುಗಳಿಗೆ ಸಕಾಲದಲ್ಲಿ ನೀರು ತಲುಪದ ಹಿನ್ನೆಲೆಯಲ್ಲಿ ಕೈಗೆ ಬಂದ ಕಬ್ಬಿನ ಬೆಳೆ ಒಣಗುತ್ತಿರುವುದನ್ನು ಕಂಡು ಮನನೊಂದ ಶಿವಣ್ಣ ಕಳೆದ ಎರಡ್ಮೂರು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.

ಶುಕ್ರವಾರ ಮುಂಜಾನೆ ಜಮೀನು ಬಳಿ ಧಾವಿಸಿದ ಶಿವಣ್ಣ ಕಬ್ಬಿನ ಬೆಳೆಗೆ ಬೆಂಕಿ ಹಚ್ಚಿ ತಾನೂ ಸಜೀವದಹನವಾಗಲು ತೀರ್ಮಾನಿಸಿದ್ದಾರೆ. ಇದನ್ನು ಕಂಡ ರೈತರಾದ ಕೆಂಪಣ್ಣ, ಕಾಳಪ್ಪ, ತಮ್ಮಣ್ಣ ಹಾಗೂ ಸ್ವಾಮಿ ಅವರು ಬೆಂಕಿಗೆ ಹಾರಲು ಯತ್ನಿಸಿದ ಶಿವಣ್ಣನನ್ನು ಕಂಡು ಸಂತೈಸಿ ಧೈರ್ಯ ತುಂಬಿದ ನಂತರ ಮನೆಗೆ ಕರೆತಂದು ಬಿಟ್ಟಿದ್ದಾರೆ. ಈ ಸಂಬಂಧ ದೂರು ದಾಖಲಾಗಿಲ್ಲ.

 

ಕಲಬುರಗಿ: ಸಾಲದ ಬಾಧೆಯಿಂದ ವಿಷ ಸೇವಿಸಿ ರೈತ ಆತ್ಮಹತ್ಯೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ
Breaking ಮಂಡ್ಯ ಬಸ್ ಅಪಘಾತದಲ್ಲಿ 23 ಪ್ರಯಾಣಿಕರಿಗೆ ಗಾಯ, ಇಬ್ಬರು ಗಂಭೀರ