ಶಿವಮೊಗ್ಗದ ಸರ್ಕಾರಿ ನೌಕರ ಡೆತ್‌ನೋಟ್ ಬರೆದಿಟ್ಟು ನಾಪತ್ತೆ!

Published : Jul 20, 2023, 06:21 AM IST
ಶಿವಮೊಗ್ಗದ ಸರ್ಕಾರಿ ನೌಕರ ಡೆತ್‌ನೋಟ್ ಬರೆದಿಟ್ಟು ನಾಪತ್ತೆ!

ಸಾರಾಂಶ

ಬದುಕಿಗೆ ವಿದಾಯ ಹೇಳುವುದಾಗಿ ವಾಟ್ಸಪ್‌ನಲ್ಲಿ ಡೆತ್‌ ನೋಟ್‌ ಬರೆದಿಟ್ಟು ನಾಪತ್ತೆ ಆಗಿರುವ ಶಿವಮೊಗ್ಗ ತಾಲೂಕು ಘಟಕದ ಎನ್‌ಪಿಎಸ್‌ ನೌಕರರ ಸಂಘದ ಅಧ್ಯಕ್ಷ ಪ್ರಭಾಕರ್‌ ಅವರನ್ನು ಹುಡುಕಿಕೊಡುವಂತೆ ಪತ್ನಿ ಕೋಟೆ ಠಾಣೆ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.

ಶಿವಮೊಗ್ಗ (ಜು.20) :  ಬದುಕಿಗೆ ವಿದಾಯ ಹೇಳುವುದಾಗಿ ವಾಟ್ಸಪ್‌ನಲ್ಲಿ ಡೆತ್‌ ನೋಟ್‌ ಬರೆದಿಟ್ಟು ನಾಪತ್ತೆ ಆಗಿರುವ ಶಿವಮೊಗ್ಗ ತಾಲೂಕು ಘಟಕದ ಎನ್‌ಪಿಎಸ್‌ ನೌಕರರ ಸಂಘದ ಅಧ್ಯಕ್ಷ ಪ್ರಭಾಕರ್‌ ಅವರನ್ನು ಹುಡುಕಿಕೊಡುವಂತೆ ಪತ್ನಿ ಕೋಟೆ ಠಾಣೆ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.

ಪ್ರಭಾಕರ್‌ ಬುಧವಾರ ಬೆಳಗ್ಗೆ 7.45ಕ್ಕೆ ಶಿವಮೊಗ್ಗ ನಗರದ ಸೋಮಯ್ಯ ಲೇಔಟ್‌ನ ಮನೆಯಿಂದ ಕಾಣೆಯಾಗಿದ್ದಾರೆ. ಕಳೆದ 6 ತಿಂಗಳ ಹಿಂದೆ ಎಫ್‌ಡಿಎ ಹುದ್ದೆಯಿಂದ ಎಸ್‌ಡಿ​ಎ ಹುದ್ದೆಗೆ ಹಿಂಬಡ್ತಿ ಪಡೆದಿದ್ದರು. ಅಲ್ಲದೇ, ಇವರಿಗೆ ಆರು ತಿಂಗಳಿಂದ ಸಂಬಳ ಆಗಿರಲಿಲ್ಲ. ಇದರಿಂದ ತೀವ್ರ ಮನನೊಂದಿದ್ದರು ಎಂದು ಪತ್ನಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ನಾಪತ್ತೆಯಾಗಿರುವ ಪ್ರಭಾಕರ್‌ ಕಳುಹಿಸಿರುವ ಮೆಸೇಜ್‌ನಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್‌. ಷಡಾಕ್ಷರಿ ಸೇರಿದಂತೆ ಹಲವು ಗಣ್ಯರ ಹೆಸರುಗಳನ್ನು ಉಲ್ಲೇಖ ಮಾಡಲಾಗಿದೆ. ಬದುಕಿಗೆ ವಿದಾಯ ಹೇಳುವುದಾಗಿ ಸಂದೇಶ ರವಾನಿಸಿದ ನಂತರ ಅವರ ಮೊಬೈಲ್‌ ಸ್ವಿಚ್‌ ಆಫ್‌ ಆಗಿದೆ.

ಆಂಧ್ರದಲ್ಲಿ ಮಗು ನಾಪತ್ತೆ: ಬೆಂಗಳೂರಿನಲ್ಲಿ ಹುಡುಕಾಟ!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ದ್ವೇಷ ಭಾಷಣ ತಡೆಗೆ ಕಾನೂನು ಯತ್ನ: ಕಾಂಗ್ರೆಸ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಆಕ್ರೋಶ
ದ್ವೇಷ ಭಾಷಣ ಶಾಸನ ಕಾಂಗ್ರೆಸ್ ಕ್ರೂರ ಸಂಪ್ರದಾಯದ ಪ್ರತಿಬಿಂಬ: ಪ್ರಲ್ಹಾದ್ ಜೋಶಿ ಕಿಡಿ