
ಪೀಣ್ಯ ದಾಸರಹಳ್ಳಿ (ಆ.19) : ಚಾಲಕನೊಬ್ಬ ಮದ್ಯಕ್ಕೆ ಆಸೆ ಬಿದ್ದು ತನ್ನ ಹೊಸ ಆಟೋವನ್ನು ಕಳೆದುಕೊಂಡ ಘಟನೆ ದಾಸರಹಳ್ಳಿಯ 8ನೇ ಮೈಲಿ ಅಟೋ ಸ್ಟ್ಯಾಂಡ್ನಲ್ಲಿ ನಡೆದಿದೆ.
ವಿಜಯ… ಕುಮಾರ್ ಆಟೋ ಕಳೆದುಕೊಂಡ ಚಾಲಕ. ಆ.17ರ ಮಧ್ಯಾಹ್ನ ಹಳೆಯ ಅಟೋದಲ್ಲಿ ಬಂದಿದ್ದ ಅಪರಿಚಿತ ಚಾಲಕನೊಬ್ಬ ವಿಜಯ್ ಕುಮಾರ್ ಅವರ ಆಟೋ ಕದ್ದು ಪರಾರಿ ಆಗಿದ್ದಾನೆ. ಈ ಸಂಬಂಧ ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಾವೇರಿ: ಮೊಬೈಲ್ ಕದ್ದು ಹಣ ದೋಚುತ್ತಿದ್ದ 3 ಆರೋಪಿಗಳ ಬಂಧನ
ಅಪರಿಚಿತ ಚಾಲಕ ವಿಜಯ್ ಅವರನ್ನು ಪರಿಚಯ ಮಾಡಿಕೊಂಡು ಆತ್ಮೀಯವಾಗಿ ಮಾತನಾಡಿದ್ದಾನೆ. ಬಳಿಕ ‘ಬಾ ಗುರು ಎಣ್ಣೆ ಹೊಡೆಯೋಣ’ ಎಂದು ಆಟೋ ಸ್ಟ್ಯಾಂಡ್ ಪಕ್ಕದಲ್ಲೇ ಇದ್ದ ಬಾರ್ಗೆ ವಿಜಯ್ ಅವರನ್ನು ಕರೆದುಕೊಂಡು ಹೋಗಿದ್ದಾನೆ. ನಂತರ ಆತನ ದುಡ್ಡಲ್ಲೇ ಮದ್ಯ ಕುಡಿಸಿದ್ದಾನೆ. ಎಣ್ಣೆ ಕುಡಿದು ಹೊಸ ಅಟೋದಲ್ಲಿ ಮಲಗಬಾರದೆಂದು ವಿಜಯ… ಕುಮಾರ್ ಅವರು ಅರೋಪಿ ತಂದಿದ್ದ ಹಳೆಯ ಅಟೋದಲ್ಲಿ ಮಲಗಿದ್ದಾರೆ. ಮಲಗಿ ಎದ್ದೇಳುವಷ್ಟರಲ್ಲಿ ಆತನ ಹಳೆಯ ಅಟೋ ಬಿಟ್ಟು ಹೊಸ ಆಟೋದಲ್ಲಿ ಪರಾರಿಯಾಗಿದ್ದಾನೆ.
Bengaluru ಪೊಲೀಸರೇ ನನ್ನ ಹೆಲ್ಮೆಟ್ ಕಳೆದೋಗಿದೆ: ಎಫ್ಐಆರ್ ದಾಖಲಿಸಿಕೊಂಡ ಪೊಲೀಸರು
ಇನ್ನು ಅಟೋದಲ್ಲಿದ್ದ .25 ಸಾವಿರ ಬೆಲೆಬಾಳುವ ಮೊಬೈಲ್ ಜೊತೆ ಆಟೋವನ್ನು ಎತ್ತಿಕೊಂಡು ಅಪರಿಚಿತ ಪರಾರಿಯಾಗಿದ್ದಾನೆ. ಇತ್ತ ಹಳೆಯ ಅಟೋ ಕೂಡ ಸುದ್ದಗುಂಟೆಪಾಳ್ಯದಲ್ಲಿ ಕದ್ದಿರುವುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಅಟೋ ಕದ್ದು ಪರಾರಿಯಾಗುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ