
ಬೆಂಗಳೂರು (ಜ.17): ಮದುವೆಗೆ ಹೆಣ್ಣು ಸಿಗುತ್ತಿಲ್ಲವೆಂದೋ, ಪ್ರೀತಿ ನಿರಾಕರಣೆಯಿಂದಲೋ ದಿನನಿತ್ಯ ಯುವಕ ಯುವತಿಯರು ಆತ್ಮಹತ್ಯೆ ಮಾಡಿಕೊಳ್ಳುವುದು ಸಮೂಹ ಸನ್ನಿಯಂತೆ ನಡೆಯುತ್ತಿರುವುದು ಆತಂಕ ಮೂಡಿಸುವಂತದ್ದು. ಇದೀಗ ಅಂತಹದ್ದೇ ಮತ್ತೊಂದು ದುರ್ಘಟನೆ ನಡೆದು ಹೋಗಿದೆ.
ದಪ್ಪವಾಗಿರೋದಕ್ಕೆ ಮದುವೆಯಾಗಲು ಹುಡುಗಿಯರು ನಿರಾಕರಣೆ ಹಿನ್ನೆಲೆ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬೆಂಗಳೂರು ಮತ್ತೊಬ್ಬ ಟೆಕ್ಕಿ ಸಾವು; ಮಾವನ ಕಾಮದಾಟಕ್ಕೆ ಬಲಿಯಾದ ಮದುವೆಯಾಗದ ಸೊಸೆ!
ವೆಂಕಟೇಶ್ (28) ಆತ್ಮಹತ್ಯೆಗೆ ಶರಣಾದ ಯುವಕ. ಮಂಗಳಮ್ಮ ದಂಪತಿಗೆ ವೆಂಕಟೇಶ್ ಸೇರಿ ಇಬ್ಬರು ಗಂಡು ಮಕ್ಕಳು ಇದ್ದಾರೆ. ಮದುವೆ ವಯಸ್ಸಿಗೆ ಬಂದಿದ್ದರೂ ಮದುವೆಯಾಗಿಲ್ಲ. ಮಕ್ಕಳಿಬ್ಬರಿಗೆ ಮದುವೆ ಮಾಡಲು ಎಲ್ಲ ಕಡೆ ಕನ್ಯೆ ಹುಡುಕಿದ್ದಾರೆ. ಆದರೆ ಮಕ್ಕಳು ದಪ್ಪ ಇರೋ ಕಾರಣಕ್ಕೆ ಹೋದಲ್ಲೆಲ್ಲ ಮದುವೆ ಪ್ರಸ್ತಾಪ ತಿರಸ್ಕಾರ ಮಾಡಲಾಗಿದೆ. ಇದರಿಂದ ಮನನೊಂದ ಯುವಕ ವೆಂಕಟೇಶ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ