
ಬೆಂಗಳೂರು(ಸೆ.11): ನಕಲಿ ಜಿಎಸ್ಟಿ ನೋಂದಣಿ ತಡೆಗಟ್ಟಲು ರಾಜ್ಯದ ವಿವಿಧೆಡೆ ಆಧಾರ್ ಬಯೋಮೆಟ್ರಿಕ್ ಮೂಲಕ ನೋಂದಣಿ ಮಾಡುವ 120 'ಜಿಎಸ್ಟಿ ಸೇವಾ ಕೇಂದ್ರ'ಗಳನ್ನು ವಾಣಿಜ್ಯ ತೆರಿಗೆಗಳ ಇಲಾಖೆ ಆರಂಭಿಸಿದೆ.
ನಗರದ ಗಾಂಧಿನಗರದಲ್ಲಿರುವ ಕೇಂದ್ರ ಕಚೇರಿ ಸೇರಿ ರಾಜ್ಯದ 120 ಕಡೆ ಸೇವಾ ಕೇಂದ್ರಗಳನ್ನು ಆರಂಭಿಸಲಾಗಿದೆ. ಅರ್ಜಿ ದಾರರು ಮುಂಗಡವಾಗಿ ಸಮಯ ನಿಗದಿ ಪಡಿಸಿಕೊಂಡು ಸೇವಾ ಕೇಂದ್ರಕ್ಕೆ ಭೇಟಿ ನೀಡಬಹುದು. ಬಯೋಮೆಟ್ರಿಕ್ ದೃಢೀಕರಣ ಮತ್ತು ದಾಖಲೆಗಳ ಪರಿಶೀಲನೆ ಮಾಡಲಾಗುತ್ತದೆ.
ಅಯೋಧ್ಯೆ ರಾಮಮಂದಿರದಿಂದ ಸಂಗ್ರಹವಾದ ಜಿಎಸ್ಟಿ ಹಣವೆಷ್ಟು?
ಇದರಿಂದಾಗಿ ಅಮಾಯಕ ವ್ಯಕ್ತಿಗಳ ದಾಖಲೆಗಳನ್ನು ಬಳಸಿಕೊಂಡು ನಕಲಿ ಜಿಎಸ್ಟಿ ನೋಂದಣಿ ತಡೆಯಲು ಸಾಧ್ಯವಾಗುತ್ತದೆ. ಜತೆಗೆ ರಾಜ್ಯದಲ್ಲಿ ಉತ್ತಮ ವ್ಯವಹಾರ ವಾತಾವರಣಕ್ಕೆ ಉತ್ತೇ ಜನ ಸಿಗುತ್ತದೆ ಎಂದು ವಾಣಿಜ್ಯ ತೆರಿಗೆಗಳ ಆಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ