ಘನ ತ್ಯಾಜ್ಯ ಯೋಜನೆ ಅವ್ಯವಹಾರ: ನಾಲ್ಕು ಕಡೆ ಎಸಿಬಿ ದಾಳಿ

Kannadaprabha News   | Asianet News
Published : Sep 09, 2020, 07:52 AM IST
ಘನ ತ್ಯಾಜ್ಯ ಯೋಜನೆ ಅವ್ಯವಹಾರ: ನಾಲ್ಕು ಕಡೆ ಎಸಿಬಿ ದಾಳಿ

ಸಾರಾಂಶ

ಘನ ತ್ಯಾಜ್ಯದಿಂದ ಇಂಧನ ಉತ್ಪಾದಿಸುವ ಯೋಜನೆಯಲ್ಲಿ ಅವ್ಯವಹಾರ| ಬೆಂಗಳೂರಿನ  ನಾಲ್ಕು ಕಡೆ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳ ದಾಳಿ| ಹಲವು ದಾಖಲೆಗಳ ಪರಿಶೀಲನೆ| 2002 ಡಿ.18ರಂದು ಘನ ತ್ಯಾಜ್ಯದಿಂದ ವಿದ್ಯುತ್‌ ಉತ್ಪಾದಿಸುವ ಘಟಕವನ್ನು ಸ್ಥಾಪಿಸುವ ಯೋಜನೆಗಾಗಿ ಬಿಬಿಎಂಪಿ ಅಧಿಸೂಚನೆ| 

ಬೆಂಗಳೂರು(ಸೆ.09): ಘನ ತ್ಯಾಜ್ಯದಿಂದ ಇಂಧನ ಉತ್ಪಾದಿಸುವ ಯೋಜನೆಯಲ್ಲಿ ನಡೆದಿರುವ ಅವ್ಯವಹಾರ ಸಂಬಂಧ ಬಿಬಿಎಂಪಿ ಅಧಿಕಾರಿಗಳು ಮತ್ತು ಶ್ರೀನಿವಾಸ ಗಾಯತ್ರಿ ರಿಸೋರ್ಸ್‌ ರಿಕವರಿ ಪ್ರೈ.ಲಿನ ವ್ಯವಸ್ಥಾಪಕ ನಿರ್ದೇಶಕರಿಗೆ ಸೇರಿದ ನಾಲ್ಕು ಕಡೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಶ್ರೀನಿವಾಸ ಗಾಯತ್ರಿ ರಿಸೋರ್ಸ್‌ ರಿಕವರಿ ಪ್ರೈ.ಲಿ. ವ್ಯವಸ್ಥಾಪಕ ನಿರ್ದೇಶಕ ರಮೇಶ್‌ ಬಿಂಗಿ ಅವರ ಬನಶಂಕರಿಯ ಎಸ್‌ಬಿಎಂ ಕಾಲೋನಿಯಲ್ಲಿನ ನಿವಾಸ, ಬನಶಂಕರಿ 3ನೇ ಹಂತದಲ್ಲಿನ ಕಚೇರಿ, ಬಿಬಿಎಂಪಿ ನಿವೃತ್ತ ಸಹಾಯಕ ಇಂಜಿನಿಯರ್‌ ಶಿವಲಿಂಗೇಗೌಡ ಅವರ ಮಂಡ್ಯ ಜಿಲ್ಲೆಯ ಚಾಮುಂಡೇಶ್ವರಿ ನಗರದಲ್ಲಿನ ನಿವಾಸ ಮತ್ತು ನಿವೃತ್ತ ಸಹಾಯಕ ಇಂಜಿನಿಯರ್‌ ಎಚ್‌.ಆರ್‌. ಚೆನ್ನಕೇಶವ ಅವರ ಮೈಸೂರಿನ ವಿಜಯನಗರದಲ್ಲಿನ ನಿವಾಸದ ಮೇಲೆ ದಾಳಿ ಮಾಡಿ ಅವ್ಯವಹಾರ ಸಂಬಂಧ ದಾಖಲೆಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಎಸಿಬಿ ಅಧಿಕಾರಿಗಳು ಹೇಳಿದ್ದಾರೆ.

ವಾಲ್ಮೀಕಿ ನಿಗಮದಲ್ಲಿ ಭ್ರಷ್ಟಾಚಾರ: ಮೂವರು ಅರೆಸ್ಟ್‌, 82 ಲಕ್ಷ ಲಂಚ ವಶ

2002 ಡಿ.18ರಂದು ಘನ ತ್ಯಾಜ್ಯದಿಂದ ವಿದ್ಯುತ್‌ ಉತ್ಪಾದಿಸುವ ಘಟಕವನ್ನು ಸ್ಥಾಪಿಸುವ ಯೋಜನೆಗಾಗಿ ಬಿಬಿಎಂಪಿ ಅಧಿಸೂಚನೆ ಹೊರಡಿತ್ತು. ಶ್ರೀನಿವಾಸ ಗಾಯತ್ರಿ ರಿಸೋರ್ಸ್‌ ರಿಕವರಿ ಸಂಸ್ಥೆ ಸ್ಥಾವರ ಸ್ಥಾಪನೆಗೆ ಟೆಂಡರ್‌ ಪಡೆದುಕೊಂಡಿದ್ದರು. ಇದಕ್ಕಾಗಿ 36 ಎಕರೆ ಭೂಮಿಯನ್ನು ನೀಡಲಾಗಿತ್ತು. ಆದರೆ, ಸಂಸ್ಥೆ ನಿಗದಿತ ಅವಧಿಯೊಳಗೆ ಘಟಕವನ್ನು ಸ್ಥಾಪಿಸದೇ, ಬಿಬಿಎಂಪಿಯಿಂದ ಸ್ವೀಕರಿಸುತ್ತಿದ್ದ ಘನ ತ್ಯಾಜ್ಯವನ್ನು ಯಾವುದೇ ವೈಜ್ಞಾನಿಕ ಸಂಸ್ಕರಣೆ ಮಾಡದೆಯೇ ನೇರವಾಗಿ ಭೂ ಭರ್ತಿ ಮಾಡುತ್ತಿದ್ದರು.

ಬಿಬಿಎಂಪಿಯವರು ಪೂರೈಕೆ ಮಾಡಿರುವ ಘನ ತ್ಯಾಜ್ಯಕ್ಕೆ ಸಂಸ್ಥೆಗೆ 4.61 ಕೋಟಿ ಟಿಪ್ಪಿಂಗ್‌ ಶುಲ್ಕ ಪಾವತಿಸಲಾಗಿದೆ. ಸಂಸ್ಕರಣೆ ಮಾಡದ ಘನ ತ್ಯಾಜ್ಯಕ್ಕೂ ಸಹ ಹಣ ಬಿಡುಗಡೆ ಮಾಡಿರುವುದು ಕಂಡುಬಂದಿದೆ. ಹೀಗಾಗಿ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಲಾಗಿದೆ ಎಂದು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Karnataka By-Election Results 2026 LIVE: ಬಾಗಲಕೋಟೆ ಉಪಚುನಾವಣೆ - ಇಂದು ತೋವಿವಿಯಲ್ಲಿ ಮತ ಎಣಿಕೆ; ನಿಷೇಧಾಜ್ಞೆ ಜಾರಿ
Davanagere South by election results 2026: ಇಂದು ಮತ ಎಣಿಕೆ ಹಿನ್ನೆಲೆ 'ಶುಷ್ಕ ದಿವಸ' ಘೋಷಣೆ, ಯಾವಕ್ಕೆಲ್ಲ ನಿರ್ಬಂಧ?