ಯೂ ಟರ್ನ್ ಆದ ಪ್ರಕರಣ : ಸಂಬರಗಿ ವಿರುದ್ಧವೇ ಕೇಸ್

Kannadaprabha News   | Asianet News
Published : Nov 20, 2020, 11:40 AM ISTUpdated : Nov 20, 2020, 12:16 PM IST
ಯೂ ಟರ್ನ್ ಆದ ಪ್ರಕರಣ : ಸಂಬರಗಿ ವಿರುದ್ಧವೇ ಕೇಸ್

ಸಾರಾಂಶ

ಹಲವು ಸ್ಯಾಂಡಲ್‌ವುಡ್ ತಾರೆಯರು ಹಾಗೂ ರಾಜಕಾರಣಿಗಳ ಮೇಲೆ ಆರೋಪ ಮಾಡಿದ್ದ ಪ್ರಶಾಂತ್ ಸಂಬರಗಿ ವಿರುದ್ಧವೇ ಪ್ರಕರಣ ತಿರುಗಿ ಬಿದ್ದಿದೆ

ಬೆಂಗಳೂರು (ನ.20):  ಮಾದಕ ವಸ್ತುಗಳ ಜಾಲ ಪ್ರಕರಣದಲ್ಲಿ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಜಮೀರ್‌ ಅಹಮ್ಮದ್‌ ಖಾನ್‌ ಅವರಿಗೂ ನಂಟಿದೆ ಎಂದು ಆರೋಪಿಸಿದ್ದ ಪ್ರಶಾಂತ್‌ ಸಂಬರಗಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲು ಪೊಲೀಸರಿಗೆ ನಿರ್ದೇಶಿಸಿರುವ ನಗರದ 24ನೇ ಎಸಿಎಂಎಂ ನ್ಯಾಯಾಲಯ, ಪ್ರಕರಣ ಸಂಬಂಧ ಜನವರಿ 21ರಂದು ವಿಚಾರಣೆಗೆ ಹಾಜರಾಗಲು ಸಂಬರಗಿಗೆ ಸೂಚಿಸಿದೆ.

ಪ್ರಶಾಂತ್‌ ಸಂಬರಗಿ ತಮ್ಮ ವಿರುದ್ಧ ಅನಗತ್ಯ ಮತ್ತು ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಈ ಸಂಬಂಧ ಚಾಮರಾಜಪೇಟೆ ಠಾಣೆ ಪೊಲೀಸರಿಗೆ ದೂರು ನೀಡಿದ್ದರೂ ಕ್ರಮಕ್ಕೆ ಮುಂದಾಗಿಲ್ಲ. ಆದ್ದರಿಂದ ಅವರ ವಿರುದ್ಧ ಕಾನೂನು ಪ್ರಕಾರ ಶಿಸ್ತುಕ್ರಮ ಕೈಗೊಳ್ಳಲು ಸೂಚನೆ ನೀಡಬೇಕು ಎಂದು ಶಾಸಕ ಜಮೀರ್‌ ಅಹ್ಮದ್‌ ಖಾನ್‌ ನಗರದ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು.

ಸಂಬರಗಿ ಮತ್ತೊಂದು ಸ್ಫೋಟಕ ಹೇಳಿಕೆ : ಕಾಂಗ್ರೆಸ್‌ ಮುಖಂಡರತ್ತ ಈ ಮಾತು .

ದೂರಿನ ಸಂಬಂಧ ವಿಚಾರಣೆ ನಡೆಸಿದ ನ್ಯಾಯಾಲಯ, ಆರೋಪಿ ಪ್ರಶಾಂತ್‌ ಸಂಬರಗಿ ವಿರುದ್ಧ ಐಪಿಸಿ 499 (ಮಾನ ಹಾನಿ) ಹಾಗೂ 500 (ಮಾನನಷ್ಟಕ್ಕೆ ಶಿಕ್ಷೆ) ಸೆಕ್ಷನ್‌ಗಳ ಅಡಿ ಮೊಕ್ಕದಮೆ ದಾಖಲಿಸುವಂತೆ ಪೊಲೀಸರಿಗೆ ನಿರ್ದೇಶಿಸಿದೆ.

ಪ್ರಶಾಂತ್‌ ಸಂಬರಗಿ ಅವರು ಪತ್ರಿಕಾಗೋಷ್ಠಿಯಲ್ಲಿ ಶಾಸಕ ಜಮೀರ್‌ ಅಹ್ಮದ್‌ ಖಾನ್‌ ವಿರುದ್ಧ ಹೇಳಿಕೆ ನೀಡಿ, ನಟಿ ಸಂಜನಾ ಗಲ್ರಾನಿ ಅವರೊಂದಿಗೆ ಶ್ರೀಲಂಕಾದ ಕೊಲಂಬೋದ ಕ್ಯಾಸಿನೋಗಳಿಗೆ ಹೋಗಿದ್ದರು. ಇದಕ್ಕೆ ಸಂಬಂಧಿಸಿದಂತೆ ತನ್ನ ಬಳಿ ಸಾಕ್ಷ್ಯಗಳಿರುವುದಾಗಿ ಹೇಳಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಡಿಕೆಸು ಹೆಸರಿನಲ್ಲಿ ಕೋಟ್ಯಂತರ ವಂಚನೆ ಪ್ರಕರಣ.. 'ಬಂಗಾರಿ' ಕೇಸ್‌ನಲ್ಲಿ ನಟ ಧರ್ಮಗೆ ಧ್ವನಿ ಪರೀಕ್ಷೆ?
ಬೆಳಗಾವಿಯ 31 ಕೃಷ್ಣಮೃಗ ಸಾವಿಗೆ ಸಿಬ್ಬಂದಿ ನಿರ್ಲಕ್ಷ್ಯ ಕಾರಣವಲ್ಲ: ಸಚಿವ ಈಶ್ವರ್ ಖಂಡ್ರೆ