ಸಾಲ ಪಡೆದು ಕಂತು ಕಟ್ಟದೇ ವಂಚಿಸಿದ ಗೆಳೆಯ, ಸ್ನೇಹಿತನೆಂದು ತನ್ನ ಹೆಸರಲ್ಲಿ ಲೋನ್ ಕೊಡಿಸಿದ ತಪ್ಪಿಗೆ ವ್ಯಕ್ತಿ ಸ್ವಹ ತ್ಯೆ!

Published : Feb 02, 2025, 01:56 PM IST
ಸಾಲ ಪಡೆದು ಕಂತು ಕಟ್ಟದೇ ವಂಚಿಸಿದ ಗೆಳೆಯ, ಸ್ನೇಹಿತನೆಂದು ತನ್ನ ಹೆಸರಲ್ಲಿ ಲೋನ್ ಕೊಡಿಸಿದ ತಪ್ಪಿಗೆ ವ್ಯಕ್ತಿ ಸ್ವಹ ತ್ಯೆ!

ಸಾರಾಂಶ

ಮೈಸೂರಿನಲ್ಲಿ ಸ್ನೇಹಿತನಿಗೆ ಸಾಲ ಕೊಡಿಸಿದ ವ್ಯಕ್ತಿಯೊಬ್ಬ ಬ್ಯಾಂಕಿನಿಂದ ಕಿರುಕುಳಕ್ಕೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ನೇಹಿತನಿಗೆ ಕಾರು ಸಾಲ ಮತ್ತು ವೈಯಕ್ತಿಕ ಸಾಲ ಕೊಡಿಸಿದ್ದ ವ್ಯಕ್ತಿ, ಸ್ನೇಹಿತ ಕಂತುಗಳನ್ನು ಪಾವತಿಸದ ಕಾರಣ ಸಾಲ ತೀರಿಸಲು ಒತ್ತಡಕ್ಕೆ ಒಳಗಾಗಿದ್ದರು.

ಮೈಸೂರು (ಫೆ.2): ಖಾಸಗಿ ಬ್ಯಾಂಕ್‌ನಲ್ಲಿ ಸ್ನೇಹಿತನಿಗೆ ಸಾಲ ಕೊಡಿಸಿದ ತಪ್ಪಿಗೆ ವ್ಯಕ್ತಿಯೊಬ್ಬ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ಮೈಸೂರು ತಾಲೂಕಿನ ದಂಡಿಕೆರೆ ಗ್ರಾಮದ ಬಳಿ ನಡೆದಿದೆ.

ಸಿದ್ದೇಶ್(40), ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಮೃತ ಸಿದ್ದೇಶ್ ಸ್ನೇಹಿತನಾದ ಮಣಿಕಂಠ ಎಂಬಾತನಿಗೆ ಖಾಸಗಿ ಬ್ಯಾಂಕ್‌ನಲ್ಲಿ ಕಾರು ಲೋನ್ ಕೊಡಿಸಿದ್ದ. ಜೊತೆಗೆ ತನ್ನ ಹೆಸರಿನಲ್ಲಿ 2 ಲಕ್ಷ ರೂ. ನಗದು ಸಾಲ ಕೊಡಿಸಿದ್ದ ಮೃತ ಸಿದ್ದೇಶ್. ಆದರೆ ಸ್ನೇಹಿತನ ಹೆಸರಲ್ಲಿ ಸಾಲ ಪಡೆದ ಮಣಿಕಂಠ ಕೇವಲ 2 ಕಂತು ಕಟ್ಟಿ ಸುಮ್ಮನಾಗಿದ್ದ. ಹಲವು ಸಲ ಬ್ಯಾಂಕ್ ನೋಟಿಸ್ ಕೊಟ್ಟರು ಕಂತು ಕಟ್ಟದೇ ನಿರ್ಲಕ್ಷ್ಯವಹಿಸಿದ್ದಾನೆ.

ಇದನ್ನೂ ಓದಿ: ಬೆಡ್‌ರೂಂಗೆ ಹೋದವಳು ಬಾಗಿಲು ತೆಗೆಯಲೇ ಇಲ್ಲ; ಮದುವೆ ದಿನವೇ ನವವಧು ಜೀವನ ಅಂತ್ಯ! ಆಗಿದ್ದೇನು?

ಸಾಲ ತೀರಿಸದ ಕಾರಣ ಖಾಸಗಿ ಬ್ಯಾಂಕ್ ಸಿದ್ದೇಶ್‌ಗೆ ಕರೆ ಮಾಡಿ ನಿಮ್ಮ ಸ್ನೇಹಿತ ಕಂತುಗಳು ಪಾವತಿಸುತ್ತಿಲ್ಲ. ಸ್ನೇಹಿತನಿಗೆ ಕೊಡಿಸಿರುವ ಸಾಲ ನೀವೇ ತೀರಿಸಬೇಕು ಎಂದು ಕರೆ ಮಾಡಿ ತಿಳಿಸಿದ್ದಾರೆ. ಸ್ನೇಹಿತನನ್ನ ನಂಬಿ ಸಾಲ ಕೊಡಿಸಿದ ತಪ್ಪಿಗೆ ಸಾಲಗಾರನಾಗಿ ಮೃತ ಸಿದ್ದೇಶ್ ಇಕ್ಕಟ್ಟಿಗೆ ಸಿಲುಕಿದ್ದಾನೆ. ಸ್ನೇಹಿತನ ಮೋಸಕ್ಕೆ ತೀವ್ರ ಮನನೊಂದ ಸಿದ್ದೇಶ್, ನಂಜನಗೂಡು ತಾಲೂಕಿನ ಮುಲ್ಲೂಪುರ ಗ್ರಾಮದಲ್ಲಿ ಮರಕ್ಕೆ ನೇಣು ಬಿಗಿದುದಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸದ್ಯ ಆತ್ಮಹತ್ಯೆ ಘಟನೆ ಸಂಬಂಧ ವರುಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರು: ನಗರದಲ್ಲಿ 1000ಕ್ಕೂ ಅಧಿಕ ಅಪಾಯಕಾರಿ ಮರ ಪತ್ತೆ!
ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ