ಕೊರೊನಾ ನಿರ್ವಹಣೆಗೆ ಸಿಎಂ 6 ಖಡಕ್ ಸೂತ್ರಗಳು: ಸೂಚನೆ ಪಾಲಿಸಬೇಕು ಅಷ್ಟೇ.!

Suvarna News   | Asianet News
Published : Jul 17, 2020, 07:08 PM IST
ಕೊರೊನಾ ನಿರ್ವಹಣೆಗೆ ಸಿಎಂ 6 ಖಡಕ್ ಸೂತ್ರಗಳು: ಸೂಚನೆ ಪಾಲಿಸಬೇಕು ಅಷ್ಟೇ.!

ಸಾರಾಂಶ

ಲಾಕ್‌ಡೌನ್‌ ಮಧ್ಯೆ ಜನರು ಗುಂಪು ಗುಂಪಾಗಿ ಸೇರಿದರೆ ಮುಲಾಜಿಲ್ಲದೇ ಕ್ರಮ ಕೈಗೊಳ್ಳಿ ಎಂದು ಅಷ್ಟದಿಕ್ಪಾಲಕರ ಸಭೆಯಲ್ಲಿ ಸಿಎಂ ಖಡಕ್ ಸೂಚನೆ ನೀಡಿದ್ದಾರೆ.ಹೆಚ್ಚಿನ ಪೊಲೀಸ್ ನಿಯೋಜಿಸಲು ಸೂಚನೆ ನೀಡಿದ್ದಾರೆ.

ಬೆಂಗಳೂರು (ಜು. 17): ಬೆಂಗಳೂರಿನಲ್ಲಿ ಕೋವಿಡ್19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಇಂದು ಸಚಿವರು ಹಾಗೂ ಸಂಸದರ ಸಭೆ ನಡೆಸಿದರು.

 

ಲಾಕ್‌ಡೌನ್‌ ಮಧ್ಯೆ ಜನರು ಗುಂಪು ಗುಂಪಾಗಿ ಸೇರಿದರೆ ಮುಲಾಜಿಲ್ಲದೇ ಕ್ರಮ ಕೈಗೊಳ್ಳಿ ಎಂದು ಅಷ್ಟದಿಕ್ಪಾಲಕರ ಸಭೆಯಲ್ಲಿ ಸಿಎಂ ಖಡಕ್ ಸೂಚನೆ ನೀಡಿದ್ದಾರೆ.ಹೆಚ್ಚಿನ ಪೊಲೀಸ್ ನಿಯೋಜಿಸಲು ಸೂಚನೆ ನೀಡಿದ್ದಾರೆ.

ಮನೆಯಲ್ಲಿ ಜಾಗ ಇಲ್ಲದವರಿಗೆ ಕಲ್ಯಾಣ ಮಂಟಪಗಳೇ ಕ್ವಾರಂಟೈನ್ ಕೇಂದ್ರಗಳನ್ನಾಗಿ ಮಾಡಲಾಗುತ್ತದೆ. ಪ್ರತಿ ವಾರ್ಡ್‌ಗಳಲ್ಲಿ ಕಲ್ಯಾಣ ಮಂಟಪಗಳನ್ನು ಗುರುತಿಸಿ ಜೊತೆಗೆ ಕೊರೊನಾ ಪರೀಕ್ಷೆಯನ್ನೂ ಹೆಚ್ಚಿಸುವಂತೆ ಅಷ್ಟದಿಕ್ಪಾಲಕರಿಗೆ ಸೂಚನೆ ನೀಡಿದ್ದಾರೆ.

ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮೇಲೆ ನಿಗಾ ಇರಲಿ. ಚಿಕಿತ್ಸೆ ಸೌಲಭ್ಯ ದೊರಕಿಸಲು ಖಾತ್ರಿಪಡಿಸಬೇಕು.ಲಕ್ಷಣವಿಲ್ಲದ ಸೋಂಕಿತರಿಗೆ ಆಸ್ಪತ್ರೆ ಚಿಕಿತ್ಸೆ ಬೇಡ. ಹೋಂ ಕ್ವಾರಂಟೈನ್ ಸಾಕು. ಯಾವುದೇ ಕಾರಣಕ್ಕೂ ಖಾಸಗಿ ಅಸ್ಪತ್ರೆಗಳು ಉದ್ಧಟತನ ಮಾಡದಂತೆ ನಿಗಾ ವಹಿಸಿ ಎಂದು ಸೂಚನೆ ನೀಡಿದ್ದಾರೆ.

ಬೆಡ್‌ ನೀಡದ ಖಾಸಗಿ ಆಸ್ಪತ್ರೆಗಳಿಗೆ ವಾರ್ನಿಂಗ್ ನೀಡಲಾಗಿದೆ. ತಪ್ಪಿತಸ್ಥ ಖಾಸಗಿ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಆದೇಶಿಸಿದ್ದಾರೆ. ಖಾಸಗಿ ಅಸ್ಪತ್ರೆಗಳಲ್ಲಿ ಬೆಡ್‌ ಬಗ್ಗೆ ನಿಗಾ ವಹಿಸಿ ಎಂದು ಉಸ್ತುವಾರಿಗಳಿಗೆ ನಿರ್ದೇಶನ ಕೊಟ್ಟಿದ್ದಾರೆ.

ಮೃತದೇಹಗಳ ತ್ವರಿತ ವಿಲೇವಾರಿಯಾಗಲಿ. ಆಸ್ಪತ್ರೆಗಳಲ್ಲಿ ಮೃತಪಟ್ಟರೆ ಆಂಟಿಜೆನ್ ಟೆಸ್ಟ್‌ ಆಗಲಿ ಎಂದು ಸಿಎಂ ಸೂಚನೆ ನೀಡಿದ್ದಾರೆ.

ಕೋವಿಡ್ ಎಂದು ಗೊತ್ತಾದ ಕೂಡಲೇ ಆಸ್ಪತ್ರೆಗೆ ದಾಖಲು ಮಾಡಬೇಕು. ಸೋಂಕಿತರು 2 ಗಂಟೆಯಲ್ಲಿ ಆಸ್ಪತ್ರೆಗೆ ದಾಖಲಾಗಬೇಕು ಎಂದಿದ್ದಾರೆ. 


 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!
ದ್ವೇಷ ಭಾಷಣ ಪ್ರಕರಣ; ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ಗೆ ನಿರೀಕ್ಷಣಾ ಜಾಮೀನು!