ಮಾನಸಿಕ ಖಿನ್ನತೆಯಿಂದ ಹಳಿಗೆ ಜಿಗಿದು ಆತ್ಮಹತ್ಯೆ ಯತ್ನಿಸಿದ ವ್ಯಕ್ತಿ; ಕೆಲ ಕಾಲ ಮೆಟ್ರೋ ಸಂಚಾರ ಸ್ಥಗಿತ!

Published : Jun 10, 2024, 11:52 PM ISTUpdated : Jun 11, 2024, 12:14 AM IST
ಮಾನಸಿಕ ಖಿನ್ನತೆಯಿಂದ ಹಳಿಗೆ ಜಿಗಿದು ಆತ್ಮಹತ್ಯೆ ಯತ್ನಿಸಿದ ವ್ಯಕ್ತಿ; ಕೆಲ ಕಾಲ ಮೆಟ್ರೋ ಸಂಚಾರ ಸ್ಥಗಿತ!

ಸಾರಾಂಶ

ಮಾನಸಿಕ ಖಿನ್ನತೆಯಿಂದ ವ್ಯಕ್ತಿಯೋರ್ವ ಮೆಟ್ರೋ ಹಳಿಯ ಮೇಲೆ ಬಿದ್ದು ಆತ್ಮಹತ್ಯೆ ಯತ್ನಿಸಿ ತೀವ್ರ ಗಾಯಗೊಂಡ ಘಟನೆ ಬೆಂಗಳೂರಿನ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಳ್ಳಿ ಮೆಟ್ರೋ ಸ್ಟೇಷನ್‌ನಲ್ಲಿ ನಡೆದಿದೆ.

ಬೆಂಗಳೂರು (ಜೂ.11): ಮಾನಸಿಕ ಖಿನ್ನತೆಯಿಂದ ವ್ಯಕ್ತಿಯೋರ್ವ ಮೆಟ್ರೋ ಹಳಿಯ ಮೇಲೆ ಬಿದ್ದು ಆತ್ಮಹತ್ಯೆ ಯತ್ನಿಸಿ ತೀವ್ರ ಗಾಯಗೊಂಡ ಘಟನೆ ಬೆಂಗಳೂರಿನ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಳ್ಳಿ ಮೆಟ್ರೋ ಸ್ಟೇಷನ್‌ನಲ್ಲಿ ನಡೆದಿದೆ.

ಎಂ ಸಾಗರ್ (34) ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಬಳಿಕ ಆಸ್ಪತ್ರೆಗೆ ದೌಡಾಯಿಸಿದ ಗೋವಿಂದರಾಜನಗರ ಪೊಲೀಸರು. ಗಾಯಾಳು ಬಗ್ಗೆ ಕುಟುಂಬಸ್ಥರು, ಮೆಟ್ರೋ ಸಿಬ್ಬಂದಿಯಿಂದ ಮಾಹಿತಿ ಪಡೆದ ಪೊಲೀಸರು. ಘಟನೆಯಿಂದ ಕೆಲಕಾಲ ಮೆಟ್ರೋ ಸ್ಥಗಿತವಾಗಿ ಪ್ರಯಾಣಿಕರು ಪರದಾಡುವಂತಾಯಿತು. ಅಧಿಕಾರಿಗಳು ಸ್ಥಳ ಪರಿಶೀಲನೆ ಬಳಿಕ ಸಂಚಾರ ಮುಂದುವರಿಸಿದ ಮೆಟ್ರೋ.

ಸಿಲಿಕಾನ್ ಸಿಟಿಯಲ್ಲಿ ಮತ್ತೊಬ್ಬ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ!

ಬೆಂಗಳೂರಿನ ಬಸವೇಶ್ವರನಗರ ನಿವಾಸಿಯಾಗಿರು ಎಂ ಸಾಗರ್ ಇಂಜಿನೀಯರಿಂಗ್ ಪದವಿ ಅರ್ಧಕ್ಕೆ ನಿಲ್ಲಿಸಿದ ಬಳಿಕ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದನೆಂದು ತಿಳಿದು ಬಂದಿದೆ. ಇಂದು ಆತ್ಮಹತ್ಯೆಗೆ ಮಾಡಿಕೊಳ್ಳಲೆಂದ ಮನೆಯಿಂದ ನೇರವಾಗಿ ಮೆಟ್ರೋಲ್ ನಿಲ್ದಾಣಕ್ಕೆ ಬಂದಿದ್ದ. ಮೆಟ್ರೋ ನಿಲ್ದಾಣಕ್ಕೆ ಬರುವ ಮೊದಲು ಯಾರಿಗೂ ಗುರುತು ಸಿಗದಿರಲೆಂದು ಮೊಬೈಲ್ ಮನೆಯಲ್ಲೇ ಬಿಟ್ಟುಬಂದಿದ್ದ ಆಸಾಮಿ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದ ತಲೆಗೆ ಸಣ್ಣಪುಟ್ಟ ಗಾಯಗಳಾಗಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಈಶ್ವರನ ಫ್ಲೆಕ್ಸ್‌ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು; ಸಾಸ್ವೆಹಳ್ಳಿ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ
'ಉಪಲೋಕಾಯುಕ್ತರಿಗೆ ಒಂದ್ ನಮಸ್ಕಾರ': ಭ್ರಷ್ಟಾಚಾರದ ಬಗ್ಗೆ ಹೇಳಿಕೆ ನೀಡಲು ಮಾತ್ರ ಅಧಿಕಾರವಿದೆಯೇ? – ಹೆಚ್‌ಡಿಕೆ ವ್ಯಂಗ್ಯ