
ಆನೇಕಲ್ (ಜ.29): ಮನೆಗೆ ಅಕ್ರಮ ವಿದ್ಯುತ್ ಸಂಪರ್ಕವನ್ನು ಕಡಿತ ಮಾಡಿದ ಬೆಸ್ಕಾಂ ಸಿಬ್ವಂದಿಗೆ ಮಹಿಳೆ ನಿಂದಿಸಿ, ಕಪಾಳ ಮೋಕ್ಷ ಮಾಡಿದ ಘಟನೆ ಸೂರ್ಯನಗರ ಠಾಣಾ ವ್ಯಾಪ್ತಿಯ ಹಳೇ ಚಂದಾಪುರದಲ್ಲಿ ನಡೆದಿದೆ.
ರೂಪಮ್ಮ ಹಲ್ಲೆ ಮಾಡಿ ತಲೆ ತಪ್ಪಿಸಿಕೊಂಡಿರುವ ಮಹಿಳೆ. ಹಳೆ ಚಂದಾಪುರ ನಿವಾಸಿ ರೂಪಮ್ಮ ಹೊಸದಾಗಿ ಮನೆ ನಿರ್ಮಾಣ ಮಾಡುತ್ತಿದ್ದಾರೆ. ಕಟ್ಟಡಕ್ಕೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ತೆಗೆದುಕೊಂಡಿದ್ದರು. ವಿಚಾರ ತಿಳಿದ ಬೆಸ್ಕಾಂ ಸಿಬ್ಬಂದಿ ವಿದ್ಯುತ್ ಲೈನ್ ಕತ್ತರಿಸಿ ಮಾಡಿ ದಂಡ ವಿಧಿಸಲು ಮುಂದಾದರು.
ಆ ವೇಳೆ ಸಿಟ್ಟಿಗೆದ್ದ ರೋಪಮ್ಮ ಅವಾಚ್ಯ ಶಬ್ದಗಳಿಂದ ಬೈದು, ನಡುರಸ್ತೆಯಲ್ಲೇ ರಂಪಾಟ ಮಾಡಿದರು. ವೀರಸಂದ್ರ ಬೆಸ್ಕಾಂ ಸಬ್ ಡಿವಿಷನ್ ಸಿಬ್ಬಂದಿಯ ಕಪಾಳಕ್ಕೆ ಹೊಡೆದು ಕರ್ತವ್ಯಕ್ಕೆ ಅಡ್ಡಿ ಮಾಡಿದರು. ಸೂರ್ಯನಗರ ಪೊಲೀಸ್ ಠಾಣೆಯಲ್ಲಿ ಮಹಿಳೆ ವಿರುದ್ಧ ಪ್ರಕರಣ ದಾಖಲಾಗಿದೆ. ಮಹಿಳೆಯ ಬಂಧನಕ್ಕೆ ತಂಡ ರಚಿಸಲಾಗಿದೆ ಎಂದು ಪೋಲಿಸರು ತಿಳಿಸಿದ್ದಾರೆ.
ಕಾಂಗ್ರೆಸ್ನಿಂದಲೇ ರಾಜ್ಯದಲ್ಲಿ ಕೋಮುಗಲಭೆಗೆ ಯತ್ನ? ಬಿವೈ ವಿಜಯೇಂದ್ರ ಹೇಳಿದ್ದೇನು?
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ