ನಟ ದರ್ಶನ್ ಇಂದು ಬಳ್ಳಾರಿ ಜೈಲಿಗೆ ಶಿಫ್ಟ್ ಆಗೋದು ಡೌಟ್?

Published : Aug 28, 2024, 05:51 PM IST
ನಟ ದರ್ಶನ್ ಇಂದು ಬಳ್ಳಾರಿ ಜೈಲಿಗೆ ಶಿಫ್ಟ್ ಆಗೋದು ಡೌಟ್?

ಸಾರಾಂಶ

ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಯುತ್ತಿರೋ ಹಿನ್ನೆಲೆಯಲ್ಲಿ ತನಿಖೆ ಮುಗಿಯೋತನಕ ಬಳ್ಳಾರಿ ಜೈಲಿಗೆ ದರ್ಶನ್ ಶಿಫ್ಟ್ ಆಗುವ ಸಾಧ್ಯತೆ ಕಡಿಮೆ ಇದೆ. 

ಬೆಂಗಳೂರು(ಆ.28): ಬೆಂಗಳೂರಿನ ಪರಪ್ಪನ ಅಗ್ರಹಾರದಿಂದ ನಟ ದರ್ಶನ್ ಇಂದು ಬಳ್ಳಾರಿ ಜೈಲಿಗೆ ಶಿಫ್ಟ್ ಆಗೋದು ಡೌಟ್ ಆಗಿದೆ. ಹೌದು,  ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯ ಕೇಸ್ ತನಿಖೆ ಹಿನ್ನೆಲೆಯಲ್ಲಿ ದರ್ಶನ್ ಇಂದು ಬಳ್ಳಾರಿಗೆ ಶಿಫ್ಟ್ ಆಗೋ ಸಾಧ್ಯತೆ ಕಡಿಮೆ ಇದೆ ಎಂದು ತಿಳಿದು ಬಂದಿದೆ. 

ನಟ ದರ್ಶನ್ ಇಬ್ಬರು ತನಿಖಾಧಿಕಾರಿಗಳ ಮುಂದೆ ಹೇಳಿಕೆ ನೀಡಬೇಕು. ಸ್ಥಳ ಮಹಜರು ವೇಳೆ ನಟ ದರ್ಶನ್ ಖುದ್ದು ಹಾಜರಿದ್ದು, ಹೇಳಿಕೆ ದಾಖಲು ಮಾಡಬೇಕು. ದರ್ಶನ್ ಕೈಯಲ್ಲಿದ್ದದ್ದು, ಸಿಗರೇಟ್ ಅಥವಾ ಗಾಂಜಾನಾ?. ಈ ಬಗ್ಗೆ ತನಿಖಾಧಿಕಾರಿಗಳು ತನಿಖೆ ಮಾಡಬೇಕಿದೆ ದರ್ಶನ್ ಕಪ್‌ನಲ್ಲಿ ಕುಡಿದದ್ದು ಕಾಫಿನಾ? ಟೀನಾ?. ಅಥವಾ ಮದ್ಯಪಾನನಾ? ಈ ಬಗ್ಗೆ ಕೂಡ ತನಿಖೆ ಆಗಬೇಕಿದೆ. ಈ ಎಲ್ಲಾ ತನಿಖೆಗೆ ನಟ ದರ್ಶನ್ ವೈದ್ಯಕೀಯ ಪರೀಕ್ಷೆ ಆಗಬೇಕಿದೆ. ರಕ್ತ, ಮೂತ್ರ ಸ್ಯಾಂಪಲ್ ಪಡೆದು ಪರೀಕ್ಷೆ ನಡೆಸಬೇಕಿದೆ. ಈ ಎಲ್ಲಾ ಪರೀಕ್ಷೆಗೆ ನಟ ದರ್ಶನ್ ಸಹಕರಿಸಬೇಕು. ಇಲ್ಲವಾದರೆ ತನಿಖೆ ಮತ್ತಷ್ಟು ವಿಳಂಬ ಆಗುವ ಸಾಧ್ಯತೆ ಇದೆ.  ತನಿಖೆ ಮುಗಿಯದ ಹೊರತು ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಡೌಟ್ ಎನ್ನಲಾಗಿದೆ.  ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಯುತ್ತಿರೋ ಹಿನ್ನೆಲೆಯಲ್ಲಿ ತನಿಖೆ ಮುಗಿಯೋತನಕ ಬಳ್ಳಾರಿ ಜೈಲಿಗೆ ದರ್ಶನ್ ಶಿಫ್ಟ್ ಆಗುವ ಸಾಧ್ಯತೆ ಕಡಿಮೆ ಇದೆ. 

ಜೈಲಲ್ಲಿ ದೌಲತ್ತು ಮಾಡಿ ದಿಕ್ಕಾಪಾಲಾದ ಡಿ ಗ್ಯಾಂಗ್​​..! ದರ್ಶನ್ ವಿರುದ್ಧ ದಾಖಲಾಯ್ತು ಮತ್ತೆರಡು FIR..!

ಧರ್ಮ ಜೈಲಿನಿಂದ ವಿಡಿಯೋ ಕಾಲ್ ಮಾಡಿದ್ದ ಮೊಬೈಲ್ ಕೂಡ ಪತ್ತೆ ಆಗಿಲ್ಲ. ಮೊಬೈಲ್ ಗಾಗಿ ಜೈಲಿನಲ್ಲಿ ತನಿಖಾಧಿಕಾರಿ ಶೋಧಕಾರ್ಯ ನಡೆಸುತ್ತಿದ್ದಾರೆ. ತನಿಖಾಧಿಕಾರಿ ಎಲೆಕ್ಟ್ರಾನಿಕ್ ಸಿಟಿ ಎಸಿಪಿ ಮಂಜುನಾಥ್ ಅವರು ಶೋಧಕಾರ್ಯ ನಡೆಸಿದ್ದಾರೆ. ಧರ್ಮ ಮಾಡಿದ ವಿಡಿಯೋ ಕಾಲ್ ನಲ್ಲಿ ಸತ್ಯನ ಜೊತೆ ದರ್ಶನ್ ಮಾತನಾಡಿದ್ದ. ಮೊಬೈಲ್ ಪತ್ತೆಯಾಗದೆ ತನಿಖೆ ತಾರ್ಕಿಕ ಅಂತ್ಯ ಕಾಣೋದಿಲ್ಲ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಅಂಕಣ | ರಾಜ್ಯದಲ್ಲಿ ಕಾಂಗ್ರೆಸ್‌ನಿಂದ ಉದ್ಯೋಗದ ನವಯುಗ!
ಗ್ರಾಪಂ ಅಧ್ಯಕ್ಷರೂ ಮತ್ತು ಹಸಿರು ಪೆನ್ನೂ...!