ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಸಂಭ್ರಮದ ನಡುವೆ ಅಪ್ರಾಪ್ತ ಮುಸ್ಲಿಂ ಯುವಕನಿಂದ ಉದ್ರೇಕಕಾರಿ ಸಂದೇಶ!

Published : Jan 22, 2024, 08:39 PM IST
ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಸಂಭ್ರಮದ ನಡುವೆ ಅಪ್ರಾಪ್ತ ಮುಸ್ಲಿಂ ಯುವಕನಿಂದ ಉದ್ರೇಕಕಾರಿ ಸಂದೇಶ!

ಸಾರಾಂಶ

(ಜ.22): ಅಯೋಧ್ಯೆಯ ರಾಮಮಂದಿರ ಗರ್ಭಗುಡಿಯಲ್ಲಿ ಬಾಲರಾಮನ ಪ್ರಾಣಪ್ರತಿಷ್ಠಾಪನೆ ನಡೆದು ದಶಕಗಳ ಕನಸು ನನಸಾದ ಸಂಭ್ರಮದ ನಡುವೆ ಆಪ್ರಾಪ್ತ ಮುಸ್ಲಿಂ ಯುವಕನೋರ್ವ ಕೋಮು ಭಾವನೆ ಕೆರಳಿಸುವ ಸಂದೇಶ ಹಾಕಿದ ಘಟನೆ ಕಾರವಾರದಲ್ಲಿ ನಡೆದಿದೆ.

ಕಾರವಾರ,ಉತ್ತರಕನ್ನಡ (ಜ.22): ಅಯೋಧ್ಯೆಯ ರಾಮಮಂದಿರ ಗರ್ಭಗುಡಿಯಲ್ಲಿ ಬಾಲರಾಮನ ಪ್ರಾಣಪ್ರತಿಷ್ಠಾಪನೆ ನಡೆದು ದಶಕಗಳ ಕನಸು ನನಸಾದ ಸಂಭ್ರಮದ ನಡುವೆ ಆಪ್ರಾಪ್ತ ಮುಸ್ಲಿಂ ಯುವಕನೋರ್ವ ಕೋಮು ಭಾವನೆ ಕೆರಳಿಸುವ ಸಂದೇಶ ಹಾಕಿದ ಘಟನೆ ಕಾರವಾರದಲ್ಲಿ ನಡೆದಿದೆ.

ಕಾರವಾರದ ಖಾಸಗಿ ಕಾಲೇಜು ವಿದ್ಯಾರ್ಥಿಯಾಗಿರುವ ಅಪ್ರಾಪ್ತ ಯುವಕ ರಹೀಲ್ ಎಸ್‌ಎಚ್‌ಕೆ ತನ್ನ ಇನ್ಸ್‌ಟಾಗ್ರಾಮ್ ಖಾತೆಯಲ್ಲಿ ಬಾಬರಿ ಮಸೀದಿ ಫೋಟೊ ಶೇರ್ ಮಾಡಿ 'ಸಬರ್ ಜಬ್ ವಕ್ತ್ ಹಮಾರಾ ಆಯೇಗಾ ತಬ್ ಸಿರ್ ದಡ್ ಸೇ ಅಲಗ್ ಕಿಯೇ ಜಾಯೇಂಗೆ' ಎಂಬ ಉದ್ರೇಕಕಾರಿ ಸಂದೇಶ ಬರೆದುಕೊಂಡಿದ್ದಾನೆ.

ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ, ಕೇಜ್ರಿವಾಲ್‌ ಜಾಣತನ, ಕಾಂಗ್ರೆಸ್‌ ಹಿಟ್‌ವಿಕೆಟ್‌!

ಯುವಕನ ಇನ್ಸ್‌ಸ್ಟಾಗ್ರಾಮ್ ಸಂದೇಶದಿಂದ ಆಕ್ರೋಶಗೊಂಡ ಕಾರವಾರದ ನೂರಾರು ಜನರು. ಚಿತ್ತಾಕುಲ ಪೊಲೀಸ್ ಠಾಣೆ ಎದುರು ಜಮಾಯಿಸಿ ಯುವಕನ ಬಂಧನಕ್ಕೆ ಆಗ್ರಹಿಸಿದ್ದಾರೆ. ಇತ್ತ ಭಾರೀ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ತಪ್ಪೊಪ್ಪಿಗೆ ಸಂದೇಶ ಹಾಕಿರುವ ಯುವಕ. ಆಪ್ರಾಪ್ತ ಯುವಕನನ್ನು ವಶಕ್ಕೆ ವಿಚಾರಣೆ ನಡೆಸಿದ ಚಿತ್ತಾಕುಲ ಪೊಲೀಸರು. ಯುವಕನಿಂದ ತಪ್ಪೊಪ್ಪಿಗೆ ಬಳಿಕ ಠಾಣೆ ಮುಂದೆ ಜಮಾಯಿಸಿದ್ದ ನೂರಾರು ಯುವಕರು ವಾಪಸ್ ತೆರಳಿದ್ದಾರೆ. ಯಾರೂ ದೂರು ನೀಡದ ಹಿನ್ನೆಲೆ ಆಪ್ರಾಪ್ತ ಯುವಕನಿಗೆ ಪೊಲೀಸರು ಎಚ್ಚರಿಕೆ ನೀಡಿ ವಾಪಸ್ ಕಳುಹಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್