20 ಲಕ್ಷ ರೂ. ಕದ್ದ ಕಾರು ಚಾಲಕಕ ಗೋವಾದ ಕ್ಯಾಸಿನೋದಲ್ಲಿ ಸೆರೆ!

Published : Aug 07, 2023, 01:43 PM IST
20 ಲಕ್ಷ ರೂ. ಕದ್ದ ಕಾರು ಚಾಲಕಕ ಗೋವಾದ ಕ್ಯಾಸಿನೋದಲ್ಲಿ ಸೆರೆ!

ಸಾರಾಂಶ

ಕುಡಿಯುವ ನೀರಿನ ಕಾಮಗಾರಿ ಕಾರ್ಮಿಕರಿಗೆ ವೇತನ ಕೊಡಲು ತಂದಿದ್ದ 20 ಲಕ್ಷ ರೂ. ಇದ್ದ ಬ್ಯಾಗ್ ಕದ್ದು ಪರಾರಿಯಾಗಿದ್ದ ಆರೋಪಿ ಗೋವಾದ ಕ್ಯಾಸಿನೋದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ.

ಶಿವಮೊಗ್ಗ (ಆ.7) : ಕುಡಿಯುವ ನೀರಿನ ಕಾಮಗಾರಿ ಕಾರ್ಮಿಕರಿಗೆ ವೇತನ ಕೊಡಲು ತಂದಿದ್ದ 20 ಲಕ್ಷ ರೂ. ಇದ್ದ ಬ್ಯಾಗ್ ಕದ್ದು ಪರಾರಿಯಾಗಿದ್ದ ಆರೋಪಿ ಗೋವಾದ ಕ್ಯಾಸಿನೋದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ.

 ಶಿರಾಳಕೊಪ್ಪ ನೆಹರು ಕಾಲೋನಿಯ ಎ.ಎಸ್.ನಿತೀಶ್ ಬಂಧಿತ ಆರೋಪಿ. ಬಂಧಿತನಿಂದ 7.61 ಲಕ್ಷ ರೂ. ನಗದು ಜಪ್ತಿ. ಗೋವಾದ ಕ್ಯಾಸಿನೊದಲ್ಲಿರುವ ಬಗ್ಗೆ ಮಾಹಿತಿ ಕಲೆಹಾಕಿದ ಪೊಲೀಸರು ಕ್ಯಾಸಿನೋಗೆ ತೆರಳಿ ಆರೋಪಿ ಬಂಧಿಸಿ ಕರೆತಂದ   ಶಿವಮೊಗ್ಗದ ತುಂಗಾನಗರ ಠಾಣೆ ಪೊಲೀಸರು. 

ಶಿವಮೊಗ್ಗ ನಗರದಲ್ಲಿ ನಡೆಯುತ್ತಿರುವ 24*7 ಕುಡಿಯುವ ನೀರು ಸರಬರಾಜಿನ ಯೋಜನಾ ವ್ಯವಸ್ಥಾಪಕ ಹೇಮಂತ್ ಕುಮಾರ್ ಕಾರಿನ ಚಾಲಕನಾಗಿದ್ದ ಆರೋಪಿ. ಕಳೆದ ಜು.29ರಂದು ಜ್ಯೋತಿನಗರದ ಬಳಿ ಹಣವಿದ್ದ ಬ್ಯಾಗ್ ಕಿತ್ತುಕೊಂಡು ಹೋಗಿದ್ದ. ಈ ಬಗ್ಗೆ ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 

ಶಿವಮೊಗ್ಗ: ವಿಕಲಚೇತನ ಕಲ್ಯಾಣಾಧಿಕಾರಿ ಕಚೇರಿಗೆ ನುಗ್ಗಿ ಪತ್ನಿಗೆ ಥಳಿಸಿದ ಪತಿ!

ಜೂಜಾಟದ ಗೀಳು ಬೆಳೆಸಿಕೊಂಡಿದ್ದ ನಿತೀಶ್ 20 ಲಕ್ಷ ರೂ.ನಲ್ಲಿ 12.39 ಲಕ್ಷ ರೂ. ಕ್ಯಾಸಿನೋದಲ್ಲಿ ಜೂಜಾಡಿ ಕಳೆದಿದ್ದಾನೆ ಎನ್ನಲಾಗಿದೆ. 7,61,500 ರೂ. ನಗದು ಮತ್ತು ಮೊಬೈಲ್ ಜಪ್ತಿ ಮಾಡಲಾಗಿದೆ

 ಡಿವೈಎಸ್ಪಿ ಬಾಲರಾಜ್ , ತುಂಗಾನಗರ ಠಾಣೆ ಇನ್‌ಸ್ಪೆಕ್ಟರ್ ಮಂಜುನಾಥ್‌  ಪಿಎಸ್‌ಐಗಳಾದ ಕುಮಾರ್ ಕುರಗುಂದ, ಎಂ.ರಘುವೀರ ನೇತೃತ್ವದಲ್ಲಿ ಕಾರ್ಯಾಚರಣ

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
ದ್ವೇಷ ಭಾಷಣ ತಡೆಗೆ ಕಾನೂನು ಯತ್ನ: ಕಾಂಗ್ರೆಸ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಆಕ್ರೋಶ