
ಹಾಸನ (ಜು.30) : ಜೋಕಾಲಿ ಆಡಲು ಹೋಗಿ ಬಾಲಕಿ ಪ್ರಾಣ ಕಳೆದುಕೊಂಡಿರುವ ಹೃದಯವಿದ್ರಾವಕ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಹೆತ್ತೂರು ಹೋಬಳಿ ವನಗೂರು ಸಮೀಪದ ಕುಣಿಕೇರಿ ಗ್ರಾಮದಲ್ಲಿ ನಡೆದಿದೆ.
ಸಾನಿತಾ (9) ಮೃತಪಟ್ಟ ಬಾಲಕಿ. ಕುಣಿಕೇರಿ ಬಸವರಾಜು-ಬೇಬಿ ದಂಪತಿಯ ಒಬ್ಬಳೇ ಪುತ್ರಿ ಸಾನಿತಾ ನಾಲ್ಕನೇ ತರಗತಿ ಓದುತ್ತಿದ್ದು, ಇಂದು ರಜೆಯಿದ್ದ ಕಾರಣ ಮನೆಯೊಳಗೆ ಸೀರೆ ಕಟ್ಟಿಕೊಂಡು ಜೋಕಾಲಿ ಆಡುತ್ತಿದ್ದಳು, ಈ ವೇಳೆ ಆಯತಪ್ಪಿ ಸಾನಿತಾ ಕುತ್ತಿಗಿಗೆ ಸೀರೆ ಬಿಗಿದು ಸಾವನ್ನಪ್ಪಿದ್ದಾಳೆ.
ಕಾರ್ಕಳ: ಜೋಕಾಲಿ ಆಡುವಾಗ ಕುತ್ತಿಗೆಗೆ ಸೀರೆ ಸಿಲುಕಿ 9ರ ಬಾಲಕಿ ಸಾವು
ಈ ಹಿಂದೆಯೂ ರಜಾ ದಿನಗಳಲ್ಲಿ ಮನೆಯಲ್ಲಿನ ಸೀರೆ ಬಳಸಿ ಜೋಕಾಲಿ ಮಾಡಿಕೊಂಡು ಆಟವಾಡುತ್ತಿದ್ದ ಮಗಳು. ಕೆಲವೊಮ್ಮೆ ಮರದ ರೆಂಬೆಗಳಿಗೆ ಜೋಕಾಲಿ ಕಟ್ಟಿ ಆಟವಾಡಿದ್ದೂ ಇದೆ. ಆದರೆ ವಿಧಿಯಾಟ ಮನೆಯಲ್ಲಿ ಕಟ್ಟಿದ ಸೀರೆಯ ಜೋಕಲಿ ಮಗುವಿಗೆ ಕುಣಿಕೆಯಾಗಿ ಪರಿಣಮಿಸಿರುವುದು ದುರಂತವಾಗಿದೆ.
ಇದ್ದ ಒಬ್ಬಳೇ ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. ಸುತ್ತಮುತ್ತಲಿನ ಜನರು ಈ ದೃಶ್ಯಕಂಡು ಮಮ್ಮಲ ಮರುಗಿದರು. ಮಾಹಿತಿ ತಿಳಿದು ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದರು. ಯಸಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡರು.
ಮಕ್ಕಳು ಆಟವಾಡುವಾಗಲೂ ಎಚ್ಚರಿಕೆ ವಹಿಸುವುದು ಅತ್ಯಗತ್ಯ, ಪೋಷಕರು ಮಕ್ಕಳ ಬಗ್ಗೆ ನಿಗಾ ಇಟ್ಟಿರಬೇಕೆಂಬುದು ಈ ಘಟನೆಯೂ ಎಚ್ಚರಿಕೆ ನೀಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ