ಬದುಕಲಿ ಗೋಮಾತೆ: ಇದು ಅಭಯಾಕ್ಷರ ಅಭಿಯಾನದ ಕತೆ

Published : Feb 24, 2019, 03:57 PM IST
ಬದುಕಲಿ ಗೋಮಾತೆ: ಇದು ಅಭಯಾಕ್ಷರ ಅಭಿಯಾನದ ಕತೆ

ಸಾರಾಂಶ

ಗೋಸಂರಕ್ಷಣೆಯ ಹಕ್ಕೊತ್ತಾಯಕ್ಕೆ ಅಭಯಾಕ್ಷರ ಅಭಿಯಾನ| ರಾಜ್ಯಾದ್ಯಂತ 1 ಕೋಟಿ ಸಹಿ ಸಂಗ್ರಹ| ಸಂಗ್ರಹಗೊಂಡ ಸಹಿ ಪ್ರಧಾನಿ, ಮುಖ್ಯಮಂತ್ರಿಗಳಿಗೆ ರವಾನೆ| ನಾಳೆ (25-02-2019) ರಾಜ್ಯಾದ್ಯಂತ ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಕೆ! ಗೋಪ್ರೇಮಿ ಸಂತರು, ಗಣ್ಯಮಾನ್ಯರು ಉಪಸ್ಥಿತಿ

ಬೆಂಗಳೂರು(ಫೆ.24): ಗೋಸಂರಕ್ಷಣೆಯ ಹಕ್ಕೊತ್ತಾಯದ "ಅಭಯಾಕ್ಷರ" ಅಭಿಯಾನದಲ್ಲಿ ರಾಜ್ಯಾದ್ಯಂತ ಸಂಗ್ರಹವಾದ ಸುಮಾರು ಒಂದು ಕೋಟಿ ಅರ್ಜಿಗಳನ್ನು ದೇಶದ ಪ್ರಧಾನಮಂತ್ರಿಗಳು ಹಾಗೂ ರಾಜ್ಯದ ಮುಖ್ಯಮಂತ್ರಿಗಳಿಗೆ ಜಿಲ್ಲಾಧಿಕಾರಿಗಳ ಮೂಲಕ ಸಲ್ಲಿಸುವ ಕಾರ್ಯಕ್ರಮ ನಾಳೆ (25-02-2019) ರಾಜ್ಯಾದ್ಯಂತ ನಡೆಯಲಿದೆ. 

ಈ ಹಿಂದೆ 21.01.2019 ರಂದು ಸಲ್ಲಿಕೆಗೆ ದಿನಾಂಕ ನಿಗದಿಯಾಗಿತ್ತು. ಆದರೆ ಅಂದು ಪೂಜ್ಯ ಸಿದ್ದಗಂಗಾ ಶ್ರೀಗಳು ಲಿಂಗೈಕ್ಯರಾದ ಕಾರಣಕ್ಕೆ ರಾಜ್ಯಾದ್ಯಂತ ಅಭಯಾಕ್ಷರ ಸಲ್ಲಿಕೆ ಮುಂದೂಡಲ್ಪಟ್ಟಿತ್ತು.

ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಭಾರತೀಯ ಗೋಪರಿವಾರದ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಅಭಯಾಕ್ಷರ ಸಲ್ಲಿಕೆಯಾಗಲಿದ್ದು, ನಾಡಿನ ಅನೇಕ ಗೋಪ್ರೇಮಿ ಸಂತರು, ಗಣ್ಯಮಾನ್ಯರು ಉಪಸ್ಥಿತರಿರಲಿದ್ದಾರೆ. 

ಬೆಂಗಳೂರಿನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬೆಂಗಳೂರು ಜಿಲ್ಲೆಯಲ್ಲಿ ಸಂಗ್ರಹವಾದ ಅಭಯಾಕ್ಷರ ಸಲ್ಲಿಕೆ ನಾಳೆ (25-02-2019) ಮಧ್ಯಾಹ್ನ 3.00 ರಿಂದ 4.00 ಗಂಟೆಯ ಸಮಯಕ್ಕೆ ನಡೆಯಲಿದೆ. 

ಈ ಸಂದರ್ಭದಲ್ಲಿ ಗೋಪ್ರೇಮಿ ಸಂತರು - ಗಣ್ಯರು ಹಾಗೂ ಅನೇಕ ಗೋಪ್ರೇಮಿಗಳು ಉಪಸ್ಥಿತರಿದ್ದು, ಹಕ್ಕೊತ್ತಾಯದ ಪತ್ರಗಳನ್ನು ಸಲ್ಲಿಕೆಮಾಡಿ ; ಸಂಪೂರ್ಣ ಗೋಹತ್ಯಾ ನಿಷೇಧಕ್ಕೆ ಆಗ್ರಹಿಸಲಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರಾಜ್ಯದಲ್ಲಿ ಕೈ ಮೀರಿದ ಕಳ್ಳರ ಹಾವಳಿ, ಕಾನೂನು ವ್ಯವಸ್ಥೆ ಸಂಪೂರ್ಣ ವಿಫಲ? ಪೊಲೀಸರ ಮನೆಗಳನ್ನೇ ಬಿಡುತ್ತಿಲ್ಲ ಖದೀಮರು!
ಕಿತ್ತೂರು ಕರ್ನಾಟಕಕ್ಕೆ 5 ಸಾವಿರ ಕೋಟಿ ನೀಡಿ, ಇಲ್ಲವೇ ಪ್ರತ್ಯೇಕ ರಾಜ್ಯ ಕೊಡಿ: ಶಾಸಕ ರಾಜು ಕಾಗೆ