
ಹಾವೇರಿ (ಡಿ.27): ಹೊಟ್ಟೆ ನೋವೆಂದು ಆಸ್ಪತ್ರೆಗೆ ಬಂದಿದ್ದ ಮಹಿಳೆಗೆ ವೈದ್ಯರು ಇಂಜೆಕ್ಷನ್ ನೀಡಿದ ಬಳಿಕ ದಿಢೀರ್ ಆರೋಗ್ಯ ಏರುಪೇರಾಗಿ ಮೃತಪಟ್ಟ ಘಟನೆ ಹಾವೇರಿ ನಗರದ ನಗರದ ವೀರಾಪುರ ಆಸ್ಪತ್ರೆಯಲ್ಲಿ ನಡೆದಿದ್ದು,
ಶಮಿನ ಬಾನು ಅರಳಿಕಟ್ಟಿ (23) ಮೃತ ಮಹಿಳೆ. ಬ್ಯಾಡಗಿ ಪಟ್ಟಣದ ನಿವಾಸಿಯಾಗಿರುವ ಮಹಿಳೆ. ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಮಹಿಳೆ. ಕುಟುಂಬಸ್ಥರು ಬ್ಯಾಡಗಿಯಿಂದ ನಗರದ ವೀರಾಪುರ ಆಸ್ಪತ್ರೆಗೆ ದಾಖಲಿಸಿದ್ದರು ಬ್ಯಾಡಗಿಯಿಂದ ವೀರಾಪುರ ಆಸ್ಪತ್ರೆಗೆ ಬರುವವರೆಗೆ ಚೆನ್ನಾಗಿದ್ದ ಮಹಿಳೆ, ಆಸ್ಪತ್ರೆಯಲ್ಲಿ ವೈದ್ಯರು ಇಂಜೆಕ್ಷನ್ ನೀಡಿದ ಬಳಿಕ ಮಹಿಳೆ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಮನಮೋಹನ್ ಸಿಂಗ್ ನಿಧನಕ್ಕೆ ಶಾಲೆಗಳಿಗೆ ರಜೆ; ಕೆರೆಗೆ ಈಜಾಡಲು ಹೋಗಿದ್ದ ವಿದ್ಯಾರ್ಥಿ ಕಣ್ಮರೆ!
ವೈದ್ಯರು ಓವರ್ ಡೋಸ್ ಇಂಜೆಕ್ಷನ್ ನೀಡಿದ ಪರಿಣಾಮದಿಂದಲೇ ಮೃತಪಟ್ಟಿದ್ದಾರೆ. ಮಗಳ ಸಾವಿಗೆ ವೈದ್ಯರೇ ಕಾರಣ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಸ್ಪತ್ರೆಯ ಮುಂಭಾಗ ಜಮಾಯಿಸಿದ ಪೋಷಕರು, ಕುಟುಂಬಸ್ಥರು. ವೈದ್ಯರ ಮೇಲೆ ಹಲ್ಲೆ ಮುಂದಾಗಿದ್ದ ಮೃತ ಮಹಿಳೆಯ ಕುಟುಂಬಸ್ಥರು ಪೊಲೀಸರು ದೌಡಾಯಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ