ವಾಲ್ಮೀಕಿ ನಿಗಮದ ಮೇಲೆ ಎಸಿಬಿ ದಾಳಿ: 20 ಲಕ್ಷ ರು. ನಗದು ವಶ

Kannadaprabha News   | Asianet News
Published : Aug 28, 2020, 07:48 AM IST
ವಾಲ್ಮೀಕಿ ನಿಗಮದ ಮೇಲೆ ಎಸಿಬಿ ದಾಳಿ: 20 ಲಕ್ಷ ರು. ನಗದು ವಶ

ಸಾರಾಂಶ

ವಾಲ್ಮೀಕಿ ನಿಗಮದ ಕೇಂದ್ರ ಕಚೇರಿ ಮೇಲೆ ಕಾರ್ಯಾಚರಣೆ| ಮಧ್ಯವರ್ತಿಗಳೊಂದಿಗೆ ಸರ್ಕಾರಿ ಸಿಬ್ಬಂದಿ ಶಾಮೀಲಾಗಿ ಹಣವನ್ನು ಹಂಚಿಕೊಂಡಿದ್ದಾರೆ ಎಂಬ ಆರೋಪ| ಸಾರ್ವಜನಿಕರು ನೀಡಿರುವ ದೂರಿನ ಮೇರೆಗೆ ಎಸಿಬಿ  ಕಾರ್ಯಾಚರಣೆ| 

ಬೆಂಗಳೂರು(ಆ.28): ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಭೂ ಒಡೆತನ ಯೋಜನೆಯಲ್ಲಿ ಅವ್ಯವಹಾರ ನಡೆದಿರುವ ಆರೋಪದ ಮೇರೆಗೆ ನಿಗಮದ ಕಚೇರಿ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ವಸಂತನಗರದಲ್ಲಿನ ನಿಗಮದ ಕೇಂದ್ರ ಕಚೇರಿ ಮೇಲೆ ಗುರುವಾರ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಕಾರ್ಯಾಚರಣೆ ವೇಳೆ 20 ಲಕ್ಷ ರು. ನಗದು ಮತ್ತು ದಾಖಲೆಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಎಸಿಬಿ ಮೂಲಗಳು ಹೇಳಿವೆ. ವಾಲ್ಮೀಕಿ ಅಭಿವೃದ್ಧಿ ನಿಗಮ ಭೂ ಒಡೆತನ ಯೋಜನೆಯಡಿ, ಭೂಮಿ ಖರೀದಿಸಿ ಪರಿಶಿಷ್ಟ ಪಂಗಡದ ಭೂರಹಿತ ಬಡವರಿಗೆ ಹಂಚಿಕೆ ಮಾಡಲಿದೆ. ಕಡಿಮೆ ಬೆಲೆ ಬಾಳುವ ಭೂಮಿಯನ್ನು ಭೂ ಮಾಲೀಕರಿಂದ ಹೆಚ್ಚಿನ ಬೆಲೆಗೆ ಖರೀದಿಸಲಾಗುತ್ತದೆ.

ನಕಲಿ ದಾಖಲೆ ಸೃಷ್ಟಿಸಿ ವಂಚಿಸಲು ಮುಂದಾಗಿದ್ದ ಸರ್ಕಾರಿ ಅಧಿಕಾರಿ: ಎಸಿಬಿ ದಾಳಿ

ಮಧ್ಯವರ್ತಿಗಳೊಂದಿಗೆ ಸರ್ಕಾರಿ ಸಿಬ್ಬಂದಿ ಶಾಮೀಲಾಗಿ ಹಣವನ್ನು ಹಂಚಿಕೊಂಡಿದ್ದಾರೆ ಎಂಬ ಆರೋಪಗಳು ಕೇಳಿಬಂದಿತ್ತು. ಸಾರ್ವಜನಿಕರು ನೀಡಿರುವ ದೂರಿನ ಮೇರೆಗೆ ಎಸಿಬಿ ಅಧಿಕಾರಿಗಳು ಕಾರ್ಯಾಚರಣೆ ಕೈಗೊಂಡಿದ್ದಾರೆ. ಪ್ರಕರಣ ಸಂಬಂಧ ನಿಗಮದ ಸಿಬ್ಬಂದಿಯನ್ನು ವಿಚಾರಣೆ ನಡೆಸಲಾಗುವುದು ಎಂದು ತಿಳಿದುಬಂದಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ತುಮಕೂರಿನಲ್ಲಿ ಉದ್ಯಮಿಗೆ ಲಂಚಕ್ಕೆ ಬೇಡಿಕೆ; ಇಬ್ಬರು ಭ್ರಷ್ಟ ಅಧಿಕಾರಿಗಳು ಲೋಕಾಯುಕ್ತ ಬಲೆಗೆ!
ಮೈಸೂರು ಅರಮನೆ ವರಹ ದ್ವಾರದ ಮೇಲ್ಛಾವಣಿ ಕುಸಿತ; ಪ್ರವಾಸಿಗರ ಗೈರಿನಿಂದ ತಪ್ಪಿದ ಭಾರೀ ಅನಾಹುತ