ಕಲಾಪದ ವೇಳೆ ಸ್ವಾರಸ್ಯಕರ ಘಟನೆ | ಈಶ್ವರ-ವಿಷ್ಣು ಎಲ್ಲವೂ ನಾನೇ ಎಂದ ಸಿಎಂ, ಸಂಧಿಗಳ ಸಹವಾಸ ನಮಗೆ ಬೇಡವೆಂದ ಅಶೋಕ್!

Kannadaprabha News, Ravi Janekal |   | Kannada Prabha
Published : Aug 13, 2025, 02:40 PM IST
Karnataka Chief Minister Siddaramaiah (Photo/ANI)

ಸಾರಾಂಶ

ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಧಾನಸಭೆಯಲ್ಲಿ ತಮ್ಮ ಹೆಸರಿನಲ್ಲಿ ಈಶ್ವರ ಮತ್ತು ವಿಷ್ಣು ಇದ್ದಾರೆ ಎಂದು ಹೇಳಿದ್ದಾರೆ. ಸಿದ್ದ ಎಂದರೆ ಈಶ್ವರ, ರಾಮ ಎಂದರೆ ವಿಷ್ಣುವಿನ ಅವತಾರ ಎಂದು ವಿವರಿಸಿದರು. ಈ ಹೇಳಿಕೆ ಸದನದಲ್ಲಿ ನಗೆ ಉಕ್ಕಿಸಿದೆ.

ಬೆಂಗಳೂರು (ಆ.13): ‘ಈಶ್ವರ-ವಿಷ್ಣು ಎಲ್ಲವೂ ನಾನೇ ಇದ್ದೇನೆ. ಸಿದ್ದ ಎಂದರೆ ಈಶ್ವರ ಹಾಗೂ ರಾಮ ಎಂದರೆ ವಿಷ್ಣು. ಇಬ್ಬರೂ ನನ್ನ ಹೆಸರಿನಲ್ಲೇ (ಸಿದ್ದರಾಮಯ್ಯ) ಇದ್ದಾರೆ’! ಎಂದು ಮುಖ್ಯಮಂತ್ರಿ ಹೇಳಿದ ಪ್ರಸಂಗ ಮಂಗಳವಾರ ನಡೆಯಿತು.

ವಿಧಾನಸಭೆ ಕಲಾಪದ ಭೋಜನ ವಿರಾಮದ ಬಳಿಕ ಕಪ್‌ ತುಳಿತ ಬಗ್ಗೆ ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಮಾತು ಮುಂದುವರೆಸಿದ್ದರು. ಈ ವೇಳೆ ಆಡಳಿತ ಪಕ್ಷದ ಸಾಲಿನಲ್ಲಿ ಬಹುತೇಕ ಸಚಿವರು ಹಾಜರಿರಲಿಲ್ಲ. ಈ ಬಗ್ಗೆ ಆರ್‌. ಅಶೋಕ್ ಅಸಮಾಧಾನ ವ್ಯಕ್ತಪಡಿಸಿದರು. ಆಗ ಮಧ್ಯಪ್ರವೇಶ ಮಾಡಿದ ಕೃಷ್ಣಬೈರೇಗೌಡ ಅವರು, ಡಾ। ಜಿ.ಪರಮೇಶ್ವರ್‌ ಹಾಗೂ ಸಿದ್ದರಾಮಯ್ಯ ಅವರ ಕಡೆಗೆ ತೋರಿಸಿ ಪರಮ ಈಶ್ವರನೇ ಇದ್ದಾಗ ಬೇರೆಯವರ ಮಾತೇಕೆ. ಈಶ್ವರ (ಪರಮೇಶ್ವರ್), ರಾಮ (ಸಿದ್ದರಾಮಯ್ಯ), ಕೃಷ್ಣ (ಕೃಷ್ಣಬೈರೇಗೌಡ) ಎಲ್ಲರೂ ಇದ್ದಾರೆ. ನೀವು ಮಾತನಾಡಿ’ ಎಂದರು.

ಆಗ ಮುಖ್ಯಮಂತ್ರಿ ಸಿದ್ದರಾಮಯ್ಯ, ಈಶ್ವರ-ವಿಷ್ಣು ಎಲ್ಲವೂ ನಾನೇ ಇದ್ದೇನೆ. ನನ್ನ ಹೆಸರಿನಲ್ಲೇ ಈಶ್ವರ ಹಾಗೂ ವಿಷ್ಣು ಇದ್ದಾರೆ. ಸಿದ್ದ ಎಂದರೆ ಈಶ್ವರ, ರಾಮ ಎಂದರೆ ವಿಷ್ಣು ಅವತಾರ. ಎರಡೂ ನನ್ನ ಬಳಿಯೇ ಇವೆ ಎಂದರು.

ಸಂಧಿಗಳ ಸಹವಾಸ ಬೇಡ- ಕೈ ಮುಗಿದ ಅಶೋಕ್:

ಈ ವೇಳೆ ಪರಮೇಶ್ವರ್‌ ಅವರೂ ಇದ್ದಾರೆ ಎಂದು ಪ್ರತಿಪಕ್ಷ ಸದಸ್ಯರು ಹೇಳಿದ ತಕ್ಷಣ ಸಿದ್ದರಾಮಯ್ಯ ಅವರು, ‘ಪರಮೇಶ್ವರ ಅದು ಸವರ್ಣ ದೀರ್ಘ ಸಂಧಿ’ ಎಂದಾಗ ಸದನದಲ್ಲಿ ಎಲ್ಲರಲ್ಲೂ ನಗು. ಆಗ ಆರ್‌.ಅಶೋಕ್‌, ‘ನಾನು ಸಂಧಿಗಳಿಗೆ ಹೋಗುವುದಿಲ್ಲ. ಸಂಧಿಗಳ ಸಹವಾಸ ನಮಗೆ ಬೇಡ’ ಎಂದು ಕೈ ಮುಗಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸ್ತ್ರಿರೋಗ ತಜ್ಞೆ, ಪುತ್ರನ ದುರಂತ ಅಂತ್ಯ, ರಾತ್ರಿ ಜಗಳವಾಡಿದ ಇಬ್ಬರು ಬೆಳಗ್ಗೆ ಶವವಾಗಿ ಪತ್ತೆ
ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!