
ಕಲಬುರಗಿ (ಅ.2): ರಸ್ತೆ ಮೇಲೆ ಅಡ್ಡ ಬಂದ ಹಂದಿ ರಕ್ಷಿಸಲು ಹೋಗಿ ಡೀಸೆಲ್ ಟ್ಯಾಂಕರ್ ಪಲ್ಟಿಯಾಗಿ ಸ್ಫೋಟಗೊಂಡ ಘಟನೆ ಕಲಬುರಗಿ ಜಿಲ್ಲೆಯ ಅಫ್ಜಲಪುರ ತಾಲೂಕಿನ ಮಲ್ಲಾಬಾದ್ ಗ್ರಾಮದಲ್ಲಿ ನಡೆದಿದೆ.
ಅದೃಷ್ಟವಶಾತ್ ದುರ್ಘಟನೆಯಲ್ಲಿ ಯಾವುದೇ ಪ್ರಾಣಾಹಾನಿಯಾಗಿಲ್ಲ. ಅಂದಾಜು ೪೦ ಸಾವಿರ ಲೀಟರ ಡಿಸೇಲ್ ಸಂಗ್ರಹವಿದ್ದ ಟ್ಯಾಂಕರ್. ಮುಂಬೈನಿಂದ ತೆಲಂಗಾಣದ ಕರ್ನೂಲ್ಗೆ ಹೊರಟಿದ್ದ ಟ್ಯಾಂಕರ್, ರಸ್ತೆ ಮಧ್ಯೆ ದಿಢೀರ್ ಅಡ್ಡಬಂದ ಹಂದಿ. ಟ್ಯಾಂಕರ್ ಚಕ್ರಕ್ಕೆ ಸಿಲುಕಿ ಸಾಯುವುದನ್ನು ತಪ್ಪಿಸಲು ಯತ್ನಿಸಿರುವ ಚಾಲಕ.
ಸ್ಯಾಂಡಲ್ವುಡ್ ನಟ ನಾಗಭೂಷಣ್ ಸ್ಟೇಷನ್ ಬೇಲ್ ಮೇಲೆ ಬಿಡುಗಡೆ
ಅಪಘಾತ ತಪ್ಪಿಸಲು ಯತ್ನಿಸುವ ವೇಳೆ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಪಲ್ಟಿ. ಟ್ಯಾಂಕರ್ ಪಲ್ಟಿಯಾಗ್ತಿದ್ದಂತೆ ಸಾವಿರಾರು ಲೀಟರ್ ಡೀಸೆಲ್ ಸಂಗ್ರಹವಿದ್ದುದರಿಂದ ಬೆಂಕಿಹೊತ್ತಿ ಸ್ಫೋಟಗೊಂಡಿದೆ. ಘಟನೆ ಮಾಹಿತಿ ತಿಳಿದು ಸ್ಥಳಕ್ಕೆ ತೆರಳಿದ್ದ ಮೂರು ಅಗ್ನಿಶಾಮಕದಳ ಸಿಬ್ಬಂದಿ, ಸ್ಫೋಟಗೊಂಡಿದ್ದ ಟ್ಯಾಂಕರ್ ಬೆಂಕಿಯನ್ನು ನಂದಿಸಿದ್ದಾರೆ. ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದರು. ಈ ಕುರಿತು ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ