ಪಿಎಸ್‌ಐ ಅಕ್ರಮ: ಎಡಿಜಿಪಿ ಪೌಲ್‌ 3ನೇ ದಿನದ ವಿಚಾರಣೆಗೆ ಗೈರು

Published : May 28, 2022, 05:58 AM IST
ಪಿಎಸ್‌ಐ ಅಕ್ರಮ: ಎಡಿಜಿಪಿ ಪೌಲ್‌ 3ನೇ ದಿನದ ವಿಚಾರಣೆಗೆ ಗೈರು

ಸಾರಾಂಶ

*  ಹೊಸ ದಿನಾಂಕ ನಿಗದಿ ಮಾಡಿ ಸಿಐಟಿ ನೋಟಿಸ್‌ ಸಾಧ್ಯತೆ *  ಅಮೃತ್‌ ಪೌಲ್‌ ಅವರು ವೈಯಕ್ತಿಕ ಕಾರಣ ನೀಡಿ ವಿಚಾರಣೆಗೆ ಗೈರು * 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಅವ್ಯವಹಾರ 

ಬೆಂಗಳೂರು(ಮೇ.28):ಪಿಎಸ್‌ಐ ಪರೀಕ್ಷಾ ಅವ್ಯವಹಾರ ಪ್ರಕರಣ ಸಂಬಂಧ ಕಳೆದ ಎರಡು ದಿನಗಳಿಂದ ಸಿಐಡಿ ವಿಚಾರಣೆ ಎದುರಿಸುತ್ತಿದ್ದ ಎಡಿಜಿಪಿ ಅಮೃತ್‌ ಪೌಲ್‌ ಮೂರನೇ ದಿನವಾದ ಶುಕ್ರವಾರದ ವಿಚಾರಣೆಗೆ ಗೈರು ಹಾಜರಾಗಿದ್ದಾರೆ.

ಶುಕ್ರವಾರ ಬೆಳಗ್ಗೆ 11 ಗಂಟೆ ಕಾಲ್‌ರ್‍ಟನ್‌ ಹೌಸ್‌ನಲ್ಲಿರುವ ಸಿಐಡಿ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ತನಿಖಾಧಿಕಾರಿ ಸೂಚಿಸಿದ್ದರು. ಆದರೆ, ಅಮೃತ್‌ ಪೌಲ್‌ ಅವರು ವೈಯಕ್ತಿಕ ಕಾರಣ ನೀಡಿ ವಿಚಾರಣೆಗೆ ಗೈರು ಹಾಜರಾಗಿದ್ದಾರೆ ಎಂದು ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು ಶೀಘ್ರದಲ್ಲೇ ಮತ್ತೊಂದು ದಿನ ನಿಗದಿ ಮಾಡಿ ವಿಚಾರಣೆಗೆ ಹಾಜರಾಗುವಂತೆ ಅಮೃತ್‌ ಪೌಲ್‌ಗೆ ನೋಟಿಸ್‌ ನೀಡುವ ಸಾಧ್ಯತೆಯಿದೆ ಎನ್ನಲಾಗಿದೆ.

545 ಪಿಎಸ್‌ಐ ಹುದ್ದೆಗಳ ನೇಮಕಾತಿ ಅವ್ಯವಹಾರದಲ್ಲಿ ಭಾಗಿಯಾಗಿರುವ ಬಗ್ಗೆ ಸಾಕ್ಷ್ಯ ಲಭವಾದ ಹಿನ್ನೆಲೆಯಲ್ಲಿ ಪೊಲೀಸ್‌ ನೇಮಕಾತಿ ವಿಭಾಗದ ಡಿವೈಎಸ್ಪಿ ಸೇರಿದಂತೆ ಕೆಳ ಹಂತದ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಸಿಐಡಿ ಬಂಧಿಸಿದೆ. ಎಡಿಜಿಪಿ ಅಮೃತ್‌ ಪೌಲ್‌ ಅವರು ಈ ನೇಮಕಾತಿ ವಿಭಾಗದ ಮುಖ್ಯಸ್ಥರಾಗಿದ್ದ ಅವಧಿಯಲ್ಲೇ ಪಿಎಸ್‌ಐ ನೇಮಕಾತಿ ಪರೀಕ್ಷೆ ನಡೆದಿದ್ದ ಹಿನ್ನೆಲೆಯಲ್ಲಿ ಅವರನ್ನೂ ವಿಚಾರಣೆ ಮಾಡಲಾಗುತ್ತಿದೆ.

ಪಿಎಸ್‌ಐ ಅಕ್ರಮ ಕೇಸ್: ಎಡಿಜಿಪಿ ಪೌಲ್‌ 5 ಗಂಟೆ ವಿಚಾರಣೆ

ಬುಧವಾರ ಮತ್ತು ಗುರುವಾರ ಎಸ್‌ಪಿ ದರ್ಜೆಯ ತನಿಖಾಧಿಕಾರಿ ಎಡಿಜಿಪಿ ಅಮೃತ್‌ ಪೌಲ್‌ ಅವರನ್ನು ಸುದೀರ್ಘ ವಿಚಾರಣೆ ಮಾಡಿದ್ದರು. ಎಡಿಜಿಪಿ ಅವರು ನೀಡಿದ ಉತ್ತರ ತೃಪ್ತಿಕರವಾಗದ ಪರಿಣಾಮ ಶುಕ್ರವಾರವೂ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು. ಇದೀಗ ಅಮೃತ್‌ ಪೌಲ್‌ ವೈಯಕ್ತಿಕ ಕಾರಣ ಮುಂದಿಟ್ಟು ವಿಚಾರಣೆಗೆ ಗೈರು ಹಾಜರಾಗಿದ್ದಾರೆ.

ಈಗಾಗಲೇ ಪಿಎಸ್‌ಐ ನೇಮಕಾತಿ ಅವ್ಯವಹಾರ ಪ್ರಕರಣ ಸಂಬಂಧ ಅಭ್ಯರ್ಥಿಗಳು, ಪರೀಕ್ಷಾ ಕೇಂದ್ರದ ಮೇಲ್ವಿಚಾರಕರು, ಮಧ್ಯವರ್ತಿಗಳು, ಪೊಲೀಸ್‌ ಅಧಿಕಾರಿಗಳು, ನೇಮಕಾತಿ ವಿಭಾಗದ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಸಿಐಡಿ ಬಂಧಿಸಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ದಶದಿಕ್ಕುಗಳಿಂದ ಕರ್ನಾಟಕಕ್ಕೆ ಡ್ರಗ್ಸ್‌ ಗಂಡಾಂತರ
Karnataka News Live: ವೈದ್ಯರ ವರದಿ ಬಳಿಕ ಜೈಲಿನಲ್ಲಿ ನಟ ದರ್ಶನ್‌ಗೆ ಫಿಸಿಯೋಥೆರಪಿ ಚಿಕಿತ್ಸೆ ಸ್ಥಗಿತ