Bengaluru crime: ಚಪ್ಪಲಿ ಹುಡುಕಿ ಕೊಡಿ ಪೊಲೀಸರಿಗೆ ದೂರು ನೀಡಿದ ಯುವಕ!

Published : Jul 18, 2023, 04:45 AM IST
Bengaluru crime: ಚಪ್ಪಲಿ ಹುಡುಕಿ ಕೊಡಿ ಪೊಲೀಸರಿಗೆ ದೂರು ನೀಡಿದ ಯುವಕ!

ಸಾರಾಂಶ

‘ನನ್ನ ಚಪ್ಪಲಿಗಳು ಕಳ್ಳತನವಾಗಿದ್ದು, ಹುಡುಕಿ ಕೊಡಿ’ ಎಂದು ಯುವಕನೊಬ್ಬ ಪೊಲೀಸ್‌ ನಿಯಂತ್ರಣ ಕೊಠಡಿಗೆ (112) ಕರೆ ಮಾಡಿದ್ದ ಪ್ರಸಂಗವೊಂದು ನಡೆದಿದೆ.

ಬೆಂಗಳೂರು (ಜು.18) ‘ನನ್ನ ಚಪ್ಪಲಿಗಳು ಕಳ್ಳತನವಾಗಿದ್ದು, ಹುಡುಕಿ ಕೊಡಿ’ ಎಂದು ಯುವಕನೊಬ್ಬ ಪೊಲೀಸ್‌ ನಿಯಂತ್ರಣ ಕೊಠಡಿಗೆ (112) ಕರೆ ಮಾಡಿದ್ದ ಪ್ರಸಂಗವೊಂದು ನಡೆದಿದೆ.

ಭಾನುವಾರ ರಾತ್ರಿ ಹೈಗ್ರೌಂಡ್‌್ಸ ಪೊಲೀಸ್‌ ಠಾಣೆ(Highground police station) ವ್ಯಾಪ್ತಿಯ ಕಾರ್‌ ಸ್ಟ್ರೀಟ್‌ನಲ್ಲಿರುವ ಸಭಾ ಭವನವೊಂದಕ್ಕೆ ಯುವಕ ಬಂದಿದ್ದಾನೆ. ಈ ವೇಳೆ ಹೊರಗೆ ಚಪ್ಪಲಿ ಬಿಟ್ಟು ಕಾರ್ಯಕ್ರಮಕ್ಕೆ ತೆರಳಿದ್ದಾನೆ. ಇದಾದ ಕೆಲ ನಿಮಿಷಗಳ ಬಳಿಕ ಸಭಾ ಭವನದಿಂದ ಹೊರಗೆ ಬಂದು ನೋಡಿದಾಗ ಚಪ್ಪಲಿಗಳಿರಲಿಲ್ಲ. ಸುತ್ತಮುತ್ತ ಹುಡುಕಾಡಿದ್ದು, ಎಲ್ಲಿಯೂ ಚಪ್ಪಲಿಗಳು ಕಾಣಿಸಿಲ್ಲ. ಇದರಿಂದ ಬೇಸರಗೊಂಡ ಯುವಕ, ಪೊಲೀಸ್‌ ಸಹಾಯವಾಣಿ 112ಕ್ಕೆ ಕರೆ ಮಾಡಿ, ಸಭಾಭವನದಲ್ಲಿ ಚಪ್ಪಲಿಗಳು ಕಳ್ಳತನವಾಗುತ್ತಿವೆ. ಪೊಲೀಸರನ್ನು ಸ್ಥಳಕ್ಕೆ ಕಳುಹಿಸಿ ಚಪ್ಪಲಿ ಹುಡುಕಿ ಕೊಡಿ ಎಂದು ಕೇಳಿಕೊಂಡಿದ್ದ.

Bengaluru crime: ಕೋಳಿ ಅಂಗಡಿಗೆ ವಿರೋಧಿಸಿದ್ದಕ್ಕೆ ಚಾಕು ಇರಿದು ವೃದ್ಧನ ಹತ್ಯೆ!

ಇದರ ಬೆನ್ನಲ್ಲೇ ಗಸ್ತಿನಲ್ಲಿದ್ದ ಹೊಯ್ಸಳ ಸಿಬ್ಬಂದಿ ಸ್ಥಳಕ್ಕೆ ಬಂದು ಯುವಕನಿಂದ ಮಾಹಿತಿ ಪಡೆದು ಸಭಾಭವನದ ಸುತ್ತಮುತ್ತ ಚಪ್ಪಲಿ ಹುಡುಕಾಡಿದ್ದಾರೆ. ಆದರೆ, ಚಪ್ಪಲಿ ಸಿಕ್ಕಿಲ್ಲ. ಬಳಿಕ ಪೊಲೀಸರು, ಚಪ್ಪಲಿ ಕಳುವಾಗಿದ್ದರೆ, ಪೊಲೀಸ್‌ ಠಾಣೆಗೆ ಬಂದು ದೂರು ಕೊಡಬೇಕು ಎಂದು ಬುದ್ಧಿವಾದ ಹೇಳಿ ಕಳುಹಿಸಿದ್ದಾರೆ ಎನ್ನಲಾಗಿದೆ.

ಬ್ಯಾಗಿನಲ್ಲಿದ್ದ ಚಿನ್ನಾಭರಣ ದೋಚಿದ ಕಳ್ಳರು

ಹುಬ್ಬಳ್ಳಿ: ಬೆಂಗಳೂರು- ಹುಬ್ಬಳ್ಳಿ ಎಕ್ಸಪ್ರೆಸ್‌ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಸ್ಥಳೀಯ ಕೇಶ್ವಾಪುರದ ಮಹಿಳಾ ಪ್ರಯಾಣಿಕರೊಬ್ಬರ ವ್ಯಾನಿಟಿ ಬ್ಯಾಗಿನಲ್ಲಿದ್ದ .3.06 ಲಕ್ಷ ಮೌಲ್ಯದ ಚಿನ್ನಾಭರಣ, 2 ಮೊಬೈಲ್‌, .50 ಸಾವಿರ ನಗದು ದೋಚಿಕೊಂಡು ಹೋಗಿರುವ ಘಟನೆ ನಡೆದಿದೆ. ವ್ಯಾನಿಟಿ ಬ್ಯಾಗಿನಲ್ಲಿದ್ದ 36 ಗ್ರಾಂ ತೂಕದ ಚಿನ್ನಾಭರಣ, .50 ಸಾವಿರ ನಗದು ಹಾಗೂ .30 ಸಾವಿರ ಮೌಲ್ಯದ 2 ಮೊಬೈಲ್‌ ಕಳ್ಳತನವಾಗಿದೆ. ದಾವಣಗೆರೆ ರೈಲ್ವೆ ನಿಲ್ದಾಣದ ಹತ್ತಿರ ನೋಡಿದಾಗ ಕಳ್ಳತನವಾಗಿರುವುದು ಗೊತ್ತಾಗಿದೆ. ಈ ಕುರಿತು ಹುಬ್ಬಳ್ಳಿ ರೈಲ್ವೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಳೆಬೆಳಗುಂದಿ ಭದ್ರಕಾಳೇಶ್ವರಿ ದೇಗುಲದಲ್ಲಿ ಕಳ್ಳತನ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ
Breaking ಮಂಡ್ಯ ಬಸ್ ಅಪಘಾತದಲ್ಲಿ 23 ಪ್ರಯಾಣಿಕರಿಗೆ ಗಾಯ, ಇಬ್ಬರು ಗಂಭೀರ