ಹೊಸ ಶಾಸಕರಿಗೆ ವಿಕಾಸಸೌಧದಲ್ಲಿ 'ಕ್ಲಾಸ್‌'!

Published : Nov 10, 2018, 08:45 AM ISTUpdated : Nov 10, 2018, 09:43 AM IST
ಹೊಸ ಶಾಸಕರಿಗೆ ವಿಕಾಸಸೌಧದಲ್ಲಿ 'ಕ್ಲಾಸ್‌'!

ಸಾರಾಂಶ

ನೂತನ ವಿಧಾನಸಭೆಗೆ 61 ಸದಸ್ಯರು ಹಾಗೂ ವಿಧಾನ ಪರಿಷತ್‌ಗೆ 17 ಜನರು ಆಯ್ಕೆಯಾಗಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಪ್ರಥಮ ಬಾರಿಗೆ ಸದನದ ಸದಸ್ಯರಾಗಿರುವುದರಿಂದ ಕಲಾಪಗಳ ಗುಣಮಟ್ಟ ಉತ್ತಮವಾಗಿರಬೇಕು ಎಂಬ ಉದ್ದೇಶದಿಂದ ವಿಧಾನಸಭೆ ಸಭಾಧ್ಯಕ್ಷ ರಮೇಶ್‌ ಕುಮಾರ್‌ ಅವರ ಆಸಕ್ತಿಯ ಫಲವಾಗಿ ಶಿಬಿರ ಏರ್ಪಡಿಸಲಾಗಿದೆ.

ಬೆಂಗಳೂರು[ನ.11]: ಕರ್ನಾಟಕ ವಿಧಾನ ಮಂಡಳ ತರಬೇತಿ ಸಂಸ್ಥೆ 15ನೇ ವಿಧಾನಸಭೆಗೆ ಹಾಗೂ ವಿಧಾನ ಪರಿಷತ್ತಿಗೆ ಪ್ರಥಮ ಬಾರಿಗೆ ಆಯ್ಕೆಯಾದ ಸದಸ್ಯರುಗಳಿಗೆ ನ.15 ಮತ್ತು 16ರಂದು ಎರಡು ದಿನಗಳ ಕಾಲ ವಿಕಾಸಸೌಧದಲ್ಲಿ ಶಾಸಕಾಂಗದ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ತರಬೇತಿ ಶಿಬಿರವನ್ನು ಆಯೋಜಿಸಿದೆ.

ನೂತನ ವಿಧಾನಸಭೆಗೆ 61 ಸದಸ್ಯರು ಹಾಗೂ ವಿಧಾನ ಪರಿಷತ್‌ಗೆ 17 ಜನರು ಆಯ್ಕೆಯಾಗಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಪ್ರಥಮ ಬಾರಿಗೆ ಸದನದ ಸದಸ್ಯರಾಗಿರುವುದರಿಂದ ಕಲಾಪಗಳ ಗುಣಮಟ್ಟ ಉತ್ತಮವಾಗಿರಬೇಕು ಎಂಬ ಉದ್ದೇಶದಿಂದ ವಿಧಾನಸಭೆ ಸಭಾಧ್ಯಕ್ಷ ರಮೇಶ್‌ ಕುಮಾರ್‌ ಅವರ ಆಸಕ್ತಿಯ ಫಲವಾಗಿ ಶಿಬಿರ ಏರ್ಪಡಿಸಲಾಗಿದೆ.

ಮೊದಲ ದಿನವಾದ ನ. 15 ರಂದು ವಿಧಾನ ಪರಿಷತ್‌ ಮಾಜಿ ಸಭಾಪತಿ ಬಿ.ಎಲ್‌. ಶಂಕರ್‌ ಪ್ರಜಾಪ್ರಭುತ್ವ, ಸಂವಿಧಾನ, ಶಾಸಕರ ಹಕ್ಕು, ಕರ್ತವ್ಯಗಳ ಬಗ್ಗೆ ತಿಳಿಸಲಿದ್ದಾರೆ. ಹಿರಿಯರಾದ ಬಿ.ಆರ್‌. ಯಾವಗಲ್‌ ಅವರು ಪ್ರಶ್ನೋತ್ತರ ವೇಳೆ, ಗಮನ ಸೆಳೆಯುವ ಸೂಚನೆ ಮುಂತಾದಗಳ ಬಗ್ಗೆ ಉಪನ್ಯಾಸ ನೀಡಲಿದ್ದಾರೆ. ಹಿರಿಯ ಸದಸ್ಯ ಎಚ್‌. ವಿಶ್ವನಾಥ್‌ ಅವರು ಸದನದಲ್ಲಿ ಅಸಂಸದೀಯ ಶಬ್ದಗಳನ್ನು ಬಳಸದೇ ಇರುವುದು, ವ್ಯಂಗ್ಯ, ಹಾಸ್ಯ ಇತ್ಯಾದಿಗಳ ಬಗ್ಗೆ ತಿಳಿಸಿಕೊಡಲಿದ್ದಾರೆ.

ನ. 16 ರಂದು ವಿಧಾನ ಪರಿಷತ್‌ ಮಾಜಿ ಸಭಾಪತಿ ವಿ.ಆರ್‌. ಸುದರ್ಶನ್‌ ಅವರು ವಿವಿಧ ರೀತಿಯ ಸಮಿತಿಗಳ ರಚನೆ, ಅವುಗಳ ಕಾರ್ಯವ್ಯಾಪ್ತಿಯ ಬಗ್ಗೆ ಹಾಗೂ ವಿತ್ತೀಯ ಕಲಾಪಗಳ ಬಗ್ಗೆ ನಿವೃತ್ತ ಐಎಎಸ್‌ ಅಧಿಕಾರಿ ಡಾ. ಎಂ.ಆರ್‌. ಶ್ರೀನಿವಾಸಮೂರ್ತಿ, ಪತ್ರಕರ್ತ ಶಶಿಧರ್‌ ಭಟ್‌ ಅವರು ಶಾಸಕಾಂಗ ಮತ್ತು ಪತ್ರಿಕಾರಂಗದ ಬಗ್ಗೆ ಹಾಗೂ ವಿಧಾನ ಪರಿಷತ್‌ ಮಾಜಿ ಸಭಾಪತಿ ಡಿ.ಎಚ್‌. ಶಂಕರಮೂರ್ತಿ ಅವರು ಸದಸ್ಯರು ಸದನದ ಕಲಾಪದಲ್ಲಿ ಅನುಸರಿಸಬೇಕಾದ ನಿಯಮ, ನಡವಳಿಕೆ ಬಗ್ಗೆ ತಿಳಿಸಲಿದ್ದಾರೆ.

ಕಡ್ಡಾಯವಲ್ಲ:

ಶಿಬಿರದಲ್ಲಿ ಪಾಲ್ಗೊಳ್ಳುವುದು ಕಡ್ಡಾಯವಲ್ಲದಿದ್ದರೂ, ಸದನದ ನೀತಿ, ನಿಯಮ, ರಿವಾಜು ತಿಳಿದುಕೊಳ್ಳುವುದರಿಂದ ಕಲಾಪದ ಗುಣಮಟ್ಟಇನ್ನಷ್ಟುಉತ್ತಮಗೊಳ್ಳುತ್ತದೆ ಎಂಬ ಕಾರಣದಿಂದ ಎಲ್ಲ ಸದಸ್ಯರು ಪಾಲ್ಗೊಳ್ಳುವಂತೆ ಮನವಿ ಮಾಡಿಕೊಳ್ಳಲಾಗಿದೆ. ಜೊತೆಗೆ ಆಸಕ್ತ ಇತರೆ ಸದಸ್ಯರು ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ವಿಧಾನಸಭೆಯ ನಿರ್ದೇಶಕರಾದ ಎಂ.ಕೆ. ವಿಶಾಲಾಕ್ಷಿ ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬೆಂಗಳೂರಿನ 2ನೇ ಏರ್‌ಪೋರ್ಟ್‌, ಗುರುತಿಸಿರೋ ಈ 3 ಸ್ಥಳಗಳಲ್ಲಿ ಯಾವುದು ಬೆಸ್ಟ್? ಅಧ್ಯಯನಕ್ಕೆ ಟೆಂಡರ್ ಕರೆದ ಸರ್ಕಾರ!
ನವೋದಯ ಪರೀಕ್ಷೆಯಲ್ಲಿ ಅಕ್ರಮ ಆರೋಪ; ಬೀದರ್‌ನಲ್ಲಿ ಬಿಇಓಗೆ ವಿದ್ಯಾರ್ಥಿ ಪೋಷಕರಿಂದ ತರಾಟೆ