ಮಹಿಳೆಯರ ಉಚಿತ ಪ್ರಯಾಣ: ಪ್ರಯಾಣಿಕರ ಒತ್ತಡಕ್ಕೆ ತಕ್ಕಂತೆ ಹೆಚ್ಚುವರಿ ಉಚಿತ ಬಸ್‌

Published : Jun 21, 2023, 03:30 AM IST
ಮಹಿಳೆಯರ ಉಚಿತ ಪ್ರಯಾಣ: ಪ್ರಯಾಣಿಕರ ಒತ್ತಡಕ್ಕೆ ತಕ್ಕಂತೆ ಹೆಚ್ಚುವರಿ ಉಚಿತ ಬಸ್‌

ಸಾರಾಂಶ

ಪ್ರಯಾಣಿಕರ ಸಂಖ್ಯೆ ಹೆಚ್ಚಿರುವ ಕಡೆ ಹೆಚ್ಚಿನ ಬಸ್‌ಗಳನ್ನು ಸಂಚರಿಸುವಂತೆ ಮಾಡಿ ನೂಕುನುಗ್ಗಲು ಇರದಂತೆ ಮಾಡಬೇಕು. ಟಿಕೆಟ್‌ ವಿತರಣೆ, ಗುರುತಿಸಿರುವ 10 ಸ್ಥಳಗಳಲ್ಲಿ ಹೆಚ್ಚಿನ ಸಿಬ್ಬಂದಿ ನಿಯೋಜಿಸಿ ಸುಗಮ ಸಂಚಾರಕ್ಕೆ ಅನುವಾಗುವಂತೆ ಮಾಡಬೇಕು ಎಂದು ಸೂಚಿಸಿದ ಅನ್ಬುಕುಮಾರ್‌ 

ಬೆಂಗಳೂರು(ಜೂ.21):  ಮಹಿಳೆಯರು ಉಚಿತವಾಗಿ ಸರ್ಕಾರಿ ಬಸ್‌ಗಳಲ್ಲಿ ಸಂಚರಿಸಲು ಅವಕಾಶ ನೀಡುವ ‘ಶಕ್ತಿ’ ಯೋಜನೆಯನ್ನು ಯಶಸ್ವಿಗೊಳಿಸಲು ಜನಸಂದಣಿ ಹೆಚ್ಚಿರುವ 10 ಸ್ಥಳಗಳನ್ನು ಗುರುತಿಸಬೇಕು ಹಾಗೂ ವಿಶೇಷ ಜಾತ್ರೆ, ಹಬ್ಬವಿರುವ ದಿನಗಳಂದು ಪ್ರಮುಖ ಸ್ಥಳಗಳಿಗೆ ಪ್ರಯಾಣಿಕರ ದಟ್ಟಣೆಗೆ ಅನುಗುಣವಾಗಿ ಹೆಚ್ಚುವರಿ ಬಸ್‌ಗಳ ನಿಯೋಜನೆ ಮಾಡುವಂತೆ ಕೆಎಸ್ಸಾರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್‌ ಅಧಿಕಾರಿಗಳಿಗೆ ಸೂಚಿಸಿದ್ದಾರೆ. 

ಯೋಜನೆ ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿಗೆ ತರಲು ಮಂಗಳವಾರ ಕೆಎಸ್ಸಾರ್ಟಿಸಿಯ 16 ವಿಭಾಗಗಳ ವಿಭಾಗೀಯ ನಿಯಂತ್ರಣಾಧಿಕಾರಿಗಳು, ವಿಭಾಗೀಯ ಸಂಚಾರ ಅಧಿಕಾರಿಗಳು ಹಾಗೂ 83 ಘಟಕ ವ್ಯವಸ್ಥಾಪಕರೊಂದಿಗೆ ವಚ್ರ್ಯುವಲ್‌ ಸಭೆ ನಡೆಸಿದರು. 

ಬಾಗಲಕೋಟೆ: ಬಸ್‌ ಕಿಟಕಿಗಳೇ ಬಾಗಿಲುಗಳಾದವು..!

ಈ ವೇಳೆ ಮಾತನಾಡಿದ ಅನ್ಬುಕುಮಾರ್‌, ಪ್ರಯಾಣಿಕರ ಸಂಖ್ಯೆ ಹೆಚ್ಚಿರುವ ಕಡೆ ಹೆಚ್ಚಿನ ಬಸ್‌ಗಳನ್ನು ಸಂಚರಿಸುವಂತೆ ಮಾಡಿ ನೂಕುನುಗ್ಗಲು ಇರದಂತೆ ಮಾಡಬೇಕು. ಟಿಕೆಟ್‌ ವಿತರಣೆ, ಗುರುತಿಸಿರುವ 10 ಸ್ಥಳಗಳಲ್ಲಿ ಹೆಚ್ಚಿನ ಸಿಬ್ಬಂದಿ ನಿಯೋಜಿಸಿ ಸುಗಮ ಸಂಚಾರಕ್ಕೆ ಅನುವಾಗುವಂತೆ ಮಾಡಬೇಕು ಎಂದು ಸೂಚಿಸಿದರು.

ಬಸ್ಸುಗಳ ನಿಯೋಜನೆ ಮತ್ತು ಸಾರಿಗೆ ವ್ಯವಸ್ಥೆಯಲ್ಲಿ ಗೊಂದಲಗಳಾಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು. ನಿಗಮದ ಚಾಲನಾ ಸಿಬ್ಬಂದಿಯೊಂದಿಗೆ ಸಂವಾದ ನಡೆಸಿ, ಅವರಿಂದ ಬರುವ ಅಭಿಪ್ರಾಯದಂತೆ ಸೇವೆ ಒದಗಿಸಬೇಕು. ಜತೆಗೆ ಕೇಂದ್ರ ಕಚೇರಿಯ ಹಿರಿಯ ಅಧಿಕಾರಿಗಳು, ಉಸ್ತುವಾರಿ ಅಧಿಕಾರಿಗಳು ಪ್ರತಿವಾರ ವಿಭಾಗಗಳಿಗೆ ಭೇಟಿ ನೀಡಿ ಪರಾಮರ್ಶೆ ನಡೆಸಬೇಕು ಹಾಗೂ ಸಭೆಗಳನ್ನು ನಡೆಸಬೇಕು. ಯೋಜನೆಯಿಂದ ವಿದ್ಯಾರ್ಥಿಗಳಿಗೆ ಸಮಸ್ಯೆ ಆಗದಂತೆ ಸೂಕ್ತ ರೀತಿಯಲ್ಲಿ ಬಸ್ಸುಗಳ ಹೆಚ್ಚುವರಿ ಟ್ರಿಪ್‌ಗಳ ಕಾರ್ಯಾಚರಣೆ ಮಾಡಬೇಕು ಎಂದು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಅಂಕಣ | ರಾಜ್ಯದಲ್ಲಿ ಕಾಂಗ್ರೆಸ್‌ನಿಂದ ಉದ್ಯೋಗದ ನವಯುಗ!
ಗ್ರಾಪಂ ಅಧ್ಯಕ್ಷರೂ ಮತ್ತು ಹಸಿರು ಪೆನ್ನೂ...!