
ಬಾದಾಮಿ, (ಅ. 27): ಪಟ್ಟಣದ ನೀಲಮ್ಮ ಭೀಮನಗೌಡ ಹೊಸಮನಿ ಅವರು ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆಯಡಿ ಪ್ರತಿ ತಿಂಗಳು ಬರುತ್ತಿದ್ದ ₹2000 ಸಹಾಯಧನವನ್ನು ಕೂಡಿಟ್ಟು ಒಟ್ಟು ₹25,000 ರೂ.ಗಳನ್ನು ಕನಕ ಪಂಚಮಿ ಕಾರ್ಯಕ್ರಮಕ್ಕೆ ದಾನ ನೀಡಿ ಸಾಮಾಜಿಕ ಬದ್ಧತೆ ಮೆರೆದಿದ್ದಾರೆ.
ಗೃಹಲಕ್ಷ್ಮೀ ಯೋಜನೆಯಡಿ ಮನೆಯ ಯಜಮಾನಿಯರಿಗೆ ತಿಂಗಳಿಗೆ ₹2000 ನೀಡಲಾಗುತ್ತಿದ್ದು, ಬಹುತೇಕ ಮಹಿಳೆಯರು ಈ ಹಣವನ್ನು ಕುಟುಂಬ ನಿರ್ವಹಣೆ ಅಥವಾ ವೈಯಕ್ತಿಕ ಅಗತ್ಯಗಳಿಗೆ ಬಳಸಿಕೊಳ್ಳುತ್ತಾರೆ. ಆದರೆ ನೀಲಮ್ಮ ಅವರು ಈ ಹಣವನ್ನು ಸಮಾಜಮುಖಿ ಕಾರ್ಯಕ್ಕೆ ಮೀಸಲಿಟ್ಟು, ಕನಕ ಪಂಚಮಿ ಕಾರ್ಯಕ್ರಮದ ಸಂಘಟಕರಿಗೆ ಹಸ್ತಾಂತರಿಸಿದ್ದಾರೆ.
ಸರ್ಕಾರದ ಸಹಾಯವನ್ನು ವೈಯಕ್ತಿಕ ಕೆಲಸಗಳಿಗೆ ಬಳಸಿಕೊಳ್ಳದೇ ಸಮಾಜಕ್ಕೆ ಹಿಂತಿರುಗಿಸಿದ್ದಾರೆ. ಈ ದಾನ ಸ್ಥಳೀಯ ಸಮುದಾಯದಲ್ಲಿ ಮೆಚ್ಚುಗೆ ಗಳಿಸಿದ್ದು, ಕನಕ ಪಂಚಮಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಹಕಾರಿಯಾಗಲಿದೆ. ನೀಲಮ್ಮ ಅವರ ಈ ಸಾಮಾಜಿಕ ಕಾಳಜಿ ಇತರರಿಗೆ ಸ್ಫೂರ್ತಿಯಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ