ಆನ್‌ಲೈನ್ ಗೇಮ್ ಹುಚ್ಚಾಟ, 12 ಲಕ್ಷ ರೂ ಸಾಲ, ಪೆಟ್ರೋಲ್ ಸುರಿದುಕೊಂದು ಯುವಕ ಸ್ವಹತ್ಯೆಗೆ ಯತ್ನ!

Published : Dec 26, 2024, 01:16 PM IST
ಆನ್‌ಲೈನ್ ಗೇಮ್ ಹುಚ್ಚಾಟ, 12 ಲಕ್ಷ ರೂ ಸಾಲ, ಪೆಟ್ರೋಲ್ ಸುರಿದುಕೊಂದು ಯುವಕ ಸ್ವಹತ್ಯೆಗೆ ಯತ್ನ!

ಸಾರಾಂಶ

ಮೊಬೈಲ್ ಆನ್‌ಲೈನ್ ಗೇಮ್ ಹುಚ್ಚಾಟಕ್ಕೆ ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡ ವ್ಯಕ್ತಿಯೊಬ್ಬರು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಜ್ಯೋತಿ ತಾಂಡದಲ್ಲಿ ನಡೆದಿದೆ.

ಬೀದರ್ (ಡಿ.26): ಮೊಬೈಲ್ ಆನ್‌ಲೈನ್ ಗೇಮ್ ಹುಚ್ಚಾಟಕ್ಕೆ ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡ ವ್ಯಕ್ತಿಯೊಬ್ಬರು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಜ್ಯೋತಿ ತಾಂಡದಲ್ಲಿ ನಡೆದಿದೆ.

ವಿಜಯ್‌ಕುಮಾರ್ ಜಗನ್ನಾಥ ಹೊಳ್ಳೆ(25), ಆತ್ಮಹತ್ಯೆಗೆ ಯತ್ನಿಸಿ ಸಾವು-ಬದುಕಿನ ಮಧ್ಯೆ ನರಳಾಡುತ್ತಿರುವ ವ್ಯಕ್ತಿ. ಮೂಲತಃ ಹುಲಸೂರು ತಾಲೂಕಿನ ಬೇಲೂರು ಗ್ರಾಮದ ಯುವಕನಾಗಿರುವ ವಿಜಯ ಕುಮಾರ್, ಬಿ. ಫಾರ್ಮಾಸಿ ಪದವೀಧರನಾಗಿದ್ದರೂ, ಬೇಗ ಮತ್ತು ಸುಲಭವಾಗಿ ಹಣ ಗಳಿಸುವ ದುರಾಸೆಯಿಂದ ಆನ್‌ಲೈನ್‌ ಗೇಮ್ ಹುಚ್ಚು ಹತ್ತಿಸಿಕೊಂಡಿದ್ದ ವಿಜಯಕುಮಾರ್. 

ಆನ್‌ಲೈನ್ ಗೇಮ್ ಸಾಲ ತೀರಿಸಲು ದರೋಡೆ; ಮರ ಕತ್ತರಿಸುವ ಯಂತ್ರದಿಂದ ಅಡ್ಡ ಬಂದವರನ್ನು ಕತ್ತರಿಸಿದ ಇಬ್ರಾಹಿಂ!

ಕಳೆದ ಕೆಲವು ತಿಂಗಳಿಂದ ಆನ್‌ಲೈನ್‌ಗೇಮ್‌ ನಲ್ಲಿ ಸುಮಾರು 12 ಲಕ್ಷ ರೂ ಕಳೆದುಕೊಂಡಿದ್ದ ಯುವಕ. ಅದಕ್ಕಾಗಿ ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡಿದ್ದ. ಈಗಾಗಲೇ 10 ಲಕ್ಷ ರೂ. ಸಾಲವನ್ನು ತೀರಿಸಿದ್ದ ಕುಟುಂಬಸ್ಥರು. ಆದರೂ ಮತ್ತೆ 2 ಲಕ್ಷ ರೂ. ಆನ್‌ಲೈನ್ ಗೇಮ್ ಆಡಲೆಂದೇ ಸಾಲ ಮಾಡಿದ್ದ ವಿಜಯ ಕುಮಾರ. ಮತ್ತೆ ಸಾಲ ಮಾಡಿಕೊಂಡಿರುವ ವಿಷಯ ಮನೆಯಲ್ಲಿ ಗೊತ್ತಾದ್ರೆ ತೊಂದರೆ ಆಗುತ್ತೆ ಎಂದು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸದ್ಯ ಗಂಭೀರ ಗಾಯಗೊಂಡಿರುವ ಯುವಕನನ್ನು ಬಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಪ್ರಕರಣ ಸಂಬಂಧ ಮೇಹಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌