
ಧಾರವಾಡ (ಜೂ.25): ಗೆಳೆಯರೊಂದಿಗೆ ಸ್ನೂಕರ್ ಆಡುವಾಗಲೇ ತೀವ್ರ ಹೃದಯಾಘಾತ ಸಂಭವಿಸಿ ಯುವಕನೋರ್ವ ದಾರುಣವಾಗಿ ಮೃತಪಟ್ಟ ಘಟನೆ ಧಾರವಾಡ ನಗರದ ರಜತಗಿರಿ ಬಡಾವಣೆಯಲ್ಲಿ ನಡೆದಿದೆ.
ಸುಶಾಂತ್ ಮಲ್ಲಿಗೇರಿ, ಮೃತ ದುರ್ದೈವಿ. ಮೂಲತಃ ಬಾಗಲಕೋಟೆ ನಿವಾಸಿಯಾಗಿರುವ ಸುಶಾಂತ್, ಹುಬ್ಬಳ್ಳಿಯಲ್ಲಿ ನೆಲೆಸಿದ್ದಾರೆ. ಸ್ನೂಕರ್ ಗೇಮ್ನಲ್ಲಿ ಆಸಕ್ತಿ ಹೊಂದಿದ್ದ ಯುವಕ. ಗೆಳೆಯರೊಂದಿಗೆ ಸ್ನೂಕರ್ ಆಟವಾಡಲು ಬರುತ್ತಿದ್ದ. ಎಂದಿನಂತೆ ಗೆಳೆಯರೊಂದಿಗೆ ಬಂದ ಯುವಕ ಸ್ನೂಕರ್ ಆಡುತ್ತಿದ್ದಾಗಲೇ ತೀವ್ರ ಹೃದಯಾಘಾತದಿಂದ ಏಕಾಏಕಿ ಕುಸಿದುಬಿದ್ದಿರುವ ಯುವಕ. ಕೂಡಲೇ ಸ್ನೇಹಿತರು ಗಾಬರಿಯಾಗಿ ಸಹಾಯಕ್ಕೆ ಧಾವಿಸಿದ್ದಾರೆ. ಆದರೆ ಅದಾಗಲೇ ಪ್ರಾಣಪಕ್ಷಿ ಹಾರಿಹೋಗಿತ್ತು.
33 ಕೋಟಿ ಗೆದ್ದವನಿಗೆ ಒಂದು ರೂ ಅನುಭವಿಸೋ ಯೋಗ ಇಲ್ಲ: ಲಾಟರಿ ಗೆಲ್ಲುತ್ತಿದ್ದಂತೆ ಎಳೆದೊಯ್ದ ಜವರಾಯ
ಘಟನೆ ಸಂಬಂಧ ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ