
ಸೊರಬ (ಡಿ.31): ವಾಹನ ಚಲಾಯಿಸುವಾಗ ಸಂಚಾರಿ ನಿಯಮಗಳನ್ನು ಪಾಲಿಸುವುದರಿಂದ ಯಾವುದೇ ಅಪಘಾತ ಘಟನೆಗಳು ಸಂಭವಿಸುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು. ಪಟ್ಟಣದ ಶ್ರೀ ರಂಗನಾಥಸ್ವಾಮಿ ದೇವಸ್ಥಾನ ಮುಂಭಾಗದಲ್ಲಿ ಪೊಲೀಸ್ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಅಪರಾಧ ತಡೆ ಮಾಸಾಚರಣೆ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಜೀವ ಕೊಂಡುಕೊಳ್ಳಲಾಗದಂಥ ಅಮೂಲ್ಯವಾಗಿದೆ. ಅದನ್ನು ಸುರಕ್ಷಿತವಾಗಿಟ್ಟರೆ ಬಾಳು ಬಂಗಾರ. ಸಂಚಾರಿ ಇಲಾಖೆಯ ನಿಯಮಗಳನ್ನು ಪಾಲಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದರು. ಜಾಥಾ ಉದ್ದೇಶಿಸಿ ಪೊಲೀಸ್ ವೃತ್ತ ನಿರೀಕ್ಷಕ ಎಲ್.ರಾಜಶೇಖರ್ ಮಾತನಾಡಿ, ಸಮಾಜದಲ್ಲಿ ಅಪರಾಧ ಕೃತ್ಯಗಳನ್ನು ತಡೆಗಟ್ಟಲು ಸಾರ್ವಜನಿಕರ ಸಹಕಾರ ಅಗತ್ಯವಾಗಿರುತ್ತದೆ. ಜೊತೆಗೆ ಜನರು ಶಾಂತಿ ಮತ್ತು ನೆಮ್ಮದಿಯಿಂದ ಜೀವನ ಸಾಗಿಸಲು ಇರುವ ಕಾನೂನುಗಳನ್ನು ಪಾಲನೆ ಮಾಡುವ ಕಡೆ ಗಮನ ನೀಡಬೇಕು ಎಂದು ತಿಳಿಸಿದರು.
ದ್ವಿಚಕ್ರ ವಾಹನಗಳನ್ನು ಚಲಾಯಿಸುವಾಗ ಸವಾರರು ತಪ್ಪದೇ ಹೆಲ್ಮೆಟ್ ಧರಿಸಿ. ನಾಲ್ಕು ಚಕ್ರ ವಾಹನಗಳನ್ನು ಚಲಾಯಿಸುವ ಚಾಲಕರು ಕಡ್ಡಾಯವಾಗಿ ಸೀಟ್ ಬೆಲ್ಟ್ಗಳನಳನ್ನು ಹಾಕಿಕೊಳ್ಳಬೇಕು. ಇದರಿಂದ ಅಪಘಾತ ಸಂಭವಿಸಿದಾಗ ಜೀವಕ್ಕೆ ಅಪಾಯ ಕಡಿಮೆ ಆಗುತ್ತದೆ. ಮದ್ಯಪಾನ ಸೇವಿಸಿ ವಾಹನ ಚಾಲನೆ, ಅಪ್ರಾಪ್ತರು ವಾಹನ ಚಾಲನೆ ಮಾಡುವುದು ಅಪರಾಧವಾಗಿದೆ. ತಮ್ಮ ಮನೆ, ವಾಸ ಸ್ಥಳದ ಸುತ್ತ ಅನುಮಾನಸ್ಪದ ವ್ಯಕ್ತಿಗಳು ಕಂಡುಬಂದರೆ ತಕ್ಷಣ ಪೊಲೀಸ್ ಇಲಾಖೆಗೆ ಮಾಹಿತಿ ನೀಡಬೇಕು. ಸಮಾಜದ ರಕ್ಷಣೆಗೆ ಇಲಾಖೆ ಸದಾ ಸನ್ನದ್ಧವಾಗಿದೆ ಎಂದರು.
ಚಾಮುಂಡಿಬೆಟ್ಟ ಒಂದು ಧಾರ್ಮಿಕ ಕ್ಷೇತ್ರ. ಅಲ್ಲಿಗೆ ರೋಪ್ ವೇ ಬೇಡ: ಸಂಸದ ಪ್ರತಾಪ ಸಿಂಹ
ನಂತರ ಜಾಥಾವು ಶ್ರೀ ರಂಗನಾಥ ದೇವಸ್ಥಾನದ ಮುಂಭಾಗದಿಂದ ಮುಖ್ಯರಸ್ತೆ ಮಾರ್ಗವಾಗಿ ಪುರಸಭೆ ಮುಂಭಾಗದ ವೃತ್ತದವರೆಗೆ ನಡೆಯಿತು. ಜಾಥಾದಲ್ಲಿ ವಿವಿಧ ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಆಟೋ ಚಾಲಕರು ಪಾಲ್ಗೊಂಡಿದ್ದರು. ಪಿಎಸ್ಐ ಎಚ್.ಎನ್. ನಾಗರಾಜ್, ಹೆಡ್ ಕಾನ್ಸ್ಟೇಬಲ್ ನಾಗೇಶ್, ನಾಗರಾಜ್, ಗಿರೀಶ್, ಸಿಬ್ಬಂದಿ ಹನುಮಂತಪ್ಪ, ಇರ್ಷಾದ್, ಸುನೀಲ್ ಬನ್ನಿಕೊಪ್ಪ, ಪರಮಪ್ಪ, ಉಮೇಶ್, ಶಾಲಾ ಕಾಲೇಜಿನ ಅಧ್ಯಾಪಕರು ಉಪಸ್ಥಿತರಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ