ಶಿಕ್ಷಕರ ಪರಸ್ಪರ ವರ್ಗದ 1 ಸಲದ ಮಿತಿ ರದ್ದು: ಶಿಕ್ಷಕರ ವರ್ಗಾವಣೆ ಕರಡು ನಿಯಮಾವಳಿ ಪ್ರಕಟ

By Govindaraj SFirst Published Nov 17, 2022, 5:45 AM IST
Highlights

ಸೇವೆಯ ಆರಂಭದ ಮೊದಲ ಹಾಗೂ ನಿವೃತ್ತಿಯ ಮುಂಚಿನ 5 ವರ್ಷಗಳನ್ನು ಹೊರತುಪಡಿಸಿ ಪ್ರತಿ 3 ವರ್ಷಕ್ಕೊಮ್ಮೆ ವರ್ಗಾವಣೆಗೆ ಅರ್ಜಿ ಸಲ್ಲಿಸುವ ಅವಕಾಶ, ಪರಸ್ಪರ (ಮ್ಯೂಚುವಲ್‌) ವರ್ಗಾವಣೆಗೆ ಒಂದು ಬಾರಿ ಇದ್ದ ಮಿತಿ ತೆಗೆದು ಹಾಕುವುದು ಸೇರಿದಂತೆ ವಿವಿಧ ಶಿಕ್ಷಕ ಸ್ನೇಹಿ ವರ್ಗಾವಣೆಯ ಕರಡು ನಿಯಮಗಳನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿದೆ. 

ಬೆಂಗಳೂರು (ನ.17): ಸೇವೆಯ ಆರಂಭದ ಮೊದಲ ಹಾಗೂ ನಿವೃತ್ತಿಯ ಮುಂಚಿನ 5 ವರ್ಷಗಳನ್ನು ಹೊರತುಪಡಿಸಿ ಪ್ರತಿ 3 ವರ್ಷಕ್ಕೊಮ್ಮೆ ವರ್ಗಾವಣೆಗೆ ಅರ್ಜಿ ಸಲ್ಲಿಸುವ ಅವಕಾಶ, ಪರಸ್ಪರ (ಮ್ಯೂಚುವಲ್‌) ವರ್ಗಾವಣೆಗೆ ಒಂದು ಬಾರಿ ಇದ್ದ ಮಿತಿ ತೆಗೆದು ಹಾಕುವುದು ಸೇರಿದಂತೆ ವಿವಿಧ ಶಿಕ್ಷಕ ಸ್ನೇಹಿ ವರ್ಗಾವಣೆಯ ಕರಡು ನಿಯಮಗಳನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿದೆ. ಮುಂಬರುವ ಶೈಕ್ಷಣಿಕ ವರ್ಷದ ಆರಂಭದ ವೇಳೆಗೆ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ನಡೆಸುವ ಸಂಬಂಧ ಇಲಾಖೆ ಕಳೆದ ಅಧಿವೇಶನದಲ್ಲಿ ಶಿಕ್ಷಕರ ವರ್ಗಾವಣೆ ಕಾಯ್ದೆಗೆ ತಿದ್ದುಪಡಿ ತಂದಿದ್ದು, ಬುಧವಾರ ಕರಡು ನಿಯಮಗಳನ್ನು ಪ್ರಕಟಿಸಿದೆ.

ಪ್ರಮುಖವಾಗಿ ಪರಸ್ಪರ ವರ್ಗಾವಣೆಗೆ ಈವರೆಗೆ ಕೇವಲ 1 ಬಾರಿ ಮಾತ್ರ ವರ್ಗಾವಣೆಗೆ ಇದ್ದ ನಿಯಮವನ್ನು ಸಡಿಲಗೊಳಿಸಿದೆ. ಸೇವೆಯ ಆರಂಭದ 5 ವರ್ಷಗಳು ಮತ್ತು ಸೇವೆಯ ನಿವೃತ್ತಿಯ ಮುಂಚಿನ 5 ವರ್ಷಗಳನ್ನು ಹೊರತುಪಡಿಸಿ ಪ್ರತಿ 3 ವರ್ಷಗಳಿಗೊಮ್ಮೆ ಎಲ್ಲ ಶಿಕ್ಷಕರೂ ವರ್ಗಾವಣೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅಲ್ಲದೆ, ಶಿಕ್ಷಕರ ಬಹುವರ್ಷದ ಬೇಡಿಕೆಯಂತೆ ಶೇ.25ಕ್ಕಿಂತ ಹೆಚ್ಚು ಹುದ್ದೆಗಳು ಖಾಲಿ ಇರುವ ಕ್ಷೇತ್ರಗಳಲ್ಲೂ (ತಾಲೂಕು) ಶಿಕ್ಷಕರ ವರ್ಗಾವಣೆಗೆ ಅವಕಾಶ ಕಲ್ಪಿಸಿದೆ. ಪರಸ್ಪರ ವರ್ಗಾವಣೆಗೆ ಒಂದು ಬಾರಿ ಇದ್ದ ಮಿತಿಯನ್ನು ತೆಗೆದು ಹಾಕಲಾಗಿದೆ. 

Chanakya University: ಚಾಣಕ್ಯ ವಿವಿಯಲ್ಲಿ ಉನ್ನತ ಶಿಕ್ಷಣದ ಹೊಸ ಪ್ರಯೋಗ

ಒಂದೇ ಬ್ಲಾಕ್‌ನಲ್ಲಿ ಕನಿಷ್ಠ 10 ವರ್ಷ ಸೇವೆ ಸಲ್ಲಿಸಿರುವ ಶಿಕ್ಷಕರಿಗೆ ಮತ್ತು ಎಲ್ಲ ವೃಂದದಲ್ಲಿ 15 ವರ್ಷ ಸೇವೆ ಸಲ್ಲಿಸಿದ ಶಿಕ್ಷಕರಿಗೆ ಬ್ಲಾಕ್‌ನಿಂದ ಹೊರಗೆ ವರ್ಗಾವಣೆ ಪಡೆಯಲು ಅವಕಾಶ ಕಲ್ಪಿಸಿದೆ. ಕಲ್ಯಾಣ ಕರ್ನಾಟಕ, ಮಲೆನಾಡು ಮತ್ತು ಹಿಂದುಳಿದ ಜಿಲ್ಲೆಗಳಿಗೆ ವರ್ಗಾವಣೆ ಬಯಸುವ ಶಿಕ್ಷಕರಿಗೆ ಇದ್ದ ಮಿತಿಯನ್ನು ಸಡಿಲಗೊಳಿಸಿದೆ. ಮರು ಹೊಂದಾಣಿಕೆ ಸಂದರ್ಭದಲ್ಲಿ ಶಿಕ್ಷಕರು ಹಿಂದಿನ ಶಾಲೆಯಲ್ಲಿ ಮಾಡಿದ ಸೇವೆಯನ್ನು ಪರಿಗಣಿಸಲಾಗುತ್ತದೆ. ಪತಿ-ಪತ್ನಿ ಪ್ರಕರಣಗಳಲ್ಲಿ ಶೈಕ್ಷಣಿಕ ತಾಲೂಕಿನಲ್ಲಿ ಹುದ್ದೆಗಳು ಖಾಲಿ ಇಲ್ಲದಿದ್ದರೆ, ಅದೇ ಜಿಲ್ಲೆಯ ಪಕ್ಕದ ತಾಲ್ಲೂಕಿನಲ್ಲಿ ಹುದ್ದೆ ಪಡೆಯಬಹುದಾಗಿದೆ.

ತಗ್ಗಿದ ಮಳೆ: ರಾಜ್ಯದಲ್ಲೀಗ ಮೈ ಕೊರೆಯುವಷ್ಟು ಚಳಿ!

ಆಕ್ಷೇಪಣೆಗೆ 15 ದಿನಗಳ ಕಾಲಾವಕಾಶ: ಕರ್ನಾಟಕ ರಾಜ್ಯ ಸಿವಿಲ್‌ ಸೇವೆಗಳು (ಶಿಕ್ಷಕರ ವರ್ಗಾವಣೆ ನಿಯಂತ್ರಣ) (ತಿದ್ದುಪಡಿ) ನಿಯಮಗಳು-2022 ಪ್ರಕಟಿಸಿದೆ. ಈ ಕರಡು ನಿಯಮಕ್ಕೆ ಸಂಬಂಧಿದಂತೆ ಆಕ್ಷೇಪಣೆಗಳನ್ನು ಸಲ್ಲಿಸಲು 15 ದಿನಗಳ ಕಾಲಾವಕಾಶ ನೀಡಿದೆ. ಆಕ್ಷೇಪಣೆಗಳು ಮತ್ತು ಸಲಹೆಗಳನ್ನು ಪ್ರಧಾನ ಕಾರ್ಯದರ್ಶಿಗಳು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಎಂ.ಎಸ್‌. ಬಿಲ್ಡಿಂಗ್‌, 6ನೇ ಮಹಡಿ, ಡಾ, ಅಂಬೇಡ್ಕರ್‌ ವೀದಿ, ಬೆಂಗಳೂರು- 560 001 ಇಲ್ಲಿಗೆ ನ.30ರೊಳಗೆ ಸಲ್ಲಿಸಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

click me!