
ಬೆಂಗಳೂರು(ಆ.27): ಖಾಸಗಿ ವ್ಯಕ್ತಿ ಜತೆ ಶಾಮೀಲಾಗಿ ಸುಮಾರು ಎಂಟು ಎಕರೆ ಜಮೀನಿನ ದಾಖಲೆಗಳನ್ನು ನಕಲಿಯಾಗಿ ಸೃಷ್ಟಿಸಿ ವಂಚಿಸಲು ಮುಂದಾಗಿದ್ದ ಓರ್ವ ಸರ್ಕಾರಿ ಅಧಿಕಾರಿಯ ಕಚೇರಿ ಸೇರಿದಂತೆ ನಾಲ್ಕು ಸ್ಥಳಗಳ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಬೊಮ್ಮನಹಳ್ಳಿಯ ಹಿರಿಯ ಉಪನೋಂದಾಣಿಧಿಕಾರಿಯ ಕಚೇರಿ, ಖಾಸಗಿ ವ್ಯಕ್ತಿಗಳಾದ ಎಸ್.ರಾಜಪ್ಪ ಎಂಬುವರಿಗೆ ಸೇರಿದ ಹೊಸಕೋಟೆಯ ಪರಮನಹಳ್ಳಿ ಗ್ರಾಮ, ಮೋಹನ್ ಕುಮಾರ್ ಎಂಬುವರಿಗೆ ಸೇರಿದ ಕೊತ್ತನೂರಿನಲ್ಲಿನ ನಿವಾಸ ಮತ್ತು ಎಚ್.ಆರ್.ಬಿ.ಆರ್.ಲೇಔಟ್ನಲ್ಲಿನ ಗೆಸ್ಟ್ಗೌಸ್ ಮೇಲೆ ಕಾರ್ಯಾಚರಣೆ ಮಾಡಲಾಗಿದೆ.
ಮೈಸೂರು ಪಾಲಿಕೆ ಅಧಿಕಾರಿ ಮನೆಯಲ್ಲಿ 1.3 ಕೆ.ಜಿ. ಚಿನ್ನ ಪತ್ತೆ!
ಬಿದರಹಳ್ಳಿ ಹೋಬಳಿ ವ್ಯಾಪ್ತಿಗೆ ಸೇರಿದ ಎಂಟು ಎಕರೆ ಜಮೀನಿಗೆ ಸಂಬಂಧಪಟ್ಟಂತೆ ಬೊಮ್ಮನಹಳ್ಳಿ ಉಪನೋಂದಣಾಧಿಕಾರಿ ಕಚೇರಿಯ ಸಿಬ್ಬಂದಿ ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಖಾಸಗಿ ವ್ಯಕ್ತಿಗಳೊಂದಿಗೆ ಶಾಮೀಲಾಗಿ ಜಮೀನಿನ ದಾಖಲಾತಿಗಳನ್ನು ನಕಲಿ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ